ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಗಂಜೂರು ಗ್ರಾ.ಪಂ. ಅವಿರೋಧ ಆಯ್ಕೆ

Last Updated 14 ಡಿಸೆಂಬರ್ 2020, 4:42 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ದೊಡ್ಡಗಂಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಿಮಠ ಕ್ಷೇತ್ರದಿಂದ ಜೆಡಿಎಸ್ ಬೆಂಬಲಿತ ಇಬ್ಬರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಿದ್ಧಿಮಠ ಕ್ಷೇತ್ರದ ಎರಡು ಸ್ಥಾನಗಳಿಗೆ ಮುಜೀಬ್ ಉನ್ನೀಸಾ ಮತ್ತು ಅಪ್ಸರ್ ಪಾಷಾ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಶನಿವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಎರಡು ನಾಮಪತ್ರಗಳು ಅಂಗೀಕಾರಗೊಂಡಿವೆ. ಹೀಗಾಗಿ ಇಬ್ಬರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಪದಾಧಿಕಾರಿಗಳ ಆಯ್ಕೆ: ಕರ್ನಾಟಕ ರಕ್ಷಣಾ ವೇದಿಕೆಯ (ಕನ್ನಡಿಗರ ಸಾರಥ್ಯದಲ್ಲಿ) ತಾಲ್ಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆರ್. ಲಕ್ಷ್ಮಿಪತಿ ಹಾಗೂ ಜಿಲ್ಲಾ ಖಜಾಂಚಿಯಾಗಿ ಕೆ.ಎಲ್. ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎನ್. ಅಂಬರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ
ಅಧ್ಯಕ್ಷರ ನೇಮಕ ಮಾಡಲಾಯಿತು.

ನಂತರ ಮಾತನಾಡಿದ ಅವರು, ಸರ್ಕಾರದಿಂದಲೇ ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ. ರಾಜಕೀಯದಹಿನ್ನೆಲೆಯಲ್ಲಿ ಮತ ಗಳಿಸಲು ಸರ್ಕಾರವೇ ಕನ್ನಡಿಗರನ್ನು ವಂಚಿಸುತ್ತಿದೆ. ಸರ್ಕಾರದ ನೀತಿಗಳನ್ನು ವಿರೋಧಿಸಿ ಹೋರಾಟಗಳನ್ನು ರೂಪಿಸಬೇಕಾಗಿದೆ. ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೋರಾಟಗಳಿಗೆ ಸಿದ್ಧರಾಗಬೇಕು ಎಂದರು.

ಜಿಲ್ಲಾ ಸಂಚಾಲಕ ಲಿಂಗಪ್ಪ, ತಾಲ್ಲೂಕು ಘಟಕದ ಉಪಾಧ್ಯಕ್ಷ ಕೆ.ಆರ್. ಮುರಳಿಮೋಹನ್, ಕಾರ್ಯದರ್ಶಿ ಎ. ಮಂಜುನಾಥ್, ಮುಖಂಡರಾದ ರವಿ, ಕಾಡಹಳ್ಳಿ ರಾಜಕುಮಾರ್, ಹರೀಶ್, ಕಲ್ಯಾಣಪ್ರಭು, ಕೆ. ಸುಧಾಕರ್, ಎನ್. ಮಂಜುನಾಥ್, ಪಾಪಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT