ಚರಂಡಿ ಕಾಮಗಾರಿಯಿಂದ ಬಡಾವಣೆಯು ಪ್ರಗತಿಯಾಗುತ್ತದೆ ಎಂಬ ಸಂತಸವಿದೆ. ಆದರೆ, ಕಾಮಗಾರಿಯ ಜವಾಬ್ದಾರಿ ಹೊತ್ತ ಗುತ್ತಿಗೆದಾರರು, ಅಧಿಕಾರಿಗಳ ಅವೈಜ್ಞಾನಿಕ ಆದೇಶದಿಂದ ವಿನಾಕಾರಣ ಬಡಾವಣೆಯಲ್ಲಿನ ಜನತೆಗೆ ತೊಂದರೆ ನೀಡುತ್ತಿದ್ದಾರೆ. ಜತೆಗೆ ಮೂಲಸೌಕರ್ಯ ಕಲ್ಪಿಸಬೇಕಾದ ಅಧಿಕಾರಿಗಳೇ ಈ ವಿಚಾರದಲ್ಲಿ ದಬ್ಬಾಳಿಕೆ ನಡೆಸುವ ಮೂಲಕ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.