‘ಚುನಾವಣಾ ಸಮಯದಲ್ಲಿ ಊರಿಗೆ ಬಂದಾಗ ಸಿಂಗಾಪೂರ ಮಾಡುವ ಭರವಸೆ ನೀಡಿ ಬಳಿಕ ಮಾಯವಾಗುವ ರಾಜಕಾರಣಿಗಳಿಂದಾಗಿ ಜನಸಾಮಾನ್ಯರು ಬದುಕು ಸಂಕಷ್ಟಕ್ಕೆ ಸಿಲುಕಿದೆ. ಚರಂಡಿ ಸಮಸ್ಯೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದರೆ, ಅದು ಜಿಲ್ಲಾ ಪಂಚಾಯಿತಿಗೆ ಸಂಬಂಧಿಸಿದ್ದು ಎಂದು ಬೇರೆಡೆ ಬೊಟ್ಟು ತೋರಿಸುತ್ತಾರೆ. ಸಂಬಂಧಪಟ್ಟವರು ಇತ್ತ ತಲೆ ಹಾಕುವುದೇ ಇಲ್ಲ’ ಎಂದು ಸ್ಥಳೀಯ ನಿವಾಸಿ, ‘ಉಸಿರಿಗಾಗಿ ಹಸಿರು’ ಸಂಘಟನೆಯ ಟ್ರಸ್ಟಿ ಎನ್.ಗಂಗಾಧರ್ ರೆಡ್ಡಿ ಬೇಸರ ವ್ಯಕ್ತಪಡಿಸಿದರು.