ಎಲ್ಲ ತಾಲ್ಲೂಕುಗಳಲ್ಲಿಯೂ ಗುರುವಾರ ಜನಜೀವನ ಎಂದಿನಂತಿತ್ತು. ನಸುಕಿನಿಂದಲೇ ವಾಹನ ಸಂಚಾರ ಸುಗಮವಾಗಿತ್ತು. ಹಾಲು, ಹಣ್ಣು, ತರಕಾರಿ, ಆರೋಗ್ಯ ಸೇವೆ, ಔಷಧಿ ಅಂಗಡಿಗಳು, ಪೆಟ್ರೋಲ್ ಬಂಕ್ಗಳು, ಹೊಟೇಲ್ಗಳು ಎಂದಿನಂತೆ ವಹಿವಾಟು ನಡೆಸಿದವು. ಎಲ್ಲ ಸೇವೆಗಳು ಸುಲಲಿತವಾಗಿ ಜನರಿಗೆ ತಲುಪಿದವು. ಹೀಗಾಗಿ, ಬಂದ್ನ ಚಿತ್ರಣವೇ ಎಲ್ಲಿಯೂ ಗೋಚರಿಸಲಿಲ್ಲ.