ಕೊಳವೆ ಬಾವಿಗಳಲ್ಲಿ 2-3 ದಿನಗಳಿಗೊಮ್ಮೆ ಪೂರೈಕೆ ಮಾಡುವಷ್ಟು ನೀರು ಇದೆ. ಕೊಳವೆ ಬಾವಿ ಮತ್ತು ಕೈಪಂಪು ಕೆಟ್ಟು ಹೋಗಿವೆ. ಕುಡಿಯುವ ನೀರನ್ನು ಕೊಡಲು ಸಾಧ್ಯವಾಗದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಅವರು, ವಾರ್ಡ್ನಲ್ಲಿ ಸ್ವಚ್ಛತೆ, ಯುಜಿಡಿ ಸ್ವಚ್ಛತೆ ಸೇರಿದಂತೆ ಯಾವುದೇ ಕೆಲಸಗಳು ಸರಿಯಾಗಿನಡೆಯುತ್ತಿಲ್ಲ. ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದು, 4-5 ಸದಸ್ಯರ ವಾರ್ಡ್ ಕಾರ್ಯಗಳಿಗೆ ಸೀಮಿತರಾಗಿದ್ದಾರೆ ಎಂದು ದೂರಿದರು.