<p><strong>ಚಿಕ್ಕಬಳ್ಳಾಪುರ:</strong> ಉತ್ತರಪ್ರದೇಶದ ಹಾಥರಸ್ನಲ್ಲಿ ನಡೆದ ಯುವತಿ ಅತ್ಯಾಚಾರ– ಕೊಲೆ ಖಂಡಿಸಿವಕೀಲರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಅಲ್ಲಿನ ಸರ್ಕಾರವನ್ನು ಕೂಡಲೇ ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಉಪವಿಭಾಗಾಧಿಕಾರಿ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ, ‘ಉತ್ತರಪ್ರದೇಶದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಇಂದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ನಡೆದಿರುವುದೇ ಸಾಕ್ಷಿ’ ಎಂದು ಹೇಳಿದರು.</p>.<p>‘ಒಬ್ಬ ಬಡ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಮಾತ್ರವಲ್ಲದೇ, ಆ ಹೆಣ್ಣುಮಗಳನ್ನು ಅಲ್ಲಿನ ಅಧಿಕಾರಿಗಳು ಹಾಗೂ ಸರ್ಕಾರ ಸಾಯಿಸಿದೆ. ಜತೆಗೆ ಆಕೆಯ ಮೃತದೇಹವನ್ನು ಕುಟುಂಬಸ್ಥರಿಗೆ ವರ್ಗಾಯಿಸದೆ ರಾತ್ರೋರಾತ್ರಿ ಸುಟ್ಟುಹಾಕುವ ಪರಿಸ್ಥಿತಿ ಏನಿತ್ತು? ಇದರ ಹಿಂದಿನ ಒಳಮರ್ಮ ಜನತೆಗೆ ಜನತೆಗೆ ಗೊತ್ತಾಗಲೇ ಬೇಕು ಹಾಗಾಗಿ ಈ ಅತ್ಯಾಚಾರವನ್ನು ವಕೀಲರ ಸಂಘ ಖಂಡಿಸುತ್ತದೆ’ ಎಂದು ತಿಳಿಸಿದರು.</p>.<p>ವಕೀಲ ಆರ್.ಮಟಮಪ್ಪ ಮಾತನಾಡಿ, ‘ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರ ಸರ್ಕಾರದಲ್ಲಿ ಅತ್ಯಾಚಾರಗಳು, ದೌರ್ಜನ್ಯ ಘಟನೆಗಳು ಹೆಚ್ಚಾಗುತ್ತಿವೆ. ಅಲ್ಲಿನ ಸರ್ಕಾರ ಜನರ ಹಿತರಕ್ಷಣೆ ಮಾಡಲು ಸಂಪೂರ್ಣ ವಿಫಲವಾಗಿದೆ. ಅಲ್ಲಿ ಸಂವಿಧಾನದ ಆಶಯಗಳು ಮಣ್ಣುಪಾಲಾಗಿವೆ. ಮಾನವ ಹಕ್ಕುಗಳಿಗೆ ಧಕ್ಕೆಯಾಗಿವೆ’ ಎಂದು ಆರೋಪಿಸಿದರು.</p>.<p>‘ಉತ್ತರಪ್ರದೇಶ ಸರ್ಕಾರ ಆಡಳಿತದಲ್ಲಿ ವೈಫಲ್ಯಗೊಂಡಿದೆ. ಹಾಗಾಗಿ ರಾಷ್ಟ್ರಪತಿಗಳು ಅಲ್ಲಿನ ಸರ್ಕಾರ ವಜಾ ಮಾಡಿ, ರಾಷ್ಟ್ರಪತಿ ಆಡಳಿತ ಜಾರಿಯಾಗೊಳಿಸುವ ಮೂಲಕ ಕಾನೂನು ಸುವ್ಯವಸ್ಥೆ ಸರಿಪಡಿಸಬೇಕು. ಆ ಮೂಲಕ ಅಲ್ಲಿ ಭೀತಿಯಲ್ಲಿರುವ ದಲಿತರು ಹಾಗೂ ಹಿಂದುಳಿದವರಲ್ಲಿ ಆತ್ಮಸ್ಥೈರ್ಯ ತುಂಬಿ, ಪ್ರಜೆಗಳು ನೆಮ್ಮದಿಯಿಂದ ಬದುಕುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ದಿನಗಳಿಂದ ಉತ್ತರಪ್ರದೇಶದ ಸ್ಥಿತಿ ಗೊತ್ತಿದ್ದರೂ ಮೌನವಹಿಸಿರುವ ಉದ್ದೇಶ ಏನು ಎಂದು ಅವರೇ ದೇಶದ ಜನತೆಗೆ ತಿಳಿಸಬೇಕು. ಕೂಡಲೇ ತಪ್ಪಿತಸ್ಥ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಂಡು ದೇಶದ ಜನತೆಗೆ ವಿಶ್ವಾಸ ಮೂಡಿಸಬೇಕು’ ಎಂದು ಹೇಳಿದರು.</p>.<p>‘ಅತ್ಯಾಚಾರ ಪ್ರಕರಣದಲ್ಲಿ ಪಾಲಕರಿಗೆ ಶವ ಒಪ್ಪಿಸದೆ, ಅವರಿಗೆ ದಿಗ್ಭಂಧನ ವಿಧಿಸಿ, ಅಂತ್ಯ ಸಂಸ್ಕಾರಕ್ಕೂ ಅವಕಾಶ ಕಲ್ಪಿಸದೆ ರಾತ್ರಿಯೇ ಸುಟ್ಟು ಹಾಕಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಸಹ ಕ್ರಮ ತೆಗೆದುಕೊಳ್ಳಬೇಕು ಮತ್ತು ಆ ನೊಂದ ಕುಟುಂಬಕ್ಕೆ ರಕ್ಷಣೆಯಾಗಿ ನಿಲ್ಲಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ’ ಎಂದು ತಿಳಿಸಿದರು.</p>.<p>ವಕೀಲರ ಸಂಘದ ಕಾರ್ಯದರ್ಶಿ ಬಿ.ವಿನೋದ್ ಕುಮಾರ್, ಖಜಾಂಚಿ ಹರೀಶ್, ಪದಾಧಿಕಾರಿಗಳಾದ ಬಾಲಕೃಷ್ಣ ರಾಜು, ಮಹಮ್ಮದ್ ದಾವೂದ್, ಎಸ್.ಎನ್.ನಾಗರಾಜನ್, ಕಂಬದಹಳ್ಳಿ ಜಯರಾಮರೆಡ್ಡಿ, ಎಂ.ವೆಂಕಟೇಶಪ್ಪ, ಎನ್.ನರಸಿಂಹಪ್ಪ, ರಮೇಶ್, ತಿಮ್ಮಯ್ಯ, ಮುನಿಕೃಷ್ಣಪ್ಪ, ಶಿವರೆಡ್ಡಿ , ಗೋಪಿ, ಕುಪ್ಪಳ್ಳಿ ಶ್ರೀನಿವಾಸ್, ನರಸಿಂಹಮೂರ್ತಿ, ಮುರಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಉತ್ತರಪ್ರದೇಶದ ಹಾಥರಸ್ನಲ್ಲಿ ನಡೆದ ಯುವತಿ ಅತ್ಯಾಚಾರ– ಕೊಲೆ ಖಂಡಿಸಿವಕೀಲರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಅಲ್ಲಿನ ಸರ್ಕಾರವನ್ನು ಕೂಡಲೇ ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಉಪವಿಭಾಗಾಧಿಕಾರಿ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ, ‘ಉತ್ತರಪ್ರದೇಶದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಇಂದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ನಡೆದಿರುವುದೇ ಸಾಕ್ಷಿ’ ಎಂದು ಹೇಳಿದರು.</p>.<p>‘ಒಬ್ಬ ಬಡ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಮಾತ್ರವಲ್ಲದೇ, ಆ ಹೆಣ್ಣುಮಗಳನ್ನು ಅಲ್ಲಿನ ಅಧಿಕಾರಿಗಳು ಹಾಗೂ ಸರ್ಕಾರ ಸಾಯಿಸಿದೆ. ಜತೆಗೆ ಆಕೆಯ ಮೃತದೇಹವನ್ನು ಕುಟುಂಬಸ್ಥರಿಗೆ ವರ್ಗಾಯಿಸದೆ ರಾತ್ರೋರಾತ್ರಿ ಸುಟ್ಟುಹಾಕುವ ಪರಿಸ್ಥಿತಿ ಏನಿತ್ತು? ಇದರ ಹಿಂದಿನ ಒಳಮರ್ಮ ಜನತೆಗೆ ಜನತೆಗೆ ಗೊತ್ತಾಗಲೇ ಬೇಕು ಹಾಗಾಗಿ ಈ ಅತ್ಯಾಚಾರವನ್ನು ವಕೀಲರ ಸಂಘ ಖಂಡಿಸುತ್ತದೆ’ ಎಂದು ತಿಳಿಸಿದರು.</p>.<p>ವಕೀಲ ಆರ್.ಮಟಮಪ್ಪ ಮಾತನಾಡಿ, ‘ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರ ಸರ್ಕಾರದಲ್ಲಿ ಅತ್ಯಾಚಾರಗಳು, ದೌರ್ಜನ್ಯ ಘಟನೆಗಳು ಹೆಚ್ಚಾಗುತ್ತಿವೆ. ಅಲ್ಲಿನ ಸರ್ಕಾರ ಜನರ ಹಿತರಕ್ಷಣೆ ಮಾಡಲು ಸಂಪೂರ್ಣ ವಿಫಲವಾಗಿದೆ. ಅಲ್ಲಿ ಸಂವಿಧಾನದ ಆಶಯಗಳು ಮಣ್ಣುಪಾಲಾಗಿವೆ. ಮಾನವ ಹಕ್ಕುಗಳಿಗೆ ಧಕ್ಕೆಯಾಗಿವೆ’ ಎಂದು ಆರೋಪಿಸಿದರು.</p>.<p>‘ಉತ್ತರಪ್ರದೇಶ ಸರ್ಕಾರ ಆಡಳಿತದಲ್ಲಿ ವೈಫಲ್ಯಗೊಂಡಿದೆ. ಹಾಗಾಗಿ ರಾಷ್ಟ್ರಪತಿಗಳು ಅಲ್ಲಿನ ಸರ್ಕಾರ ವಜಾ ಮಾಡಿ, ರಾಷ್ಟ್ರಪತಿ ಆಡಳಿತ ಜಾರಿಯಾಗೊಳಿಸುವ ಮೂಲಕ ಕಾನೂನು ಸುವ್ಯವಸ್ಥೆ ಸರಿಪಡಿಸಬೇಕು. ಆ ಮೂಲಕ ಅಲ್ಲಿ ಭೀತಿಯಲ್ಲಿರುವ ದಲಿತರು ಹಾಗೂ ಹಿಂದುಳಿದವರಲ್ಲಿ ಆತ್ಮಸ್ಥೈರ್ಯ ತುಂಬಿ, ಪ್ರಜೆಗಳು ನೆಮ್ಮದಿಯಿಂದ ಬದುಕುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ದಿನಗಳಿಂದ ಉತ್ತರಪ್ರದೇಶದ ಸ್ಥಿತಿ ಗೊತ್ತಿದ್ದರೂ ಮೌನವಹಿಸಿರುವ ಉದ್ದೇಶ ಏನು ಎಂದು ಅವರೇ ದೇಶದ ಜನತೆಗೆ ತಿಳಿಸಬೇಕು. ಕೂಡಲೇ ತಪ್ಪಿತಸ್ಥ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಂಡು ದೇಶದ ಜನತೆಗೆ ವಿಶ್ವಾಸ ಮೂಡಿಸಬೇಕು’ ಎಂದು ಹೇಳಿದರು.</p>.<p>‘ಅತ್ಯಾಚಾರ ಪ್ರಕರಣದಲ್ಲಿ ಪಾಲಕರಿಗೆ ಶವ ಒಪ್ಪಿಸದೆ, ಅವರಿಗೆ ದಿಗ್ಭಂಧನ ವಿಧಿಸಿ, ಅಂತ್ಯ ಸಂಸ್ಕಾರಕ್ಕೂ ಅವಕಾಶ ಕಲ್ಪಿಸದೆ ರಾತ್ರಿಯೇ ಸುಟ್ಟು ಹಾಕಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಸಹ ಕ್ರಮ ತೆಗೆದುಕೊಳ್ಳಬೇಕು ಮತ್ತು ಆ ನೊಂದ ಕುಟುಂಬಕ್ಕೆ ರಕ್ಷಣೆಯಾಗಿ ನಿಲ್ಲಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ’ ಎಂದು ತಿಳಿಸಿದರು.</p>.<p>ವಕೀಲರ ಸಂಘದ ಕಾರ್ಯದರ್ಶಿ ಬಿ.ವಿನೋದ್ ಕುಮಾರ್, ಖಜಾಂಚಿ ಹರೀಶ್, ಪದಾಧಿಕಾರಿಗಳಾದ ಬಾಲಕೃಷ್ಣ ರಾಜು, ಮಹಮ್ಮದ್ ದಾವೂದ್, ಎಸ್.ಎನ್.ನಾಗರಾಜನ್, ಕಂಬದಹಳ್ಳಿ ಜಯರಾಮರೆಡ್ಡಿ, ಎಂ.ವೆಂಕಟೇಶಪ್ಪ, ಎನ್.ನರಸಿಂಹಪ್ಪ, ರಮೇಶ್, ತಿಮ್ಮಯ್ಯ, ಮುನಿಕೃಷ್ಣಪ್ಪ, ಶಿವರೆಡ್ಡಿ , ಗೋಪಿ, ಕುಪ್ಪಳ್ಳಿ ಶ್ರೀನಿವಾಸ್, ನರಸಿಂಹಮೂರ್ತಿ, ಮುರಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>