ಸರಸ್ವತಮ್ಮ ಮಾತನಾಡಿ, ‘ಕೋವಿಡ್ 19 ತುರ್ತು ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ತಮ್ಮ ಜೀವದ ಹಂಗು ತೊರೆದು ಮನೆಮನೆಗೆ ತೆರಳಿ ಕಾರ್ಯನಿರ್ವಹಿಸಿರುವ ಸಿಬ್ಬಂದಿಗೆ ಮೊದಲ ಹಂತದ ಲಸಿಕೆ ನೀಡುತ್ತಿರುವುದು ಸಂತಸದ ವಿಚಾರವಾಗಿದೆ. ಇದರಿಂದ ಸಂಕಷ್ಟದ ಸಂದರ್ಭದಲ್ಲಿ ಕೈ ಹಿಡಿದಿರುವ ವಾರಿಯರ್ಸ್ ಗೆ ಲಸಿಕೆ ನೀಡುತ್ತಿರುವುದು ನೆಮ್ಮದಿ ತಂದಿದೆ. ಎಲ್ಲ ವಾರಿಯರ್ಗಳಿಗೆ ಇದು ವರದಾನವಾಗಿದ್ದು, ಸದುಪಯೋಗ ಪಡೆದುಕೊಳ್ಳಬೇಕಾಗಿದೆ’ ಎಂದು ಹೇಳಿದರು.