<p><strong>ಚಿಕ್ಕಬಳ್ಳಾಪುರ: </strong>ಜಿಲ್ಲೆಯಲ್ಲಿ ಒಟ್ಟು 232 ಲಸಿಕಾ ಕೇಂದ್ರಗಳಲ್ಲಿ ಜೂ.21 ರಂದು ಕೋವಿಡ್-19 ಲಸಿಕಾ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ 30 ಸಾವಿರ ಜನರಿಗೆ ಕೋವಿಡ್ ಲಸಿಕೆ ಹಾಕುವ ಗುರಿ ಇದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.</p>.<p>ಜಿಲ್ಲಾ ಸರ್ಕಾರಿ ಆಸ್ಪತ್ರೆ, ಎಲ್ಲ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು, ನಾಲ್ಕು ನಗರ ಆರೋಗ್ಯ ಕೇಂದ್ರಗಳು, ಎರಡು ಸಮುದಾಯ ಆರೋಗ್ಯ ಕೇಂದ್ರಗಳು, 57 ಪ್ರಾಥಮಿಕ ಆರೋಗ್ಯ ಕೇಂದ್ರಗಳು,ನಗರಸಭೆ, ಪುರಸಭೆಗಳು, 157 ಗ್ರಾಮ ಪಂಚಾಯಿತಿಗಳಲ್ಲಿ ಲಸಿಕಾ ಮೇಳ ನಡೆಯಲಿದೆ ಎಂದಿದ್ದಾರೆ.</p>.<p>ಕೊರೊನಾ ಸೋಂಕನ್ನು ಪೂರ್ಣವಾಗಿ ತೊಲಗಿಸಬೇಕಾದರೆ ಲಸಿಕೆ ಹಾಕುವುದೇ ಅಂತಿಮ ಅಸ್ತ್ರವಾಗಿದೆ. ಇದನ್ನು ಸರ್ಕಾರ ಮನಗಂಡು ಲಸಿಕೆ ಹಾಕುವುದನ್ನು ಮತ್ತಷ್ಟು ವೇಗಗೊಳಿಸಿದೆ. ಕೋವಿಡ್-19 ಲಸಿಕಾ ಮೇಳ ಆಯೊಜಿಸುವಂತೆ ಆದೇಶಿಸಿದೆ. ವಿವಿಧ ಆದ್ಯತಾ ಗುಂಪಿನವರಿಗೆ ಮೇಳ ಹಮ್ಮಿಕೊಳ್ಳಲಾಗಿದೆ.</p>.<p>ಆರೋಗ್ಯ ಇಲಾಖೆ ಸೇರಿದಂತೆ ಜಿಲ್ಲಾಡಳಿತದ ಎಲ್ಲ ಅಧಿಕಾರಿ, ಸಿಬ್ಬಂದಿ ಉತ್ತಮ ಕೆಲಸ ಮಾಡಿ 30,000 ಲಸಿಕೆ ಹಾಕುವ ಗುರಿ ತಲುಪಬೇಕು. ಜನರು ಸಹ ಮೇಳವನ್ನು ಯಶಸ್ವಿಗೊಳಿಸುವ ಮೂಲಕ 7ನೇ ಅಂತರರಾಷ್ಟ್ರೀಯ ಯೋಗಾ ದಿನಾಚರಣೆ ಆಚರಿಸಬೇಕು ಎಂದು ಮನವಿಮಾಡಿದ್ದಾರೆ.</p>.<p>ಭಾರತದಲ್ಲಿ ಕೊರೊನಾ ಮೂರನೇ ಅಲೆ ಬರುತ್ತದೆ ಎಂದು ವಿಶ್ವಸಂಸ್ಥೆಯು ಅಭಿಪ್ರಾಯಪಟ್ಟಿದೆ. ಮಕ್ಕಳ ಮೇಲೆ ದುಷ್ಪರಿಣಾಮ ಬೀರುವುದರ ಬಗ್ಗೆ ಖಾತರಿ ಪಡಿಸಿಲ್ಲ. ಆದರೂ 3 ಅಲೆ ಬಂದರೆ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಹಿಂದಿನಂತೆ ಜಿಲ್ಲೆಯ ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕುಎಂದು ಹೇಳಿದ್ದಾರೆ.</p>.<p>ಜೂ.21 ರಿಂದ ಸರ್ಕಾರ ಕೆಲವು ಕೋವಿಡ್ ನಿಬಂಧನೆಗಳನ್ನು ಜಿಲ್ಲೆಯಲ್ಲಿ ಸಡಿಲಿಸಿದೆ. ಆದರೆ ಜನರು ನಿರ್ಲಕ್ಷ್ಯ ವಹಿಸಿದರೆ ಆಪತ್ತಿಗೆ ಒಳಗಾಗುವ ಸಂಭವ ಇದೆ. ಇಂತಹ ಅವಘಡಕ್ಕೆ ಜನರು ಅವಕಾಶ ಮಾಡಿಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಜಿಲ್ಲೆಯಲ್ಲಿ ಒಟ್ಟು 232 ಲಸಿಕಾ ಕೇಂದ್ರಗಳಲ್ಲಿ ಜೂ.21 ರಂದು ಕೋವಿಡ್-19 ಲಸಿಕಾ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ 30 ಸಾವಿರ ಜನರಿಗೆ ಕೋವಿಡ್ ಲಸಿಕೆ ಹಾಕುವ ಗುರಿ ಇದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.</p>.<p>ಜಿಲ್ಲಾ ಸರ್ಕಾರಿ ಆಸ್ಪತ್ರೆ, ಎಲ್ಲ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು, ನಾಲ್ಕು ನಗರ ಆರೋಗ್ಯ ಕೇಂದ್ರಗಳು, ಎರಡು ಸಮುದಾಯ ಆರೋಗ್ಯ ಕೇಂದ್ರಗಳು, 57 ಪ್ರಾಥಮಿಕ ಆರೋಗ್ಯ ಕೇಂದ್ರಗಳು,ನಗರಸಭೆ, ಪುರಸಭೆಗಳು, 157 ಗ್ರಾಮ ಪಂಚಾಯಿತಿಗಳಲ್ಲಿ ಲಸಿಕಾ ಮೇಳ ನಡೆಯಲಿದೆ ಎಂದಿದ್ದಾರೆ.</p>.<p>ಕೊರೊನಾ ಸೋಂಕನ್ನು ಪೂರ್ಣವಾಗಿ ತೊಲಗಿಸಬೇಕಾದರೆ ಲಸಿಕೆ ಹಾಕುವುದೇ ಅಂತಿಮ ಅಸ್ತ್ರವಾಗಿದೆ. ಇದನ್ನು ಸರ್ಕಾರ ಮನಗಂಡು ಲಸಿಕೆ ಹಾಕುವುದನ್ನು ಮತ್ತಷ್ಟು ವೇಗಗೊಳಿಸಿದೆ. ಕೋವಿಡ್-19 ಲಸಿಕಾ ಮೇಳ ಆಯೊಜಿಸುವಂತೆ ಆದೇಶಿಸಿದೆ. ವಿವಿಧ ಆದ್ಯತಾ ಗುಂಪಿನವರಿಗೆ ಮೇಳ ಹಮ್ಮಿಕೊಳ್ಳಲಾಗಿದೆ.</p>.<p>ಆರೋಗ್ಯ ಇಲಾಖೆ ಸೇರಿದಂತೆ ಜಿಲ್ಲಾಡಳಿತದ ಎಲ್ಲ ಅಧಿಕಾರಿ, ಸಿಬ್ಬಂದಿ ಉತ್ತಮ ಕೆಲಸ ಮಾಡಿ 30,000 ಲಸಿಕೆ ಹಾಕುವ ಗುರಿ ತಲುಪಬೇಕು. ಜನರು ಸಹ ಮೇಳವನ್ನು ಯಶಸ್ವಿಗೊಳಿಸುವ ಮೂಲಕ 7ನೇ ಅಂತರರಾಷ್ಟ್ರೀಯ ಯೋಗಾ ದಿನಾಚರಣೆ ಆಚರಿಸಬೇಕು ಎಂದು ಮನವಿಮಾಡಿದ್ದಾರೆ.</p>.<p>ಭಾರತದಲ್ಲಿ ಕೊರೊನಾ ಮೂರನೇ ಅಲೆ ಬರುತ್ತದೆ ಎಂದು ವಿಶ್ವಸಂಸ್ಥೆಯು ಅಭಿಪ್ರಾಯಪಟ್ಟಿದೆ. ಮಕ್ಕಳ ಮೇಲೆ ದುಷ್ಪರಿಣಾಮ ಬೀರುವುದರ ಬಗ್ಗೆ ಖಾತರಿ ಪಡಿಸಿಲ್ಲ. ಆದರೂ 3 ಅಲೆ ಬಂದರೆ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಹಿಂದಿನಂತೆ ಜಿಲ್ಲೆಯ ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕುಎಂದು ಹೇಳಿದ್ದಾರೆ.</p>.<p>ಜೂ.21 ರಿಂದ ಸರ್ಕಾರ ಕೆಲವು ಕೋವಿಡ್ ನಿಬಂಧನೆಗಳನ್ನು ಜಿಲ್ಲೆಯಲ್ಲಿ ಸಡಿಲಿಸಿದೆ. ಆದರೆ ಜನರು ನಿರ್ಲಕ್ಷ್ಯ ವಹಿಸಿದರೆ ಆಪತ್ತಿಗೆ ಒಳಗಾಗುವ ಸಂಭವ ಇದೆ. ಇಂತಹ ಅವಘಡಕ್ಕೆ ಜನರು ಅವಕಾಶ ಮಾಡಿಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>