ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವ ವಿಚಾರದಲ್ಲಿ 2020ರಲ್ಲಿ ನಡೆದ ಎರಡನೇ ವಾಲ್ಮೀಕಿ ಜಾತ್ರೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಶೇ 7.5ರಷ್ಟು ಮೀಸಲಾತಿ ನೀಡದಿದ್ದರೆ ಆಮರಣಾಂತ ಉಪವಾಸ ಮಾಡುವೆ ಎಂದು ಮೂರನೇ ವರ್ಷದ ವಾಲ್ಮೀಕಿ ಜಾತ್ರೆಯಲ್ಲಿ ಎಚ್ಚರಿಸಿದ್ದೆ. ಆಗ ಯಡಿಯೂರಪ್ಪ ಅವರು ನನ್ನ ಮೇಲೆ ನಂಬಿಕೆಯಿಡಿ ಎಂದರು. ಈಗ ಮಾಜಿ ಮುಖ್ಯಮಂತ್ರಿಗಳಾಗಿ ಮೊಮ್ಮಕ್ಕಳನ್ನು ಆಡಿಸುತ್ತಿದ್ದಾರೆ. ನಮ್ಮನ್ನು ಮತಬ್ಯಾಂಕ್ ಮಾಡಿಟ್ಟುಕೊಳ್ಳುತ್ತಿದ್ದಾರೆ ಎನ್ನುವುದನ್ನು ಸಮುದಾಯ ಅರ್ಧ ಮಾಡಿಕೊಳ್ಳಬೇಕು. ಅಧಿಕಾರಕ್ಕೆ ಬಂದ ಮೇಲೆ ಸಮುದಾಯದ ಆಶೋತ್ತರಗಳನ್ನು ಮರೆಯುತ್ತಿದ್ದಾರೆ ಎಂದರು.