<p><strong>ಚಿಂತಾಮಣಿ:</strong> ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಜನದಟ್ಟಣೆ ತಪ್ಪಿಸಲು ಗುರುವಾರ ಮತ್ತು ಶುಕ್ರವಾರ ಹಬ್ಬದ ಸಾಮಗ್ರಿ ಮಾರಾಟಕ್ಕಾಗಿ ನಗರದ ವಿದ್ಯಾಗಣಪತಿ ರಂಗ ಮಂದಿರದ ಮುಂಭಾಗದಲ್ಲಿ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ತಿಳಿಸಿದರು.</p>.<p>ನಗರಸಭೆ ಮತ್ತು ಪೊಲೀಸ್ ಇಲಾಖೆ ಅಂಬೇಡ್ಕರ್ ಭವನದ ಸಮೀಪದಲ್ಲಿ ಬುಧವಾರ ಕರೆದಿದ್ದ ವರ್ತಕರ ಮತ್ತು ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>ನಗರದ ಬೆಂಗಳೂರು ರಸ್ತೆ, ಜೋಡಿ ರಸ್ತೆಯಲ್ಲಿ ಹೂ, ಹಣ್ಣು ಮತ್ತಿತರ ಹಬ್ಬದ ಸಾಮಗ್ರಿಗಳ ವ್ಯಾಪಾರ ಮಾಡುವುದರಿಂದ ಸಾರ್ವಜನಿಕರ ಮತ್ತು ವಾಹನಗಳ ಸಂಚಾರ ವ್ಯವಸ್ಥೆ ಹದಗೆಡುತ್ತದೆ. ರಸ್ತೆಗಳಲ್ಲಿ ವ್ಯಾಪಾರ ಮಾಡಬಾರದು. ಗ್ರಂಥಾಲಯದ ಮುಂಭಾಗದಲ್ಲಿ ಮತ್ತು ಹಿಂಬದಿಯಲ್ಲಿ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.</p>.<p>ಗ್ರಂಥಾಲಯದ ಮುಂಭಾಗ ಮತ್ತು ಹಿಂಭಾಗ ಸ್ವಚ್ಛಗೊಳಿಸಲಾಗುವುದು. ತಳ್ಳುವ ಗಾಡಿ, ಬೀದಿಬದಿ ವ್ಯಾಪಾರಿಗಳು ಅಲ್ಲೇ ವ್ಯಾಪಾರ ಮಾಡಬೇಕು. ಹೂ, ಹಣ್ಣು, ಸೇರಿದಂತೆ ಹಬ್ಬದ ಎಲ್ಲ ಸಾಮಗ್ರಿಗಳು ಒಂದೇ ಸ್ಥಳದಲ್ಲಿ ದೊರೆಯುವುದರಿಂದ ನಗರದ ನಾಗರಿಕರಿಗೂ ಅನುಕೂಲವಾಗುತ್ತದೆ ಎಂದರು.</p>.<p>ಡಿವೈಎಸ್ಪಿ ಮುರಳೀಧರ್, ನಗರಠಾಣೆಯ ಇನ್ಸ್ಪೆಕ್ಟರ್ ವಿಜಿಕುಮಾರ್, ಸಿ.ಕೆ.ಬಾಬು, ಆರತಿ, ವಿಜಯಕುಮಾರ್, ವ್ಯಾಪಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಜನದಟ್ಟಣೆ ತಪ್ಪಿಸಲು ಗುರುವಾರ ಮತ್ತು ಶುಕ್ರವಾರ ಹಬ್ಬದ ಸಾಮಗ್ರಿ ಮಾರಾಟಕ್ಕಾಗಿ ನಗರದ ವಿದ್ಯಾಗಣಪತಿ ರಂಗ ಮಂದಿರದ ಮುಂಭಾಗದಲ್ಲಿ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ತಿಳಿಸಿದರು.</p>.<p>ನಗರಸಭೆ ಮತ್ತು ಪೊಲೀಸ್ ಇಲಾಖೆ ಅಂಬೇಡ್ಕರ್ ಭವನದ ಸಮೀಪದಲ್ಲಿ ಬುಧವಾರ ಕರೆದಿದ್ದ ವರ್ತಕರ ಮತ್ತು ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>ನಗರದ ಬೆಂಗಳೂರು ರಸ್ತೆ, ಜೋಡಿ ರಸ್ತೆಯಲ್ಲಿ ಹೂ, ಹಣ್ಣು ಮತ್ತಿತರ ಹಬ್ಬದ ಸಾಮಗ್ರಿಗಳ ವ್ಯಾಪಾರ ಮಾಡುವುದರಿಂದ ಸಾರ್ವಜನಿಕರ ಮತ್ತು ವಾಹನಗಳ ಸಂಚಾರ ವ್ಯವಸ್ಥೆ ಹದಗೆಡುತ್ತದೆ. ರಸ್ತೆಗಳಲ್ಲಿ ವ್ಯಾಪಾರ ಮಾಡಬಾರದು. ಗ್ರಂಥಾಲಯದ ಮುಂಭಾಗದಲ್ಲಿ ಮತ್ತು ಹಿಂಬದಿಯಲ್ಲಿ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.</p>.<p>ಗ್ರಂಥಾಲಯದ ಮುಂಭಾಗ ಮತ್ತು ಹಿಂಭಾಗ ಸ್ವಚ್ಛಗೊಳಿಸಲಾಗುವುದು. ತಳ್ಳುವ ಗಾಡಿ, ಬೀದಿಬದಿ ವ್ಯಾಪಾರಿಗಳು ಅಲ್ಲೇ ವ್ಯಾಪಾರ ಮಾಡಬೇಕು. ಹೂ, ಹಣ್ಣು, ಸೇರಿದಂತೆ ಹಬ್ಬದ ಎಲ್ಲ ಸಾಮಗ್ರಿಗಳು ಒಂದೇ ಸ್ಥಳದಲ್ಲಿ ದೊರೆಯುವುದರಿಂದ ನಗರದ ನಾಗರಿಕರಿಗೂ ಅನುಕೂಲವಾಗುತ್ತದೆ ಎಂದರು.</p>.<p>ಡಿವೈಎಸ್ಪಿ ಮುರಳೀಧರ್, ನಗರಠಾಣೆಯ ಇನ್ಸ್ಪೆಕ್ಟರ್ ವಿಜಿಕುಮಾರ್, ಸಿ.ಕೆ.ಬಾಬು, ಆರತಿ, ವಿಜಯಕುಮಾರ್, ವ್ಯಾಪಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>