ಇಸಿಒ ಭಾಸ್ಕರ ಗೌಡ ಮಾತನಾಡಿ, ರಾಷ್ಟ್ರದ ಪ್ರಗತಿಯು ಯುವಪೀಳಿಗೆಯ ಕೈಯಲ್ಲಿದೆ. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಮತದಾನ ಮಾಡಿ, ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಭಾರತದ ಸಂವಿಧಾನದ ಪ್ರಕಾರ ಚುನಾವಣಾ ಆಯೋಗವು 18 ವರ್ಷ ಮೇಲ್ಪಟ್ಟವರಿಗೆ ಮತದಾನದ ಅವಕಾಶ ನೀಡಿದೆ. ವಿದ್ಯಾರ್ಥಿಗಳು ತಮ್ಮ ಕುಟುಂಬ, ನೆರೆಹೊರೆ, ಹಳ್ಳಿಗಳಲ್ಲಿ ಈ ಬಗ್ಗೆ ತಿಳಿಹೇಳಬೇಕು ಎಂದರು.