<p><strong>ಗುಡಿಬಂಡೆ: </strong>ಸೌಲಭ್ಯಗಳಿಗಾಗಿ ಸಾರ್ವಜನಿಕರು ಕಚೇರಿಗಳಿಗೆ ಅಲೆಯಬೇಕಿಲ್ಲ. ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ತೆರಳಿ ಕಂದಾಯ ಇಲಾಖೆಯ ಮಾಹಿತಿ. ಸೌಲಭ್ಯಗಳ ಬಗ್ಗೆ ತಿಳಿಸುತ್ತಿದ್ದಾರೆ.</p>.<p>ಜಿಲ್ಲಾಧಿಕಾರಿ, ಶಾಸಕರ ಸೂಚನೆಯಂತೆ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೇ ತಲುಪಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಗುಡಿಬಂಡೆ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಚಾಲನೆ ನೀಡಿದ್ದಾರೆ.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ಉಲ್ಲೋಡು ಕಂದಾಯ ವೃತ್ತದ ಪ್ರತಿ ಹಳ್ಳಿಯ ಮನೆ ಮನೆಗೆ ತೆರಳಿ ಸಾಮಾಜಿಕ ಭದ್ರತಾ ಯೋಜನೆ, ಫೌತಿವಾರು ಖಾತೆ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.</p>.<p>ಹಿರಿಯ ನಾಗರೀಕರು, ಅಂಗವಿಕಲರಿಗೆ ಹಾಗೂ ವಿಧವಾ ವೇತನ ಅರ್ಜಿ ಪಡೆದು ಸೌಲಭ್ಯಗಳನ್ನು ಸ್ಥಳದಲ್ಲೆ ಮಾಡಿಕೊಡುತ್ತಿದ್ದಾರೆ.</p>.<p>ತಹಶೀಲ್ದಾರ್ ಸಿಗ್ಬತುಲ್ಲ, ಕಂದಾಯ ನಿರೀಕ್ಷ ಅಮರನಾರಾಯಣ, ರವೀಂದ್ರ ಹಾಗೂ ತಾಲೂಕಿನ 8 ಕಂದಾಯ ವೃತ್ತಗಳಲ್ಲಿನ ಗ್ರಾಮಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿನ ಮನೆ ಮನೆಗೆ ಭೇಟಿ ನೀಡಿ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.</p>.<p>ತಹಶೀಲ್ದಾರ್ ಸಿಗ್ಬತುಲ್ಲ ಮಾತನಾಡಿ ಒಂದು ವಾರದಿಂದ ತಾಲ್ಲೂಕಿನ 8 ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿದ್ದೇವೆ. ಸಾಮಾಜಿಕ ಭದ್ರತಾ ಯೋಜನೆಗೆ 78, ಫೌತಿವಾರು ಖಾತೆಗೆಸಂಬಂಧಿಸಿದ 28 ಅರ್ಜಿಗಳು ಬಂದಿವೆ. ಇವುಗಳನ್ನು ಶೀಘ್ರವಾಗಿ ವಿಲೆವಾರಿ ಮಾಡುತ್ತೇವೆ. ಆ 12ರವರೆಗೆ ಅರ್ಜಿಗಳು ಬಂದ ನಂತರ ಅರ್ಜಿಗಳನ್ನು ಪರೀಶಿಲಿಸಿ ಆ15 ರಂದು ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗುವುದು. ಫೌತಿವಾರು ಖಾತೆ ಅರ್ಜಿಸಲ್ಲಿಸಲು ಆ.31ರ ವರೆಗೆ ಅವಕಾಶ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: </strong>ಸೌಲಭ್ಯಗಳಿಗಾಗಿ ಸಾರ್ವಜನಿಕರು ಕಚೇರಿಗಳಿಗೆ ಅಲೆಯಬೇಕಿಲ್ಲ. ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ತೆರಳಿ ಕಂದಾಯ ಇಲಾಖೆಯ ಮಾಹಿತಿ. ಸೌಲಭ್ಯಗಳ ಬಗ್ಗೆ ತಿಳಿಸುತ್ತಿದ್ದಾರೆ.</p>.<p>ಜಿಲ್ಲಾಧಿಕಾರಿ, ಶಾಸಕರ ಸೂಚನೆಯಂತೆ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೇ ತಲುಪಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಗುಡಿಬಂಡೆ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಚಾಲನೆ ನೀಡಿದ್ದಾರೆ.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ಉಲ್ಲೋಡು ಕಂದಾಯ ವೃತ್ತದ ಪ್ರತಿ ಹಳ್ಳಿಯ ಮನೆ ಮನೆಗೆ ತೆರಳಿ ಸಾಮಾಜಿಕ ಭದ್ರತಾ ಯೋಜನೆ, ಫೌತಿವಾರು ಖಾತೆ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.</p>.<p>ಹಿರಿಯ ನಾಗರೀಕರು, ಅಂಗವಿಕಲರಿಗೆ ಹಾಗೂ ವಿಧವಾ ವೇತನ ಅರ್ಜಿ ಪಡೆದು ಸೌಲಭ್ಯಗಳನ್ನು ಸ್ಥಳದಲ್ಲೆ ಮಾಡಿಕೊಡುತ್ತಿದ್ದಾರೆ.</p>.<p>ತಹಶೀಲ್ದಾರ್ ಸಿಗ್ಬತುಲ್ಲ, ಕಂದಾಯ ನಿರೀಕ್ಷ ಅಮರನಾರಾಯಣ, ರವೀಂದ್ರ ಹಾಗೂ ತಾಲೂಕಿನ 8 ಕಂದಾಯ ವೃತ್ತಗಳಲ್ಲಿನ ಗ್ರಾಮಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿನ ಮನೆ ಮನೆಗೆ ಭೇಟಿ ನೀಡಿ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.</p>.<p>ತಹಶೀಲ್ದಾರ್ ಸಿಗ್ಬತುಲ್ಲ ಮಾತನಾಡಿ ಒಂದು ವಾರದಿಂದ ತಾಲ್ಲೂಕಿನ 8 ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿದ್ದೇವೆ. ಸಾಮಾಜಿಕ ಭದ್ರತಾ ಯೋಜನೆಗೆ 78, ಫೌತಿವಾರು ಖಾತೆಗೆಸಂಬಂಧಿಸಿದ 28 ಅರ್ಜಿಗಳು ಬಂದಿವೆ. ಇವುಗಳನ್ನು ಶೀಘ್ರವಾಗಿ ವಿಲೆವಾರಿ ಮಾಡುತ್ತೇವೆ. ಆ 12ರವರೆಗೆ ಅರ್ಜಿಗಳು ಬಂದ ನಂತರ ಅರ್ಜಿಗಳನ್ನು ಪರೀಶಿಲಿಸಿ ಆ15 ರಂದು ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗುವುದು. ಫೌತಿವಾರು ಖಾತೆ ಅರ್ಜಿಸಲ್ಲಿಸಲು ಆ.31ರ ವರೆಗೆ ಅವಕಾಶ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>