<p><strong>ಚಿಕ್ಕಬಳ್ಳಾಪುರ</strong>: ಮಾಜಿ ಮುಖ್ಯಮಂತ್ರಿಯೂ ಆದ ಚಿಕ್ಕಬಳ್ಳಾಪುರ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ಅವರ ಚುನಾವಣಾ ರಾಜಕಾರಣಕ್ಕೆ ತೆರೆ ಬಿದ್ದಿದೆ. ರಾಜಕೀಯ ಪುನರ್ಜನ್ಮ ನೀಡಿದ್ದ ಚಿಕ್ಕಬಳ್ಳಾಪುರದಲ್ಲಿಯೇ ಅವರು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. </p>.<p>ವೀರಪ್ಪ ಮೊಯಿಲಿ ಅವರು ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಲ್ಲಿ ಸರಣಿಯಾಗಿ ಸೋಲು ಕಂಡರು. ನಂತರ ರಾಜಕೀಯ ಪುನರ್ಜನ್ಮ ನೀಡಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ. ಆರ್.ಎಲ್.ಜಾಲಪ್ಪ ಅವರ ರಾಜಕೀಯ ನಿವೃತ್ತಿಯ ತರುವಾಯ ವೀರಪ್ಪ ಮೊಯಿಲಿ ಈ ಕ್ಷೇತ್ರಕ್ಕೆ ಬಂದರು.</p>.<p>ಜಾಲಪ್ಪ ನಿವೃತ್ತಿ ನಂತರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವ ವಿಚಾರದಲ್ಲಿ ‘ಕೈ’ ಪಾಳಯದಲ್ಲಿ ದೊಡ್ಡ ಜಟಾಪಟಿಯೇ ನಡೆದಿತ್ತು. ಈ ಹಗ್ಗಜಗ್ಗಾಟದಲ್ಲಿ ಮೊಯಿಲಿ ಗೆದ್ದರು. </p>.<p>2009ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದರು. 3,90,500 (ಶೇ 39.9) ಮತಗಳನ್ನು ಪಡೆದು ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. ಈ ಗೆಲುವು ನೇಪಥ್ಯಕ್ಕೆ ಸರಿದಿದ್ದ ಅವರ ರಾಜಕೀಯ ಜೀವನವನ್ನು ಪುನರುಜ್ಜೀವನಗೊಳಿಸಿತು. ಕೇಂದ್ರದ ಯುಪಿಎ ಸರ್ಕಾರದಲ್ಲಿ ಕಾನೂನು, ಪೆಟ್ರೋಲಿಯಂ ಸಚಿವರಾದರು. </p>.<p>2014ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಚಿಕ್ಕಬಳ್ಳಾಪುರದಿಂದ ಕಣಕ್ಕೆ ಇಳಿದರು. 4,24,800 (ಶೇ 33.6) ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದರು. 2019ರ ಲೋಕಸಭಾ ಚುನಾವಣೆಯಲ್ಲಿ 5,63,802 (ಶೇ 40.7) ಮತಗಳನ್ನು ಪಡೆದು ಸೋಲು ಅನುಭವಿಸಿದರು. </p>.<p>ಹೀಗೆ ಮೂರು ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. </p>.<p>ಜಾತ್ಯತೀತವಾಗಿ ಬೆಂಬಲ: ತನ್ನ ಸಮುದಾಯದ ಮತದಾರರು ಕನಿಷ್ಠ ಮಟ್ಟದಲ್ಲಿಯೂ ಇಲ್ಲದ ಈ ಕ್ಷೇತ್ರದಲ್ಲಿ ವೀರಪ್ಪ ಮೊಯಿಲಿ ಅವರಿಗೆ ಜಾತ್ಯತೀತವಾಗಿ ಬೆಂಬಲ ವ್ಯಕ್ತವಾಗಿದೆ.</p>.<p>‘ಮೊಯಿಲಿ ಅವರು ಸಹ ಜಾತಿ ನೋಡದೆ ಚಿಕ್ಕಬಳ್ಳಾಪುರ ಜನರು ನನ್ನ ಬೆಂಬಲಿಸಿದರು. ರಾಜಕೀಯ ಪುನರ್ಜನ್ಮ ನೀಡಿದ್ದು ಚಿಕ್ಕಬಳ್ಳಾಪುರ ಜನರು’ ಎಂದು ಹೇಳುತ್ತ ಭಾವುಕರಾಗುತ್ತಿದ್ದರು.</p>.<p>ಚಿಕ್ಕಬಳ್ಳಾಪುರದಲ್ಲಿ ತಮ್ಮ ಪುಸ್ತಕ ಲೋಕಾರ್ಪಣೆ ಆಗಬೇಕು ಎನ್ನುವ ಅವರ ಆಸೆಯು ‘ವಿಶ್ವಸಂಸ್ಕೃತಿ ಮಹಾಯಾನ’ ಗದ್ಯಕಾವ್ಯದ ಮೊದಲ ಸಂಪುಟದ ಮೂಲಕ ಈಡೇರಿತು. </p>.<p>ಎತ್ತಿನಹೊಳೆ ರೂವಾರಿ ಎತ್ತಿನಹೊಳೆ ನೀರಾವರಿ ಯೋಜನೆ ವೀರಪ್ಪ ಮೊಯಿಲಿ ಅವರ ಕನಸಿನ ಕೂಸು ಎಂದರೂ ತಪ್ಪಾಗದು. ಚುನಾವಣೆಯ ಸಮಯದಲ್ಲಿ ಎತ್ತಿನಹೊಳೆ ವಿಚಾರವನ್ನೇ ಪ್ರಮುಖವಾಗಿ ಪ್ರಸ್ತಾಪಿಸುತ್ತಿದ್ದರು. </p>.<p>‘ಕರೆದರೆ ಬಂದು ಪ್ರಚಾರ ಮಾಡುವೆ’ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಲ್ಲಿಯೇ ಇರುವೆ. ಯಾವುದೇ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬನ್ನಿ ಎಂದು ಕರೆದರೆ ಅವರ ಪರ ಪ್ರಚಾರ ನಡೆಸುವೆ ಎಂದು ವೀರಪ್ಪ ಮೊಯಿಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಮಾಜಿ ಮುಖ್ಯಮಂತ್ರಿಯೂ ಆದ ಚಿಕ್ಕಬಳ್ಳಾಪುರ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ಅವರ ಚುನಾವಣಾ ರಾಜಕಾರಣಕ್ಕೆ ತೆರೆ ಬಿದ್ದಿದೆ. ರಾಜಕೀಯ ಪುನರ್ಜನ್ಮ ನೀಡಿದ್ದ ಚಿಕ್ಕಬಳ್ಳಾಪುರದಲ್ಲಿಯೇ ಅವರು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. </p>.<p>ವೀರಪ್ಪ ಮೊಯಿಲಿ ಅವರು ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಲ್ಲಿ ಸರಣಿಯಾಗಿ ಸೋಲು ಕಂಡರು. ನಂತರ ರಾಜಕೀಯ ಪುನರ್ಜನ್ಮ ನೀಡಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ. ಆರ್.ಎಲ್.ಜಾಲಪ್ಪ ಅವರ ರಾಜಕೀಯ ನಿವೃತ್ತಿಯ ತರುವಾಯ ವೀರಪ್ಪ ಮೊಯಿಲಿ ಈ ಕ್ಷೇತ್ರಕ್ಕೆ ಬಂದರು.</p>.<p>ಜಾಲಪ್ಪ ನಿವೃತ್ತಿ ನಂತರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವ ವಿಚಾರದಲ್ಲಿ ‘ಕೈ’ ಪಾಳಯದಲ್ಲಿ ದೊಡ್ಡ ಜಟಾಪಟಿಯೇ ನಡೆದಿತ್ತು. ಈ ಹಗ್ಗಜಗ್ಗಾಟದಲ್ಲಿ ಮೊಯಿಲಿ ಗೆದ್ದರು. </p>.<p>2009ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದರು. 3,90,500 (ಶೇ 39.9) ಮತಗಳನ್ನು ಪಡೆದು ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. ಈ ಗೆಲುವು ನೇಪಥ್ಯಕ್ಕೆ ಸರಿದಿದ್ದ ಅವರ ರಾಜಕೀಯ ಜೀವನವನ್ನು ಪುನರುಜ್ಜೀವನಗೊಳಿಸಿತು. ಕೇಂದ್ರದ ಯುಪಿಎ ಸರ್ಕಾರದಲ್ಲಿ ಕಾನೂನು, ಪೆಟ್ರೋಲಿಯಂ ಸಚಿವರಾದರು. </p>.<p>2014ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಚಿಕ್ಕಬಳ್ಳಾಪುರದಿಂದ ಕಣಕ್ಕೆ ಇಳಿದರು. 4,24,800 (ಶೇ 33.6) ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದರು. 2019ರ ಲೋಕಸಭಾ ಚುನಾವಣೆಯಲ್ಲಿ 5,63,802 (ಶೇ 40.7) ಮತಗಳನ್ನು ಪಡೆದು ಸೋಲು ಅನುಭವಿಸಿದರು. </p>.<p>ಹೀಗೆ ಮೂರು ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. </p>.<p>ಜಾತ್ಯತೀತವಾಗಿ ಬೆಂಬಲ: ತನ್ನ ಸಮುದಾಯದ ಮತದಾರರು ಕನಿಷ್ಠ ಮಟ್ಟದಲ್ಲಿಯೂ ಇಲ್ಲದ ಈ ಕ್ಷೇತ್ರದಲ್ಲಿ ವೀರಪ್ಪ ಮೊಯಿಲಿ ಅವರಿಗೆ ಜಾತ್ಯತೀತವಾಗಿ ಬೆಂಬಲ ವ್ಯಕ್ತವಾಗಿದೆ.</p>.<p>‘ಮೊಯಿಲಿ ಅವರು ಸಹ ಜಾತಿ ನೋಡದೆ ಚಿಕ್ಕಬಳ್ಳಾಪುರ ಜನರು ನನ್ನ ಬೆಂಬಲಿಸಿದರು. ರಾಜಕೀಯ ಪುನರ್ಜನ್ಮ ನೀಡಿದ್ದು ಚಿಕ್ಕಬಳ್ಳಾಪುರ ಜನರು’ ಎಂದು ಹೇಳುತ್ತ ಭಾವುಕರಾಗುತ್ತಿದ್ದರು.</p>.<p>ಚಿಕ್ಕಬಳ್ಳಾಪುರದಲ್ಲಿ ತಮ್ಮ ಪುಸ್ತಕ ಲೋಕಾರ್ಪಣೆ ಆಗಬೇಕು ಎನ್ನುವ ಅವರ ಆಸೆಯು ‘ವಿಶ್ವಸಂಸ್ಕೃತಿ ಮಹಾಯಾನ’ ಗದ್ಯಕಾವ್ಯದ ಮೊದಲ ಸಂಪುಟದ ಮೂಲಕ ಈಡೇರಿತು. </p>.<p>ಎತ್ತಿನಹೊಳೆ ರೂವಾರಿ ಎತ್ತಿನಹೊಳೆ ನೀರಾವರಿ ಯೋಜನೆ ವೀರಪ್ಪ ಮೊಯಿಲಿ ಅವರ ಕನಸಿನ ಕೂಸು ಎಂದರೂ ತಪ್ಪಾಗದು. ಚುನಾವಣೆಯ ಸಮಯದಲ್ಲಿ ಎತ್ತಿನಹೊಳೆ ವಿಚಾರವನ್ನೇ ಪ್ರಮುಖವಾಗಿ ಪ್ರಸ್ತಾಪಿಸುತ್ತಿದ್ದರು. </p>.<p>‘ಕರೆದರೆ ಬಂದು ಪ್ರಚಾರ ಮಾಡುವೆ’ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಲ್ಲಿಯೇ ಇರುವೆ. ಯಾವುದೇ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬನ್ನಿ ಎಂದು ಕರೆದರೆ ಅವರ ಪರ ಪ್ರಚಾರ ನಡೆಸುವೆ ಎಂದು ವೀರಪ್ಪ ಮೊಯಿಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>