<p><strong>ಚಿಂತಾಮಣಿ</strong>: ಸರ್ಕಾರದಿಂದ ಮಂಜೂರಾಗಬೇಕಾದ ಜಮೀನಿಗೆ ಒತ್ತಾಯಿಸಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ 6 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾಜಿ ಸೈನಿಕ ಶಿವಾನಂದ ರೆಡ್ಡಿ ಅವರ ಕುಟುಂಬಸ್ಥರ ಪೈಕಿ ಮಾಜಿ ಯೋಧನ ಪತ್ನಿ ಕಾಂತಮ್ಮ ಅಸ್ವಸ್ಥರಾಗಿದ್ದಾರೆ. </p>.<p>ಹೀಗಾಗಿ, ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ತಹಶೀಲ್ದಾರ್ ಸುದರ್ಶನ್ ಯಾದವ್ ಆಸ್ಪತ್ರೆಗೆ ಭೇಟಿ ನೀಡಿ, ಕಾಂತಮ್ಮ ಅವರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ, ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ಮನವಿ ಮಾಡಿದರು. </p>.<p>ಅಂಬಾಜಿದುರ್ಗ ಹೋಬಳಿಯ ರಾಯಪ್ಪಲ್ಲಿ ಗ್ರಾಮದ ಮಾಜಿ ಸೈನಿಕ ಶಿವಾನಂದರೆಡ್ಡಿ ಹಲವು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಸೇನೆಯಲ್ಲಿದ್ದಾಗ ಗಡಿ ಭಾಗದಲ್ಲಿ ನಡೆದ ಅಪಘಾತದಲ್ಲಿ ಕಾಲಿಗೆ ತೀವ್ರ ಪೆಟ್ಟಾಗಿ, ಕಡ್ಡಾಯ ನಿವೃತ್ತಿಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಜಮೀನು ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೇನಾಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದರು. ಶಿವಾನಂದರೆಡ್ಡಿ ಅವರು ನಿವೃತ್ತಿಯಾಗಿ ಎರಡೂವರೆ ದಶಕ ಕಳೆದಿದೆ. ಆದರೆ, ಜಮೀನು ಮಾತ್ರ ಇನ್ನೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಸರ್ಕಾರದಿಂದ ಮಂಜೂರಾಗಬೇಕಾದ ಜಮೀನಿಗೆ ಒತ್ತಾಯಿಸಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ 6 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾಜಿ ಸೈನಿಕ ಶಿವಾನಂದ ರೆಡ್ಡಿ ಅವರ ಕುಟುಂಬಸ್ಥರ ಪೈಕಿ ಮಾಜಿ ಯೋಧನ ಪತ್ನಿ ಕಾಂತಮ್ಮ ಅಸ್ವಸ್ಥರಾಗಿದ್ದಾರೆ. </p>.<p>ಹೀಗಾಗಿ, ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ತಹಶೀಲ್ದಾರ್ ಸುದರ್ಶನ್ ಯಾದವ್ ಆಸ್ಪತ್ರೆಗೆ ಭೇಟಿ ನೀಡಿ, ಕಾಂತಮ್ಮ ಅವರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ, ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ಮನವಿ ಮಾಡಿದರು. </p>.<p>ಅಂಬಾಜಿದುರ್ಗ ಹೋಬಳಿಯ ರಾಯಪ್ಪಲ್ಲಿ ಗ್ರಾಮದ ಮಾಜಿ ಸೈನಿಕ ಶಿವಾನಂದರೆಡ್ಡಿ ಹಲವು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಸೇನೆಯಲ್ಲಿದ್ದಾಗ ಗಡಿ ಭಾಗದಲ್ಲಿ ನಡೆದ ಅಪಘಾತದಲ್ಲಿ ಕಾಲಿಗೆ ತೀವ್ರ ಪೆಟ್ಟಾಗಿ, ಕಡ್ಡಾಯ ನಿವೃತ್ತಿಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಜಮೀನು ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೇನಾಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದರು. ಶಿವಾನಂದರೆಡ್ಡಿ ಅವರು ನಿವೃತ್ತಿಯಾಗಿ ಎರಡೂವರೆ ದಶಕ ಕಳೆದಿದೆ. ಆದರೆ, ಜಮೀನು ಮಾತ್ರ ಇನ್ನೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>