<p>ಗೌರಿಬಿದನೂರು: ತಾಲ್ಲೂಕಿನ ಪುರಾಣ ಪ್ರಸಿದ್ಧ ವಿದುರಾಶ್ವತ್ಥದಲ್ಲಿ ವಿದುರಾಶ್ವತ್ಥ ಅಶ್ವಥ ನಾರಾಯಣಸ್ವಾಮಿಯ ರಥೋತ್ಸವವು ಗುರುವಾರ ಅದ್ದೂರಿಯಾಗಿ ನೆರವೇರಿತು.</p>.<p>ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಪುಟ್ಟಸ್ವಾಮಿಗೌಡ, ವಿದುರನ ಭಕ್ತಿಗೆ ಒಲಿದು ನೆಲೆನಿಂತ ವಿದುರ ಅಶ್ವತ್ಥನಾರಾಯಣ ಸ್ವಾಮಿಯ ಕೃಪೆ ನಾಡಿನ ಜನರ ಮೇಲೆ ಇರಲಿ. ಉತ್ತಮ ಮಳೆ, ಬೆಳೆಯಾಗಿ ಸರ್ವರೂ ಸುಖ, ಸಂತೋಷದಿಂದ ಜೀವನ ಸಾಗಿಸಲೆಂದು ಪ್ರಾರ್ಥಿಸಿದರು.</p>.<p>ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ಮಹಾಮಂಗಳಾರತಿ, ಹೋಮ ಹವನಗಳು ಸೇರಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ಜರುಗಿದವು. ಭಕ್ತರು ದೇಗುಲದ ಮುಂದೆ ಸಾಲುಗಟ್ಟಿ ನಿಂತು ಅಶ್ವತ್ಥನಾರಾಯಣಸ್ವಾಮಿಗೆ ಪೂಜೆ ಸಲ್ಲಿಸಿದರು.</p>.<p>ರಥೋತ್ಸವಕ್ಕೂ ಮುನ್ನ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ, ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಏರಿಸಿ, ಭಕ್ತರು ರಥ ಎಳೆದರು. ಸಾಗುವ ಹಾದಿಯಲ್ಲಿ ಭಕ್ತರು ಬಾಳೆಹಣ್ಣು-ದವನ ಎಸೆದು ಭಕ್ತಿ ಸಮರ್ಪಿಸಿದರು.</p>.<p>ನೆರೆದಿದ್ದ ಭಕ್ತರಿಗೆ ದೇವಸ್ಥಾನದ ವತಿಯಿಂದ ಕುಡಿಯುವ ನೀರು, ಪಾನಕ, ಮಜ್ಜಿಗೆ, ಕೋಸಂಬರಿ ಮತ್ತು ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ತಾಲ್ಲೂಕು ಹಾಗೂ ಜಿಲ್ಲೆಯ ಸುತ್ತಮುತ್ತಲ ಗ್ರಾಮಗಳು ಹಾಗೂ ಆಂಧ್ರಪ್ರದೇಶದ ವಿವಿಧೆಡೆಯಿಂದ 15 ಸಾವಿರಕ್ಕೂ ಹೆಚ್ಚು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು.</p>.<p>ರಥೋತ್ಸವದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಪೋಲಿಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.</p>.<p>ರಥೋತ್ಸವದಲ್ಲಿ ತಹಶೀಲ್ದಾರ್ ಅರವಿಂದ್.ಕೆ.ಎಂ, ವಿದುರಾಶ್ವತ್ಥ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಎ. ಮರಿರಾಜು, ವಕೀಲ ರಂಗರಾಜು, ರಾಜೇಂದ್ರ ಪ್ರಸಾದ್, ಶ್ರೀನಿವಾಸಗೌಡ ಹಾಗೂ ಸ್ಥಳೀಯ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-16-1139724822</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ತಾಲ್ಲೂಕಿನ ಪುರಾಣ ಪ್ರಸಿದ್ಧ ವಿದುರಾಶ್ವತ್ಥದಲ್ಲಿ ವಿದುರಾಶ್ವತ್ಥ ಅಶ್ವಥ ನಾರಾಯಣಸ್ವಾಮಿಯ ರಥೋತ್ಸವವು ಗುರುವಾರ ಅದ್ದೂರಿಯಾಗಿ ನೆರವೇರಿತು.</p>.<p>ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಪುಟ್ಟಸ್ವಾಮಿಗೌಡ, ವಿದುರನ ಭಕ್ತಿಗೆ ಒಲಿದು ನೆಲೆನಿಂತ ವಿದುರ ಅಶ್ವತ್ಥನಾರಾಯಣ ಸ್ವಾಮಿಯ ಕೃಪೆ ನಾಡಿನ ಜನರ ಮೇಲೆ ಇರಲಿ. ಉತ್ತಮ ಮಳೆ, ಬೆಳೆಯಾಗಿ ಸರ್ವರೂ ಸುಖ, ಸಂತೋಷದಿಂದ ಜೀವನ ಸಾಗಿಸಲೆಂದು ಪ್ರಾರ್ಥಿಸಿದರು.</p>.<p>ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ಮಹಾಮಂಗಳಾರತಿ, ಹೋಮ ಹವನಗಳು ಸೇರಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ಜರುಗಿದವು. ಭಕ್ತರು ದೇಗುಲದ ಮುಂದೆ ಸಾಲುಗಟ್ಟಿ ನಿಂತು ಅಶ್ವತ್ಥನಾರಾಯಣಸ್ವಾಮಿಗೆ ಪೂಜೆ ಸಲ್ಲಿಸಿದರು.</p>.<p>ರಥೋತ್ಸವಕ್ಕೂ ಮುನ್ನ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ, ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಏರಿಸಿ, ಭಕ್ತರು ರಥ ಎಳೆದರು. ಸಾಗುವ ಹಾದಿಯಲ್ಲಿ ಭಕ್ತರು ಬಾಳೆಹಣ್ಣು-ದವನ ಎಸೆದು ಭಕ್ತಿ ಸಮರ್ಪಿಸಿದರು.</p>.<p>ನೆರೆದಿದ್ದ ಭಕ್ತರಿಗೆ ದೇವಸ್ಥಾನದ ವತಿಯಿಂದ ಕುಡಿಯುವ ನೀರು, ಪಾನಕ, ಮಜ್ಜಿಗೆ, ಕೋಸಂಬರಿ ಮತ್ತು ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ತಾಲ್ಲೂಕು ಹಾಗೂ ಜಿಲ್ಲೆಯ ಸುತ್ತಮುತ್ತಲ ಗ್ರಾಮಗಳು ಹಾಗೂ ಆಂಧ್ರಪ್ರದೇಶದ ವಿವಿಧೆಡೆಯಿಂದ 15 ಸಾವಿರಕ್ಕೂ ಹೆಚ್ಚು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು.</p>.<p>ರಥೋತ್ಸವದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಪೋಲಿಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.</p>.<p>ರಥೋತ್ಸವದಲ್ಲಿ ತಹಶೀಲ್ದಾರ್ ಅರವಿಂದ್.ಕೆ.ಎಂ, ವಿದುರಾಶ್ವತ್ಥ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಎ. ಮರಿರಾಜು, ವಕೀಲ ರಂಗರಾಜು, ರಾಜೇಂದ್ರ ಪ್ರಸಾದ್, ಶ್ರೀನಿವಾಸಗೌಡ ಹಾಗೂ ಸ್ಥಳೀಯ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-16-1139724822</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>