<p>ಗೌರಿಬಿದನೂರು: ದಕ್ಷಿಣದ ಜಲಿಯನ್ ವಾಲಾಬಾಗ್ ಆಗಿರುವ ವಿದುರಾಶ್ವತ್ಥಕ್ಕೆ ಜಿಲ್ಲಾಧಿಕಾರಿ ಜಿ. ಪ್ರಭು ಶನಿವಾರ ಭೇಟಿ ನೀಡಿದರು.</p>.<p>ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ನಂತರ ಹುತಾತ್ಮರ ಸ್ತೂಫಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಗ್ಯಾಲರಿಗೆ ತೆರಳಿ ವಿದುರಾಶ್ವತ್ಥದ ಇತಿಹಾಸ, ದಕ್ಷಿಣ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಸೇರಿದಂತೆ ಇನ್ನಿತರ ಮಾಹಿತಿಯನ್ನು ಡಾ.ಎಚ್.ಎನ್ ಪ್ರಾಧಿಕಾರ ಅಧ್ಯಕ್ಷ ಶಿವಶಂಕರ ರೆಡ್ಡಿ ನೀಡಿದರು.</p>.<p>ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, 1938ರಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಪ್ರಹಾರದ ವಿರುದ್ಧ ನಿಂತು ತ್ಯಾಗ ಬಲಿದಾನಕ್ಕೆ ಹೆಸರಾದ ಸ್ಥಳವಿದು. ಮುಂದಿನ ದಿನಗಳಲ್ಲಿ ಈ ಘಟನೆಗೆ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು. ಹುತಾತ್ಮರ ಅಪೇಕ್ಷೆಯಂತೆ ಮುಂದಿನ ಪೀಳಿಗೆ ಸ್ವಾತಂತ್ರ್ಯ, ಸಮಾನತೆ, ತಾರತಮ್ಯ ರಹಿತ, ಉತ್ತಮ ವಿದ್ಯೆ, ಉತ್ತಮ ಅವಕಾಶಗಳು ಸಂವಿಧಾನದ ಅಡಿ ಸಿಗುವಂತಾಗಬೇಕು. ಇದಕ್ಕಾಗಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.</p>.<p>ಡಾ.ಎಚ್.ಎನ್. ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, 1938ರ ಏಪ್ರಿಲ್ 25ರಂದು ಭಾರತದ ಸುವರ್ಣ ಅಕ್ಷರಗಳಲ್ಲಿ ದಾಖಲಾದ ದಿನವಾಗಿದೆ. ಸ್ವಾತಂತ್ರ್ಯಕ್ಕಾಗಿ ವಿದುರಾಶ್ವತ್ಥದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಿ, ಧ್ವಜ ಹಾರಿಸುವುದನ್ನು ತಡೆಯಲು ಬ್ರಿಟಿಷ್ ಸರ್ಕಾರವು 90 ಸುತ್ತು ಗುಂಡುಗಳನ್ನು ಹಾರಿಸಿತ್ತು. ಈ ಘಟನೆಯಲ್ಲಿ 11 ಮಂದಿ ಹುತಾತ್ಮರಾದರು ಎಂಬುದಾಗಿ ದಾಖಲಾಗಿದೆ. ಇದಲ್ಲದೆ, ಗರ್ಭಿಣಿ ಸೇರಿ 32ಕ್ಕೂ ಹೆಚ್ಚು ಮಂದಿ ಸ್ವಾತಂತ್ರ್ಯ ಹೋರಾಟಗಾರರೂ ಪ್ರಾಣ ತ್ಯಾಗ ಮಾಡಿದ್ದರು ಎಂಬುದಾಗಿ ದಾಖಲೆಗಳಿವೆ ಎಂದರು.</p>.<p>ಮುಂದಿನ ದಿನಗಳಲ್ಲಿ ಲೇಸರ್ ಶೋ, ಆಡಿಯೊ ವಿಶುಯಲ್ ಗ್ಯಾಲರಿ, ಗಾಂಧೀಜಿಯವರ ಗ್ಯಾಲರಿ ಪ್ರಾರಂಭಿಸಿ, ಮುಂದಿನ ಪೀಳಿಗೆಗೆ ವಿದುರಾಶ್ವತ್ಥದ ಮಹತ್ವ ತಿಳಿಸುವ ಕೆಲಸ ಮಾಡಲಾಗುವುದು ಎಂದರು.</p>.<p>ಈ ವೇಳೆ ತಹಶೀಲ್ದಾರ್ ಅರವಿಂದ್ ಕೆ.ಎಂ, ವಿದುರಾಶ್ವತ್ಥ ಕಾರ್ಯನಿರ್ವಾಹಕ ಅಧಿಕಾರಿ ಮರಿರಾಜು, ರಾಜಸ್ವ ನಿರೀಕ್ಷಕ ಖಾದರ್, ಪೇಶ್ಕಾರ್ ಕೃಷ್ಣಮೂರ್ತಿ, ಸುದರ್ಶನ್, ಮುತ್ತುರಾಜ್, ಕಲಾವಿದ ರಾಮಕೃಷ್ಣ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಇನ್ನಿತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-16-494426926</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ದಕ್ಷಿಣದ ಜಲಿಯನ್ ವಾಲಾಬಾಗ್ ಆಗಿರುವ ವಿದುರಾಶ್ವತ್ಥಕ್ಕೆ ಜಿಲ್ಲಾಧಿಕಾರಿ ಜಿ. ಪ್ರಭು ಶನಿವಾರ ಭೇಟಿ ನೀಡಿದರು.</p>.<p>ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ನಂತರ ಹುತಾತ್ಮರ ಸ್ತೂಫಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಗ್ಯಾಲರಿಗೆ ತೆರಳಿ ವಿದುರಾಶ್ವತ್ಥದ ಇತಿಹಾಸ, ದಕ್ಷಿಣ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಸೇರಿದಂತೆ ಇನ್ನಿತರ ಮಾಹಿತಿಯನ್ನು ಡಾ.ಎಚ್.ಎನ್ ಪ್ರಾಧಿಕಾರ ಅಧ್ಯಕ್ಷ ಶಿವಶಂಕರ ರೆಡ್ಡಿ ನೀಡಿದರು.</p>.<p>ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, 1938ರಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಪ್ರಹಾರದ ವಿರುದ್ಧ ನಿಂತು ತ್ಯಾಗ ಬಲಿದಾನಕ್ಕೆ ಹೆಸರಾದ ಸ್ಥಳವಿದು. ಮುಂದಿನ ದಿನಗಳಲ್ಲಿ ಈ ಘಟನೆಗೆ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು. ಹುತಾತ್ಮರ ಅಪೇಕ್ಷೆಯಂತೆ ಮುಂದಿನ ಪೀಳಿಗೆ ಸ್ವಾತಂತ್ರ್ಯ, ಸಮಾನತೆ, ತಾರತಮ್ಯ ರಹಿತ, ಉತ್ತಮ ವಿದ್ಯೆ, ಉತ್ತಮ ಅವಕಾಶಗಳು ಸಂವಿಧಾನದ ಅಡಿ ಸಿಗುವಂತಾಗಬೇಕು. ಇದಕ್ಕಾಗಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.</p>.<p>ಡಾ.ಎಚ್.ಎನ್. ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, 1938ರ ಏಪ್ರಿಲ್ 25ರಂದು ಭಾರತದ ಸುವರ್ಣ ಅಕ್ಷರಗಳಲ್ಲಿ ದಾಖಲಾದ ದಿನವಾಗಿದೆ. ಸ್ವಾತಂತ್ರ್ಯಕ್ಕಾಗಿ ವಿದುರಾಶ್ವತ್ಥದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಿ, ಧ್ವಜ ಹಾರಿಸುವುದನ್ನು ತಡೆಯಲು ಬ್ರಿಟಿಷ್ ಸರ್ಕಾರವು 90 ಸುತ್ತು ಗುಂಡುಗಳನ್ನು ಹಾರಿಸಿತ್ತು. ಈ ಘಟನೆಯಲ್ಲಿ 11 ಮಂದಿ ಹುತಾತ್ಮರಾದರು ಎಂಬುದಾಗಿ ದಾಖಲಾಗಿದೆ. ಇದಲ್ಲದೆ, ಗರ್ಭಿಣಿ ಸೇರಿ 32ಕ್ಕೂ ಹೆಚ್ಚು ಮಂದಿ ಸ್ವಾತಂತ್ರ್ಯ ಹೋರಾಟಗಾರರೂ ಪ್ರಾಣ ತ್ಯಾಗ ಮಾಡಿದ್ದರು ಎಂಬುದಾಗಿ ದಾಖಲೆಗಳಿವೆ ಎಂದರು.</p>.<p>ಮುಂದಿನ ದಿನಗಳಲ್ಲಿ ಲೇಸರ್ ಶೋ, ಆಡಿಯೊ ವಿಶುಯಲ್ ಗ್ಯಾಲರಿ, ಗಾಂಧೀಜಿಯವರ ಗ್ಯಾಲರಿ ಪ್ರಾರಂಭಿಸಿ, ಮುಂದಿನ ಪೀಳಿಗೆಗೆ ವಿದುರಾಶ್ವತ್ಥದ ಮಹತ್ವ ತಿಳಿಸುವ ಕೆಲಸ ಮಾಡಲಾಗುವುದು ಎಂದರು.</p>.<p>ಈ ವೇಳೆ ತಹಶೀಲ್ದಾರ್ ಅರವಿಂದ್ ಕೆ.ಎಂ, ವಿದುರಾಶ್ವತ್ಥ ಕಾರ್ಯನಿರ್ವಾಹಕ ಅಧಿಕಾರಿ ಮರಿರಾಜು, ರಾಜಸ್ವ ನಿರೀಕ್ಷಕ ಖಾದರ್, ಪೇಶ್ಕಾರ್ ಕೃಷ್ಣಮೂರ್ತಿ, ಸುದರ್ಶನ್, ಮುತ್ತುರಾಜ್, ಕಲಾವಿದ ರಾಮಕೃಷ್ಣ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಇನ್ನಿತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-16-494426926</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>