<p><strong>ಚಿಂತಾಮಣಿ:</strong> ತಾಲ್ಲೂಕಿನ ಆಲಂಬಗಿರಿ ಕ್ಷೇತ್ರದ ಕಲ್ಕಿ ಲಕ್ಷಿ ವೆಂಕಟರಮಣ ದೇವಾಲಯದಲ್ಲಿ ನವರಾತ್ರಿ ವಿಜಯದಶಮಿಯನ್ನು ಗುರುವಾರ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ನವರಾತ್ರಿಯ ಕೊನೆಯ ದಿನವಾದ ಗುರುವಾರ ಬೆಳಗ್ಗೆಯಿಂದಲೇ ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತು ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು. ಶಮೀವೃಕ್ಷದ ಪೂಜೆ ಏರ್ಪಡಿಸಲಾಗಿತ್ತು. ದೇವಾಲಯದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಶಮೀವೃಕ್ಷ ಮಂಟಪದ ಹತ್ತಿರ ಬಿಲ್ಲುಬಾಣದ ಪೂಜೆ ನೆರವೇರಿಸಲಾಯಿತು.</p>.<p>ವಿಶೇಷ ಮಂಟಪದಲ್ಲಿ ಅಲಂಕರಿಸಲಾಗಿದ್ದ ಲಕ್ಷ್ಮಿ ವೆಂಕಟರಮಣ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ಶಮೀವೃಕ್ಷದ ಮಂಟಪದವರೆಗೆ ಕರೆತರಲಾಯಿತು. ಸಂಕೀರ್ತನಾ ಪಾದಯಾತ್ರೆಯಲ್ಲಿ ದೇವರ ಉತ್ಸವದೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್.ಜಯರಾಂ ಸಹ ಸಂಕೀರ್ತನೆಯೊಂದಿಗೆ ನಡೆದುಬಂದರು.</p>.<p>ಶಮೀ ಮಂಟಪದ ಬಳಿ ವಿಶೇಷ ಪೂಜಾ ವ್ಯವಸ್ಥೆ ಮಾಡಲಾಗಿತ್ತು. ಶಮೀವೃಕ್ಷಕ್ಕೆ ವಿವಿಧ ಹೂವುಗಳಿಂದ ಅಲಂಕರಿಸಿ, ಬಿಲ್ಲುಬಾಣಗಳನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಶಾಸ್ತ್ರೋಕ್ತವಾಗಿ ಅರ್ಚಕವೃಂದ ವೇದಘೋಷ ಮಾಡಿದರು. ಎಂ.ಆರ್.ಜಯರಾಂ ದಂಪತಿ ಪೂಜೆ ಸಲ್ಲಿಸಿದರು.</p>.<p>ಗ್ರಾಮದ ರಥಬೀದಿಯಲ್ಲಿ ಸ್ವಾಮಿಯ ಉತ್ಸವ ನಡೆಯಿತು. ಗ್ರಾಮಸ್ಥರು ಮನೆ ಮನೆಗೂ ಪೂಜೆಗೆ ನೀಡಿದರು. ಉತ್ಸವ ಮೂರ್ತಿಗಳನ್ನು ದೇವಾಲಯಕ್ಕೆ ಕರೆತಂದು ಅಷ್ಟಾವಧಾನ ಸೇವೆ ನೆರೆವೇರಿಸಲಾಯಿತು. ನಂತರ ಸಾಮೂಹಿಕವಾಗಿ ಸಂಕೀರ್ತನೆ ಸಮರ್ಪಿಸಿ, ಮಹಾಮಂಗಳಾರತಿ ಮಾಡಲಾಯಿತು.</p>.<p>ನವರಾತ್ರಿಯ 9 ದಿನಗಳಲ್ಲಿ ಆಲಂಬಗಿರಿಯ ದೇವಾಲಯದಲ್ಲಿ ವಿಶೇಷ ಪೂಜಾ ವ್ಯವಸ್ಥೆ, ಭಜನೆ, ಸಂಕೀರ್ತನೆ ಏರ್ಪಡಿಸಲಾಗಿತ್ತು. ದೇವಾಲಯದ ಭಜನಾ ಮಂಟಪದಲ್ಲಿ ಭಕ್ತರು ಪ್ರತಿದಿನವೂ ಭಜನೆ ಮಾಡುತ್ತಿದ್ದರು.</p>.<p>ಯೋಗಿನಾರೇಯಣ ಸಂಕೀರ್ತನಾ ಯೋಜನೆ ಸಂಚಾಲಕ ಬಾಲಕೃಷ್ಣ ಭಾಗವತರ್, ಟ್ರಸ್ಟ್ ನಿರ್ದೇಶಕ ಆರ್.ಪಿ.ಎಂ.ಸತ್ಯನಾರಾಯಣ್, ಉಪನ್ಯಾಸಕ ಯರಮರೆಡ್ಡಿಹಳ್ಳಿ ವೆಂಕಟರವಣಪ್ಪ, ಆಡಳಿತಾಧಿಕಾರಿ ಕೆ.ಲಕ್ಷ್ಮಿನಾರಾಯಣ, ಹಿರಿಯ ಪ್ರವಚನಕಾರ ತಳಗವಾರ ಆನಂದ್, ಗ್ರಾಮಸ್ಥರು ಹಾಗೂ ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಆಲಂಬಗಿರಿ ಕ್ಷೇತ್ರದ ಕಲ್ಕಿ ಲಕ್ಷಿ ವೆಂಕಟರಮಣ ದೇವಾಲಯದಲ್ಲಿ ನವರಾತ್ರಿ ವಿಜಯದಶಮಿಯನ್ನು ಗುರುವಾರ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ನವರಾತ್ರಿಯ ಕೊನೆಯ ದಿನವಾದ ಗುರುವಾರ ಬೆಳಗ್ಗೆಯಿಂದಲೇ ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತು ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು. ಶಮೀವೃಕ್ಷದ ಪೂಜೆ ಏರ್ಪಡಿಸಲಾಗಿತ್ತು. ದೇವಾಲಯದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಶಮೀವೃಕ್ಷ ಮಂಟಪದ ಹತ್ತಿರ ಬಿಲ್ಲುಬಾಣದ ಪೂಜೆ ನೆರವೇರಿಸಲಾಯಿತು.</p>.<p>ವಿಶೇಷ ಮಂಟಪದಲ್ಲಿ ಅಲಂಕರಿಸಲಾಗಿದ್ದ ಲಕ್ಷ್ಮಿ ವೆಂಕಟರಮಣ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ಶಮೀವೃಕ್ಷದ ಮಂಟಪದವರೆಗೆ ಕರೆತರಲಾಯಿತು. ಸಂಕೀರ್ತನಾ ಪಾದಯಾತ್ರೆಯಲ್ಲಿ ದೇವರ ಉತ್ಸವದೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್.ಜಯರಾಂ ಸಹ ಸಂಕೀರ್ತನೆಯೊಂದಿಗೆ ನಡೆದುಬಂದರು.</p>.<p>ಶಮೀ ಮಂಟಪದ ಬಳಿ ವಿಶೇಷ ಪೂಜಾ ವ್ಯವಸ್ಥೆ ಮಾಡಲಾಗಿತ್ತು. ಶಮೀವೃಕ್ಷಕ್ಕೆ ವಿವಿಧ ಹೂವುಗಳಿಂದ ಅಲಂಕರಿಸಿ, ಬಿಲ್ಲುಬಾಣಗಳನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಶಾಸ್ತ್ರೋಕ್ತವಾಗಿ ಅರ್ಚಕವೃಂದ ವೇದಘೋಷ ಮಾಡಿದರು. ಎಂ.ಆರ್.ಜಯರಾಂ ದಂಪತಿ ಪೂಜೆ ಸಲ್ಲಿಸಿದರು.</p>.<p>ಗ್ರಾಮದ ರಥಬೀದಿಯಲ್ಲಿ ಸ್ವಾಮಿಯ ಉತ್ಸವ ನಡೆಯಿತು. ಗ್ರಾಮಸ್ಥರು ಮನೆ ಮನೆಗೂ ಪೂಜೆಗೆ ನೀಡಿದರು. ಉತ್ಸವ ಮೂರ್ತಿಗಳನ್ನು ದೇವಾಲಯಕ್ಕೆ ಕರೆತಂದು ಅಷ್ಟಾವಧಾನ ಸೇವೆ ನೆರೆವೇರಿಸಲಾಯಿತು. ನಂತರ ಸಾಮೂಹಿಕವಾಗಿ ಸಂಕೀರ್ತನೆ ಸಮರ್ಪಿಸಿ, ಮಹಾಮಂಗಳಾರತಿ ಮಾಡಲಾಯಿತು.</p>.<p>ನವರಾತ್ರಿಯ 9 ದಿನಗಳಲ್ಲಿ ಆಲಂಬಗಿರಿಯ ದೇವಾಲಯದಲ್ಲಿ ವಿಶೇಷ ಪೂಜಾ ವ್ಯವಸ್ಥೆ, ಭಜನೆ, ಸಂಕೀರ್ತನೆ ಏರ್ಪಡಿಸಲಾಗಿತ್ತು. ದೇವಾಲಯದ ಭಜನಾ ಮಂಟಪದಲ್ಲಿ ಭಕ್ತರು ಪ್ರತಿದಿನವೂ ಭಜನೆ ಮಾಡುತ್ತಿದ್ದರು.</p>.<p>ಯೋಗಿನಾರೇಯಣ ಸಂಕೀರ್ತನಾ ಯೋಜನೆ ಸಂಚಾಲಕ ಬಾಲಕೃಷ್ಣ ಭಾಗವತರ್, ಟ್ರಸ್ಟ್ ನಿರ್ದೇಶಕ ಆರ್.ಪಿ.ಎಂ.ಸತ್ಯನಾರಾಯಣ್, ಉಪನ್ಯಾಸಕ ಯರಮರೆಡ್ಡಿಹಳ್ಳಿ ವೆಂಕಟರವಣಪ್ಪ, ಆಡಳಿತಾಧಿಕಾರಿ ಕೆ.ಲಕ್ಷ್ಮಿನಾರಾಯಣ, ಹಿರಿಯ ಪ್ರವಚನಕಾರ ತಳಗವಾರ ಆನಂದ್, ಗ್ರಾಮಸ್ಥರು ಹಾಗೂ ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>