ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ಪೆಂಡಾಲ್‌ಗಳಿಗೆ ಸಾವರ್ಕರ್ ಚಿತ್ರ ವಿತರಣೆ

Last Updated 2 ಸೆಪ್ಟೆಂಬರ್ 2022, 4:44 IST
ಅಕ್ಷರ ಗಾತ್ರ

ಶಿಡ್ಲಘಟ್ಟ:ನಗರ ಹಾಗೂ ತಾಲ್ಲೂಕಿನಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ ಪೆಂಡಾಲ್‍ಗಳಲ್ಲಿ ವಿ.ಡಿ ಸಾವರ್ಕರ್ ಅವರ ಭಾವಚಿತ್ರಗಳನ್ನು ಪ್ರದರ್ಶಿಸುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ಸಾವರ್ಕರ್ ಭಾವಚಿತ್ರಗಳನ್ನು ವಿತರಿಸಿದರು.

ಗಣೇಶೋತ್ಸವ ಪೆಂಡಾಲ್‍ಗಳಲ್ಲಿ ಸಾವರ್ಕರ್ ಭಾವಚಿತ್ರ ಹಾಕಿ, ಅವರ ಬಗ್ಗೆ ಇನ್ನೂ ಹೆಚ್ಚಿನ ಅರಿವು ಮೂಡಿಸುವಂತೆ ಜಿಲ್ಲಾ ಬಿಜೆಪಿ ಒಬಿಸಿ ಘಟಕದ ಅಧ್ಯಕ್ಷ ಕೆ.ಎನ್. ಅಂಜನೇಯಗೌಡ ಮನವಿ ಮಾಡಿದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ಕನಕಪ್ರಸಾದ್, ನಟರಾಜ್, ರೆಡ್ಡಿಸ್ವಾಮಿ, ಭಜರಂಗದಳದ ಬಿ.ವೆಂಕಟೇಶ್, ರಂಜಿತ್
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT