ಕಳೆದ ಸೆಪ್ಟೆಂಬರ್ನಲ್ಲಿ ರಾಮನಗರ ಜಿಲ್ಲೆಯ ಜತೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಹೆಚ್ಚುವರಿ ಹೊಣೆಗಾರಿಕೆಯನ್ನೂ ವಹಿಸಿಕೊಂಡಿದ್ದ ಅಶ್ವತ್ಥನಾರಾಯಣ್ ಅವರು, ಜಿಲ್ಲೆಯಲ್ಲಿ ಕಳೆದ ಆರೂವರೆ ತಿಂಗಳಲ್ಲಿ ಒಂದೇ ಒಂದು ಬಾರಿ ಸಭೆ ನಡೆಸಿದ್ದರು. ಅದನ್ನು ಹೊರತುಪಡಿಸಿದಂತೆ ಈವರೆಗೆ ಯಾವೊಂದು ರಾಷ್ಟ್ರೀಯ ಹಬ್ಬಗಳು, ಜಯಂತಿ ಕಾರ್ಯಕ್ರಮದಲ್ಲೂ ಸಚಿವರು ಕಾಣಿಸಿಕೊಂಡಿಲ್ಲ. ಅವರು ಹೆಸರು ಆಹ್ವಾನ ಪತ್ರಿಕೆಗೆ ಮಾತ್ರ ಸೀಮಿತವಾಗಿತ್ತು.