ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಸೂಚನೆ

Last Updated 12 ನವೆಂಬರ್ 2020, 6:56 IST
ಅಕ್ಷರ ಗಾತ್ರ

ಗೌರಿಬಿದನೂರು: ನಗರ ಹೊರವಲಯದ ಇಡಗೂರು ರಸ್ತೆಯಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಗರಸಭೆ ಅಧ್ಯಕ್ಷೆ ಕೆ.ಎಂ. ಗಾಯತ್ರಿ ಬಸವರಾಜ್ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ನಗರದಲ್ಲಿ ನಿತ್ಯ ಸಂಗ್ರಹವಾಗುವ ತ್ಯಾಜ್ಯವನ್ನು ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ವಿಲೇವಾರಿ ಮಾಡಲು ಮುಂಜಾಗ್ರತೆವಹಿಸಬೇಕಿದೆ. ಈ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ನಿತ್ಯ ವ್ಯವಸ್ಥಿತವಾಗಿ ಈ ಘಟಕಕ್ಕೆ ಕೊಂಡೊಯ್ಯಬೇಕು ಎಂದರು.

ತ್ಯಾಜ್ಯವನ್ನು ಹಸಿ ಕಸ ಮತ್ತು ಒಣ ಕಸವನ್ನಾಗಿ ಬೇರ್ಪಡಿಸಿ ಯಂತ್ರೋಪಕರಣಗಳ ಮೂಲಕ ಸಾವಯವ ಗೊಬ್ಬರವಾಗಿ ಮಾಡುವುದು ಅತ್ಯವಶ್ಯಕವಾಗಿದೆ. ಈಗಾಗಲೇ, ವೈಜ್ಞಾನಿಕ ವಿಧಾನದಡಿ ತ್ಯಾಜ್ಯ ಘಟಕ ನಿರ್ಮಾಣ ಮಾಡಲಾಗಿದೆ. ಅದರ ನಿರ್ವಹಣೆಯಲ್ಲಿ ಯಾವುದೇ ಲೋಪ ನಡೆಯದಂತೆ ನೋಡಿಕೊಳ್ಳಬೇಕು. ಈ ಘಟಕದಿಂದ ನೆರೆಯ ರೈತರಿಗೆ ತೊಂದರೆಯಾಗದಂತೆ ‌ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕಿದೆ ಎಂದು ಹೇಳಿದರು.

ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಸುರೇಶ್, ಸದಸ್ಯರಾದ ಖಲೀಂ ಉಲ್ಲಾ, ಮಂಜುಳಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT