ತ್ಯಾಜ್ಯವನ್ನು ಹಸಿ ಕಸ ಮತ್ತು ಒಣ ಕಸವನ್ನಾಗಿ ಬೇರ್ಪಡಿಸಿ ಯಂತ್ರೋಪಕರಣಗಳ ಮೂಲಕ ಸಾವಯವ ಗೊಬ್ಬರವಾಗಿ ಮಾಡುವುದು ಅತ್ಯವಶ್ಯಕವಾಗಿದೆ. ಈಗಾಗಲೇ, ವೈಜ್ಞಾನಿಕ ವಿಧಾನದಡಿ ತ್ಯಾಜ್ಯ ಘಟಕ ನಿರ್ಮಾಣ ಮಾಡಲಾಗಿದೆ. ಅದರ ನಿರ್ವಹಣೆಯಲ್ಲಿ ಯಾವುದೇ ಲೋಪ ನಡೆಯದಂತೆ ನೋಡಿಕೊಳ್ಳಬೇಕು. ಈ ಘಟಕದಿಂದ ನೆರೆಯ ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕಿದೆ ಎಂದು ಹೇಳಿದರು.