‘ಬವಣೆ ನೀಗಿಸಲು ಹಣದ ಕೊರತೆ ಇಲ್ಲ’
ನೀರಿನ ಸಮಸ್ಯೆ ಉಂಟಾಗದಂತೆ ಆಯಾ ಗ್ರಾಮ ಪಂಚಾಯಿತಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಜಿಲ್ಲಾ ಪಂಚಾಯಿತಿಯಿಂದಲೂ ಕಾಲ ಕಾಲಕ್ಕೆ ನೀರಿನ ಸಮಸ್ಯೆ ಕುರಿತು ಸ್ಪಂದನೆ ದೊರೆಯುತ್ತಿದೆ. ಪಿಡಿಒಗಳ ಸಭೆಗಳಲ್ಲೂ ಈ ಕುರಿತು ಸೂಚನೆ ನೀಡಲಾಗಿದೆ. ಸಮಸ್ಯಾತ್ಮಕ ಗ್ರಾಮಗಳಲ್ಲಿ ನೀರು ಸರಬರಾಜಿಗಾಗಿ ಖಾಸಗಿ ಕೊಳವೆಬಾವಿಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕಾರ್ಯಪಡೆಯ ತಹಶೀಲ್ದಾರ್ ಖಾತೆಯಲ್ಲಿ ₹50 ಲಕ್ಷ ಹಣವಿದೆ. ಕುಡಿಯುವ ನೀರಿನ ಪೂರೈಕೆಗೆ ಹಣದ ಕೊರತೆ ಇಲ್ಲ. ಒಟ್ಟಾರೆ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್.ಆನಂದ್ ತಾ.ಪಂ.ಕಾರ್ಯನಿರ್ವಹಣಾಧಿಕಾರಿ