ಗ್ರಾಮಗಳಲ್ಲಿ ಜನರ ನೀರಿನ ಸಮಸ್ಯೆ ಪರಿಹರಿಸಲು ಟ್ಯಾಂಕರ್ ವ್ಯವಸ್ಥೆ ಮಾಡಿದರೂ ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ. ಟ್ಯಾಂಕರ್ ನೀರಿನ ವಿಚಾರದಲ್ಲಿ ರಾಮನ ಲೆಕ್ಕ, ಕೃಷ್ಣನ ಲೆಕ್ಕ ಜೋರಾಗಿ ನಡೆಯುತ್ತಿದೆ. ಅಧಿಕಾರಿಗಳು, ಗುತ್ತಿಗೆದಾರರು ಲೆಕ್ಕ ಲೆಕ್ಕ ಹೇಳಿ ವಂಚಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.