<p><strong>ಶಿಡ್ಲಘಟ್ಟ:</strong> ಕೆಲ ಆಡಳಿತಾತ್ಮಕ ಹಾಗೂ ತಾಂತ್ರಿಕ ಕಾರಣಗಳಿಂದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಪಂಪ್ ವಿತರಣೆ ವಿಳಂಬವಾಗಿದೆ. ಇದೀಗ ಎಲ್ಲವೂ ಬಗೆಹರಿದಿದ್ದು ರೈತರಿಗೆ ವಿತರಿಸಲಾಗುತ್ತಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.</p>.<p>ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 2021-22 ಹಾಗೂ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ರೈತ ಫಲಾನುಭವಿಗಳಿಗೆ ಪಂಪ್ ಮೋಟಾರ್, ಕೇಬಲ್ ಇನ್ನಿತರೆ ಪರಿಕರಗಳನ್ನು ಪ್ರವಾಸಿ ಮಂದಿರದಲ್ಲಿ ಬುಧವಾರ ವಿತರಿಸಿ ಮಾತನಾಡಿದರು.</p>.<p>2021-22ನೇ ಸಾಲಿನಲ್ಲಿ ಆರಂಭಗೊಂಡ ಈ ಯೋಜನೆ ಕೆಲ ಸಮಸ್ಯೆಗಳಿಂದಾಗಿ ವಿಳಂಬವಾಗಿತ್ತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇದನ್ನು ಪುನಶ್ಚೇತನಗೊಳಿಸಿ ಇಂದು ಫಲಾನುಭವಿಗಳಿಗೆ ಲಾಭ ತಲುಪುವಂತೆ ಮಾಡಲಾಗಿದೆ ಎಂದು ಹೇಳಿದರು.</p>.<p>ಬಸವಾಪಟ್ಟಣ ಗ್ರಾಮದ ದೊಡ್ಡಮುನಿಯಪ್ಪ, ಕೋಟಗಲ್ ಗ್ರಾಮದ ನಾರಾಯಣಸ್ವಾಮಿ, ಬಚ್ಚಹಳ್ಳಿ ಗ್ರಾಮದ ನರಸಿಂಹಯ್ಯ, ಹಿತ್ತಲಹಳ್ಳಿ ಗ್ರಾಮದ ರವಿಕುಮಾರ್ ಮತ್ತು ನಂದನಹೊಸಳ್ಳಿ ಗ್ರಾಮದ ಶ್ರೀನಿವಾಸ್ಗೆ ಪರಿಕರ ವಿತರಿಸಲಾಯಿತು.</p>.<p>ಉಳಿದ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ತಾದೂರು ರಘು, ಕುಮಾರ್, ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಕೆಲ ಆಡಳಿತಾತ್ಮಕ ಹಾಗೂ ತಾಂತ್ರಿಕ ಕಾರಣಗಳಿಂದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಪಂಪ್ ವಿತರಣೆ ವಿಳಂಬವಾಗಿದೆ. ಇದೀಗ ಎಲ್ಲವೂ ಬಗೆಹರಿದಿದ್ದು ರೈತರಿಗೆ ವಿತರಿಸಲಾಗುತ್ತಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.</p>.<p>ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 2021-22 ಹಾಗೂ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ರೈತ ಫಲಾನುಭವಿಗಳಿಗೆ ಪಂಪ್ ಮೋಟಾರ್, ಕೇಬಲ್ ಇನ್ನಿತರೆ ಪರಿಕರಗಳನ್ನು ಪ್ರವಾಸಿ ಮಂದಿರದಲ್ಲಿ ಬುಧವಾರ ವಿತರಿಸಿ ಮಾತನಾಡಿದರು.</p>.<p>2021-22ನೇ ಸಾಲಿನಲ್ಲಿ ಆರಂಭಗೊಂಡ ಈ ಯೋಜನೆ ಕೆಲ ಸಮಸ್ಯೆಗಳಿಂದಾಗಿ ವಿಳಂಬವಾಗಿತ್ತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇದನ್ನು ಪುನಶ್ಚೇತನಗೊಳಿಸಿ ಇಂದು ಫಲಾನುಭವಿಗಳಿಗೆ ಲಾಭ ತಲುಪುವಂತೆ ಮಾಡಲಾಗಿದೆ ಎಂದು ಹೇಳಿದರು.</p>.<p>ಬಸವಾಪಟ್ಟಣ ಗ್ರಾಮದ ದೊಡ್ಡಮುನಿಯಪ್ಪ, ಕೋಟಗಲ್ ಗ್ರಾಮದ ನಾರಾಯಣಸ್ವಾಮಿ, ಬಚ್ಚಹಳ್ಳಿ ಗ್ರಾಮದ ನರಸಿಂಹಯ್ಯ, ಹಿತ್ತಲಹಳ್ಳಿ ಗ್ರಾಮದ ರವಿಕುಮಾರ್ ಮತ್ತು ನಂದನಹೊಸಳ್ಳಿ ಗ್ರಾಮದ ಶ್ರೀನಿವಾಸ್ಗೆ ಪರಿಕರ ವಿತರಿಸಲಾಯಿತು.</p>.<p>ಉಳಿದ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ತಾದೂರು ರಘು, ಕುಮಾರ್, ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>