ಚಿಕ್ಕಬಳ್ಳಾಪುರ: ‘ಮಕ್ಕಳು ನಮ್ಮ ನಡುವೆ ಓಡಾಡುವ ಚೇತನಗಳು. ಮಕ್ಕಳು ಬಹುತೇಕ ಎಲ್ಲಾ ಸಮುದಾಯಗಳ ಆಸ್ತಿ, ಮಕ್ಕಳು ಸುಖ, ಸಂತೋಷ, ನೆಮ್ಮದಿಯಿಂದ ಬಾಲ್ಯವನ್ನು ಅನುಭವಿಸಬೇಕು. ಎಂತಹದೇ ಪ್ರಸಂಗದಲ್ಲಿಯೂ ಮಕ್ಕಳು ಯಾವುದೇ ಒತ್ತಡಕ್ಕೆ ಬೀಳದೆ ಬದುಕಲು, ಜೀವನ ನಡೆಸಲು, ಎಳೆವಯಸ್ಸಿನಲ್ಲಿ ದುಡಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿ ಸಮುದಾಯದ ಮೇಲಿದೆ’ ಎಂದುಶಾಂತಾ ಟ್ರಸ್ಟ್ ಕಾರ್ಯದರ್ಶಿ, ಮಕ್ಕಳ ಹಕ್ಕುಗಳ ಹೋರಾಟಗಾರ ಎನ್.ಮುನಿನಾರಾಯಣಸ್ವಾಮಿ ಹೇಳಿದರು.