ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರದಲ್ಲಿ ಅನೇಕ ಶಾಸಕರ ಕ್ಷೇತ್ರಗಳಿಗೆ ಅನುದಾನವನ್ನೇ ನೀಡಲಿಲ್ಲ. ರಾಮನಗರ, ಮಂಡ್ಯದಲ್ಲಿ ವೈದ್ಯಕೀಯ ಕಾಲೇಜು ಇದ್ದಾಗಲೂ ಕನಕಪುರಕ್ಕೆ ವೈದ್ಯಕೀಯ ಕಾಲೇಜು ಯಾಕೆ ಬೇಕಿತ್ತು? ಕನಕಪುರಕ್ಕೆ₹450 ಕೋಟಿ ಕೊಟ್ಟಿದ್ದು ಯಾಕೆ? ಕೆಲವರು ಈಗ ತಾರತಮ್ಯ, ದ್ವೇಷದ ರಾಜಕಾರಣದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.