<p><strong>ಚಿಕ್ಕಬಳ್ಳಾಪುರ:</strong> ಗೌರಿಬಿದನೂರು ತಾಲ್ಲೂಕಿನವಿದುರಾಶ್ವತ್ಥ ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದೇ ಪ್ರಸಿದ್ಧಿ. ಇಂತಿಪ್ಪ ಐತಿಹಾಸಿಕ ನೆಲಚಿಕ್ಕಬಳ್ಳಾಪುರ ಹಾಗೂ ನೆರೆಯ ಜಿಲ್ಲೆಗಳಲ್ಲಿ ಬಿಜೆಪಿಯ ಬಲ ವಿಸ್ತರಣೆಗೆ ನೆರವಾಗುವುದೇ... ಹೀಗೊಂದು ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಗರಿಗೆದರಿದೆ. ಅದರಲ್ಲಿಯೂ ಬಿಜೆಪಿ ಹಾಗೂ ಅದರ ಅಂಗ ಸಂಸ್ಥೆಗಳಲ್ಲಿ ಈ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆದಿವೆ.</p>.<p>ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯಲ್ಲಿ ಬಿಜೆಪಿಗೆ ದೃಢವಾದ ನೆಲೆ ಇಲ್ಲ. ಈ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ. ಈ ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿಯೂ ಬಿಜೆಪಿ ಈ ಮೂರು ಜಿಲ್ಲೆಗಳಲ್ಲಿ ಉತ್ತಮ ಸಾಧನೆ ತೋರಿಲ್ಲ.</p>.<p>2023ರ ವಿಧಾನಸಭಾ ಚುನಾವಣೆಯಲ್ಲಿ ಈ ಮೂರು ಜಿಲ್ಲೆಗಳಲ್ಲಿ ಕಮಲ ಅರಳಿಸಬೇಕುಮತ್ತು ಗ್ರಾಮೀಣ ಮಟ್ಟದಲ್ಲಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸಬೇಕು ಎನ್ನುವ ದೂರದೃಷ್ಟಿ ಬಿಜೆಪಿಗೆ ಇದ್ದಂತಿವೆ.</p>.<p>ಮಲೆನಾಡು ಭಾಗದಲ್ಲಿ ಬಿಜೆಪಿ ಗಟ್ಟಿಗೊಳ್ಳಲು ದತ್ತಪೀಠದ ವಿಚಾರವು ಪ್ರಮುಖವಾಗಿ ಒದಗಿಬಂದಿತ್ತು. ಇದೇ ಮಾದರಿಯಲ್ಲಿ ಬಿಜೆಪಿ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೆಲೆ ವಿಸ್ತರಣೆಗೆ ವಿದುರಾಶ್ವತ್ಥದ ಮೇಲೆ ದೃಷ್ಟಿ ನೆಟ್ಟಿದೆ ಎಂದು ರಾಜಕೀಯ ಮುಖಂಡರು ವಿಶ್ಲೇಷಿಸುತ್ತಿದ್ದಾರೆ.</p>.<p>ಇಲ್ಲಿಯವರೆಗೂವಿದುರಾಶ್ವತ್ಥದ ವೀರಸೌಧದ ಚಿತ್ರಪಟ ಗ್ಯಾಲರಿ ಯಾವುದೇ ವಿವಾದಕ್ಕೆ ಒಳಗಾಗಿರಲಿಲ್ಲ. ಆದರೆ, ಈಗ ಇಲ್ಲಿನ ಚಿತ್ರಗಳು ಬದಲಾಗಬೇಕು ಎಂದು ಆರ್ಎಸ್ಎಸ್, ಬಿಜೆಪಿ, ಬಜರಂಗದಳದ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಗ್ಯಾಲರಿಯಲ್ಲಿರುವ ವೀಕ್ಷಕರ ಸಹಿ ಪುಸ್ತಕದಲ್ಲಿಯೂ ಚಿತ್ರಗಳು ಬದಲಾವಣೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ.</p>.<p>ಕಳೆದ ಒಂದು ತಿಂಗಳಲ್ಲಿ ಆರ್ಎಸ್ಎಸ್, ಬಜರಂಗದಳ, ವಿಶ್ವಹಿಂದೂ ಪರಿಷತ್ ಮತ್ತು ಬಿಜೆಪಿ ಮುಖಂಡರು ಚಿತ್ರಪಟ ಗ್ಯಾಲರಿಗೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ.ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಸಂದೀಪ್ ಹಾಗೂ ಕಾರ್ಯಕರ್ತರು ಗೌರಿಬಿದನೂರಿನಿಂದ ವಿದುರಾಶ್ವತ್ಥಕ್ಕೆ ಇತ್ತೀಚೆಗೆ ಬೈಕ್ ರ್ಯಾಲಿ ಸಹ ನಡೆಸಿದ್ದರು. ಈ ರ್ಯಾಲಿಯಲ್ಲಿ ಹೊರ ಜಿಲ್ಲೆಗಳ ಕಾರ್ಯಕರ್ತರು ಸಹ ಭಾಗಿಯಾಗಿದ್ದರು.</p>.<p>ಸಾವರ್ಕರ್ ಜನ್ಮದಿನ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿಯು ಬೈಕ್ ರ್ಯಾಲಿ ಹಮ್ಮಿಕೊಂಡಿತ್ತು. ಇದರಲ್ಲಿ ರಾಜಕೀಯವಿಲ್ಲ ಎಂದು ಬಿಜೆಪಿ ಯುವ ಘಟಕದ ಮುಖಂಡರು<br />ನುಡಿಯುತ್ತಾರೆ.</p>.<p>ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಬಿಜೆಪಿಗೆ ಗ್ರಾಮೀಣ ಭಾಗಗಳಲ್ಲಿ ಉತ್ತಮ ನೆಲೆ ಇರುವುದು ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ. ಈ ಕ್ಷೇತ್ರವು ಮಧುಗಿರಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೂ ಹೊಂದಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಗೌರಿಬಿದನೂರು ತಾಲ್ಲೂಕಿನವಿದುರಾಶ್ವತ್ಥ ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದೇ ಪ್ರಸಿದ್ಧಿ. ಇಂತಿಪ್ಪ ಐತಿಹಾಸಿಕ ನೆಲಚಿಕ್ಕಬಳ್ಳಾಪುರ ಹಾಗೂ ನೆರೆಯ ಜಿಲ್ಲೆಗಳಲ್ಲಿ ಬಿಜೆಪಿಯ ಬಲ ವಿಸ್ತರಣೆಗೆ ನೆರವಾಗುವುದೇ... ಹೀಗೊಂದು ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಗರಿಗೆದರಿದೆ. ಅದರಲ್ಲಿಯೂ ಬಿಜೆಪಿ ಹಾಗೂ ಅದರ ಅಂಗ ಸಂಸ್ಥೆಗಳಲ್ಲಿ ಈ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆದಿವೆ.</p>.<p>ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯಲ್ಲಿ ಬಿಜೆಪಿಗೆ ದೃಢವಾದ ನೆಲೆ ಇಲ್ಲ. ಈ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ. ಈ ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿಯೂ ಬಿಜೆಪಿ ಈ ಮೂರು ಜಿಲ್ಲೆಗಳಲ್ಲಿ ಉತ್ತಮ ಸಾಧನೆ ತೋರಿಲ್ಲ.</p>.<p>2023ರ ವಿಧಾನಸಭಾ ಚುನಾವಣೆಯಲ್ಲಿ ಈ ಮೂರು ಜಿಲ್ಲೆಗಳಲ್ಲಿ ಕಮಲ ಅರಳಿಸಬೇಕುಮತ್ತು ಗ್ರಾಮೀಣ ಮಟ್ಟದಲ್ಲಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸಬೇಕು ಎನ್ನುವ ದೂರದೃಷ್ಟಿ ಬಿಜೆಪಿಗೆ ಇದ್ದಂತಿವೆ.</p>.<p>ಮಲೆನಾಡು ಭಾಗದಲ್ಲಿ ಬಿಜೆಪಿ ಗಟ್ಟಿಗೊಳ್ಳಲು ದತ್ತಪೀಠದ ವಿಚಾರವು ಪ್ರಮುಖವಾಗಿ ಒದಗಿಬಂದಿತ್ತು. ಇದೇ ಮಾದರಿಯಲ್ಲಿ ಬಿಜೆಪಿ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೆಲೆ ವಿಸ್ತರಣೆಗೆ ವಿದುರಾಶ್ವತ್ಥದ ಮೇಲೆ ದೃಷ್ಟಿ ನೆಟ್ಟಿದೆ ಎಂದು ರಾಜಕೀಯ ಮುಖಂಡರು ವಿಶ್ಲೇಷಿಸುತ್ತಿದ್ದಾರೆ.</p>.<p>ಇಲ್ಲಿಯವರೆಗೂವಿದುರಾಶ್ವತ್ಥದ ವೀರಸೌಧದ ಚಿತ್ರಪಟ ಗ್ಯಾಲರಿ ಯಾವುದೇ ವಿವಾದಕ್ಕೆ ಒಳಗಾಗಿರಲಿಲ್ಲ. ಆದರೆ, ಈಗ ಇಲ್ಲಿನ ಚಿತ್ರಗಳು ಬದಲಾಗಬೇಕು ಎಂದು ಆರ್ಎಸ್ಎಸ್, ಬಿಜೆಪಿ, ಬಜರಂಗದಳದ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಗ್ಯಾಲರಿಯಲ್ಲಿರುವ ವೀಕ್ಷಕರ ಸಹಿ ಪುಸ್ತಕದಲ್ಲಿಯೂ ಚಿತ್ರಗಳು ಬದಲಾವಣೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ.</p>.<p>ಕಳೆದ ಒಂದು ತಿಂಗಳಲ್ಲಿ ಆರ್ಎಸ್ಎಸ್, ಬಜರಂಗದಳ, ವಿಶ್ವಹಿಂದೂ ಪರಿಷತ್ ಮತ್ತು ಬಿಜೆಪಿ ಮುಖಂಡರು ಚಿತ್ರಪಟ ಗ್ಯಾಲರಿಗೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ.ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಸಂದೀಪ್ ಹಾಗೂ ಕಾರ್ಯಕರ್ತರು ಗೌರಿಬಿದನೂರಿನಿಂದ ವಿದುರಾಶ್ವತ್ಥಕ್ಕೆ ಇತ್ತೀಚೆಗೆ ಬೈಕ್ ರ್ಯಾಲಿ ಸಹ ನಡೆಸಿದ್ದರು. ಈ ರ್ಯಾಲಿಯಲ್ಲಿ ಹೊರ ಜಿಲ್ಲೆಗಳ ಕಾರ್ಯಕರ್ತರು ಸಹ ಭಾಗಿಯಾಗಿದ್ದರು.</p>.<p>ಸಾವರ್ಕರ್ ಜನ್ಮದಿನ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿಯು ಬೈಕ್ ರ್ಯಾಲಿ ಹಮ್ಮಿಕೊಂಡಿತ್ತು. ಇದರಲ್ಲಿ ರಾಜಕೀಯವಿಲ್ಲ ಎಂದು ಬಿಜೆಪಿ ಯುವ ಘಟಕದ ಮುಖಂಡರು<br />ನುಡಿಯುತ್ತಾರೆ.</p>.<p>ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಬಿಜೆಪಿಗೆ ಗ್ರಾಮೀಣ ಭಾಗಗಳಲ್ಲಿ ಉತ್ತಮ ನೆಲೆ ಇರುವುದು ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ. ಈ ಕ್ಷೇತ್ರವು ಮಧುಗಿರಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೂ ಹೊಂದಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>