<p><strong>ಚಿಕ್ಕಬಳ್ಳಾಪುರ:</strong> ಮೆಕ್ಕಾ ಯಾತ್ರೆ ಮಾಡಿದ ಕಾರಣಕ್ಕೆ ಗೌರಿಬಿದನೂರಿನಲ್ಲಿ ಮಗನ ಮನೆಯಲ್ಲಿಯೇ ಸಂಪರ್ಕ ತಡೆಗೆ (ಕ್ವಾರಂಟೈನ್) ಒಳಗಾಗಿದ್ದ, ಆಂಧ್ರಪ್ರದೇಶದ ಹಿಂದೂಪುರ ತಾಲ್ಲೂಕಿನ 72 ವರ್ಷದ ಮಹಿಳೆಯೊಬ್ಬರು ಬುಧವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.</p>.<p>ಮೃತ ಮಹಿಳೆ ಹಿಂದೂಪುರ ತಾಲ್ಲೂಕಿನ ಚವಳೂರು ಗ್ರಾಮದವರಾಗಿದ್ದು, ವರ್ತಕರಾಗಿರುವ ಅವರ ಮಗ ಗೌರಿಬಿದನೂರಿನಲ್ಲಿ ನೆಲೆಸಿದ್ದಾರೆ.</p>.<p>ಇತ್ತೀಚೆಗಷ್ಟೇ ಮೆಕ್ಕಾ ಯಾತ್ರೆ ಮುಗಿಸಿ ವಾಪಾಸಾಗಿದ್ದ ಮಹಿಳೆ, ಮಾರ್ಚ್ 23 ರಂದು ಮಗನನ್ನು ನೋಡಲು ಬಂದಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿ ಅವರನ್ನು ತಪಾಸಣೆಗೆ ಒಳಪಡಿಸಿ, ಯಾವುದೇ ಸೋಂಕಿನ ಲಕ್ಷಣಗಳು ಕಂಡುಬರದ ಕಾರಣ ಮಗನ ಮನೆಯಲ್ಲಿಯೇ ಸಂಪರ್ಕ ತಡೆಗೆ ಒಳಪಡಿಸಿದ್ದರು.</p>.<p>ಮಧುಮೇಹ, ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಮಹಿಳೆ ಆರೋಗ್ಯ, ಮಂಗಳವಾರ ಸಂಜೆ ದಿಢೀರ್ ಹದಗೆಟ್ಟ ಕಾರಣಕ್ಕೆ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು.</p>.<p>ಸಂಪರ್ಕ ತಡೆಯಲ್ಲಿದ್ದವರ ಚಿಕಿತ್ಸೆಗೆ ಅಗತ್ಯವಾದ ಪ್ರತ್ಯೇಕ ತುರ್ತು ನಿಗಾ ಘಟಕ ವ್ಯವಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಇಲ್ಲದ ಕಾರಣಕ್ಕೆ ಮಹಿಳೆಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗ ಸಂಸ್ಥೆಗೆ ಕಳುಹಿಸಲಾಗಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p>.<p>ಮಹಿಳೆಯ ಸಾವಿನ ನಿಖರ ಕಾರಣವನ್ನು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಹೇಳಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ತಿಳಿಸಿದರು.<br />ಇತ್ತೀಚೆಗಷ್ಟೇ ಮೆಕ್ಕಾ ಯಾತ್ರೆಯಿಂದ ಹಿಂದಿಗಿರುಗಿದ ಗೌರಿಬಿದನೂರು ನಗರದ ಇಬ್ಬರು ಮತ್ತು ತೊಂಡೆಬಾವಿಯ ಒಬ್ಬ ಮಹಿಳೆಯಲ್ಲಿ ಕೋವಿಡ್ 19 ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ, ಸಂಪರ್ಕ ತಡೆಯಲ್ಲಿದ್ದ ಮಹಿಳೆ ಮೃತಪಟ್ಟಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಮೆಕ್ಕಾ ಯಾತ್ರೆ ಮಾಡಿದ ಕಾರಣಕ್ಕೆ ಗೌರಿಬಿದನೂರಿನಲ್ಲಿ ಮಗನ ಮನೆಯಲ್ಲಿಯೇ ಸಂಪರ್ಕ ತಡೆಗೆ (ಕ್ವಾರಂಟೈನ್) ಒಳಗಾಗಿದ್ದ, ಆಂಧ್ರಪ್ರದೇಶದ ಹಿಂದೂಪುರ ತಾಲ್ಲೂಕಿನ 72 ವರ್ಷದ ಮಹಿಳೆಯೊಬ್ಬರು ಬುಧವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.</p>.<p>ಮೃತ ಮಹಿಳೆ ಹಿಂದೂಪುರ ತಾಲ್ಲೂಕಿನ ಚವಳೂರು ಗ್ರಾಮದವರಾಗಿದ್ದು, ವರ್ತಕರಾಗಿರುವ ಅವರ ಮಗ ಗೌರಿಬಿದನೂರಿನಲ್ಲಿ ನೆಲೆಸಿದ್ದಾರೆ.</p>.<p>ಇತ್ತೀಚೆಗಷ್ಟೇ ಮೆಕ್ಕಾ ಯಾತ್ರೆ ಮುಗಿಸಿ ವಾಪಾಸಾಗಿದ್ದ ಮಹಿಳೆ, ಮಾರ್ಚ್ 23 ರಂದು ಮಗನನ್ನು ನೋಡಲು ಬಂದಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿ ಅವರನ್ನು ತಪಾಸಣೆಗೆ ಒಳಪಡಿಸಿ, ಯಾವುದೇ ಸೋಂಕಿನ ಲಕ್ಷಣಗಳು ಕಂಡುಬರದ ಕಾರಣ ಮಗನ ಮನೆಯಲ್ಲಿಯೇ ಸಂಪರ್ಕ ತಡೆಗೆ ಒಳಪಡಿಸಿದ್ದರು.</p>.<p>ಮಧುಮೇಹ, ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಮಹಿಳೆ ಆರೋಗ್ಯ, ಮಂಗಳವಾರ ಸಂಜೆ ದಿಢೀರ್ ಹದಗೆಟ್ಟ ಕಾರಣಕ್ಕೆ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು.</p>.<p>ಸಂಪರ್ಕ ತಡೆಯಲ್ಲಿದ್ದವರ ಚಿಕಿತ್ಸೆಗೆ ಅಗತ್ಯವಾದ ಪ್ರತ್ಯೇಕ ತುರ್ತು ನಿಗಾ ಘಟಕ ವ್ಯವಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಇಲ್ಲದ ಕಾರಣಕ್ಕೆ ಮಹಿಳೆಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗ ಸಂಸ್ಥೆಗೆ ಕಳುಹಿಸಲಾಗಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p>.<p>ಮಹಿಳೆಯ ಸಾವಿನ ನಿಖರ ಕಾರಣವನ್ನು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಹೇಳಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ತಿಳಿಸಿದರು.<br />ಇತ್ತೀಚೆಗಷ್ಟೇ ಮೆಕ್ಕಾ ಯಾತ್ರೆಯಿಂದ ಹಿಂದಿಗಿರುಗಿದ ಗೌರಿಬಿದನೂರು ನಗರದ ಇಬ್ಬರು ಮತ್ತು ತೊಂಡೆಬಾವಿಯ ಒಬ್ಬ ಮಹಿಳೆಯಲ್ಲಿ ಕೋವಿಡ್ 19 ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ, ಸಂಪರ್ಕ ತಡೆಯಲ್ಲಿದ್ದ ಮಹಿಳೆ ಮೃತಪಟ್ಟಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>