ಗೌರಿಬಿದನೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಮಂಗಳವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಜಿ. ಸಿದ್ದಗಂಗಪ್ಪ ಮಾತನಾಡಿ, ಪ್ರಸ್ತುತ ದೇಶದಲ್ಲಿನ ಕಾರ್ಮಿಕರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರ ಅಳಿವು ಉಳಿವಿಗೆ ಏಳನೇ ವೇತನ ಆಯೋಗವನ್ನು ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಆರ್. ರವಿಚಂದ್ರರೆಡ್ಡಿ, ಮಂಜುನಾಥಚಾರಿ, ಅಂಗನವಾಡಿ ಸಂಘಟನೆಯ ವೆಂಕಟಲಕ್ಷ್ಮಮ್ಮ, ಜಯಮಂಗಲ, ರಾಜಮ್ಮ ನರಸಮ್ಮ ಪಾಲ್ಗೊಂಡಿದ್ದರು.