<p><strong>ಗೌರಿಬಿದನೂರು:</strong> ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ತಂಬಾಕು ದಿನಾಚರಣೆಯನ್ನು ಆರೋಗ್ಯ ಇಲಾಖೆ ಮತ್ತು ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ಹಮ್ಮಿಕೊಳ್ಳಲಾಗಿತ್ತು.</p>.<p>ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರಮೋಹನ್ ರೆಡ್ಡಿ ಮಾತನಾಡಿ, ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮ<br>ಬೀರುತ್ತವೆ. ದುಶ್ಚಟಗಳಿಗೆ ಬಲಿಯಾಗಬಾರದು. ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಳ್ಳಬೇಕು. ಸಿಗರೇಟ್, ಗುಟ್ಕಾ ಸೇವನೆಯಿಂದ ಕ್ಯಾನ್ಸರ್ನಂತಹ ಸಾವಿಗೆ ತಂದೊಡ್ದುವ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದರು.</p>.<p>ಫಯಾಜ್ ಪಟೇಲ್ ಮಾತನಾಡಿ, ಕಾಲೇಜು ದಿನಗಳಲ್ಲಿ ದುಶ್ಚಟಗಳಿಗೆ ಆಕರ್ಷಣೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಿಗರೇಟ್, ಗುಟ್ಕಾ ಮುಂತಾದ ತಂಬಾಕುಯುಕ್ತ ಪದಾರ್ಥ ಸೇವಿಸುವುದನ್ನು ತ್ಯಜಿಸಬೇಕು ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ದಿನೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮಾ ಶಂಕರ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ತಂಬಾಕು ದಿನಾಚರಣೆಯನ್ನು ಆರೋಗ್ಯ ಇಲಾಖೆ ಮತ್ತು ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ಹಮ್ಮಿಕೊಳ್ಳಲಾಗಿತ್ತು.</p>.<p>ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರಮೋಹನ್ ರೆಡ್ಡಿ ಮಾತನಾಡಿ, ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮ<br>ಬೀರುತ್ತವೆ. ದುಶ್ಚಟಗಳಿಗೆ ಬಲಿಯಾಗಬಾರದು. ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಳ್ಳಬೇಕು. ಸಿಗರೇಟ್, ಗುಟ್ಕಾ ಸೇವನೆಯಿಂದ ಕ್ಯಾನ್ಸರ್ನಂತಹ ಸಾವಿಗೆ ತಂದೊಡ್ದುವ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದರು.</p>.<p>ಫಯಾಜ್ ಪಟೇಲ್ ಮಾತನಾಡಿ, ಕಾಲೇಜು ದಿನಗಳಲ್ಲಿ ದುಶ್ಚಟಗಳಿಗೆ ಆಕರ್ಷಣೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಿಗರೇಟ್, ಗುಟ್ಕಾ ಮುಂತಾದ ತಂಬಾಕುಯುಕ್ತ ಪದಾರ್ಥ ಸೇವಿಸುವುದನ್ನು ತ್ಯಜಿಸಬೇಕು ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ದಿನೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮಾ ಶಂಕರ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>