ಗಲ್ಲಿ ಗಲ್ಲಿಗಳಲ್ಲಿ, ಊರು ಕೇರಿಗಳಲ್ಲಿ, ನಗರ, ಪಟ್ಟಣ ಪ್ರದೇಶ ಹೀಗೆ ಎಲ್ಲೆಂದರಲ್ಲಿ ಗಣೇಶೋತ್ಸವ ಸಮಿತಿಗಳು ಪ್ರತಿಷ್ಠಾಪಿಸುತ್ತಿದ್ದ ವಿಘ್ನವಿನಾಶಕನಿಗೆ ಈ ಬಾರಿ ಕೊರೊನಾ ಸೋಂಕಿನ ಭೀತಿ ವಿಘ್ನ ತಂದಿಟ್ಟಿದೆ. ಆಯ್ದ ದೇವಾಲಯಗಳಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಿತ್ಯ ಬಗೆ ಬಗೆಯ ಪೂಜೆಗಳನ್ನು ನೆರವೇರಿಸಲಾಗುತ್ತಿದೆ.