<p><strong>ಚಿಕ್ಕಬಳ್ಳಾಪುರ:</strong> ಭಾದ್ರಪದ ಮಾಸದ ಚೌತಿಯ ದಿನವಾದ ಶನಿವಾರದಿಂದ ಜಿಲ್ಲೆಯಾದ್ಯಂತ ಗಣಪತಿ ಹಬ್ಬವನ್ನು ಸಂಭ್ರಮ, ಸಡಗರ ಮತ್ತು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.</p>.<p>ಗಲ್ಲಿ ಗಲ್ಲಿಗಳಲ್ಲಿ, ಊರು ಕೇರಿಗಳಲ್ಲಿ, ನಗರ, ಪಟ್ಟಣ ಪ್ರದೇಶ ಹೀಗೆ ಎಲ್ಲೆಂದರಲ್ಲಿ ಗಣೇಶೋತ್ಸವ ಸಮಿತಿಗಳು ಪ್ರತಿಷ್ಠಾಪಿಸುತ್ತಿದ್ದ ವಿಘ್ನವಿನಾಶಕನಿಗೆ ಈ ಬಾರಿ ಕೊರೊನಾ ಸೋಂಕಿನ ಭೀತಿ ವಿಘ್ನ ತಂದಿಟ್ಟಿದೆ. ಆಯ್ದ ದೇವಾಲಯಗಳಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಿತ್ಯ ಬಗೆ ಬಗೆಯ ಪೂಜೆಗಳನ್ನು ನೆರವೇರಿಸಲಾಗುತ್ತಿದೆ.</p>.<p>ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಣಪತಿಯ ಹಬ್ಬಕ್ಕೆ ಮೆರಗು ತುಂಬುತ್ತಿದ್ದ ಸಮಿತಿಗಳು ಈ ಬಾರಿ ಸರಳವಾಗಿ ಹಬ್ಬ ಆಚರಿಸಲು ನಿರ್ಧರಿಸಿವೆ.</p>.<p>ನಗರದಲ್ಲಿ ಮನೆ ಮನೆಗಳಲ್ಲಿ ಕೂಡ ಗಜವದನನ ಆರಾಧನೆ ಬಹು ಜೋರಿನಿಂದಲೇ ನಡೆದಿದ್ದು, ಬಗೆ ಬಗೆಯಲ್ಲಿ ಮಂಟಪವನ್ನು ನಿರ್ಮಿಸಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಮೋದಕ, ಕಡುಬು ಮಾಡಿ ನೈವೇದ್ಯ ಅರ್ಪಿಸುವ ಜತೆಗೆ ರಜೆಯ ಮೋಜಿನಲ್ಲಿ ನಾಗರಿಕರು ಹಬ್ಬದೂಟವನ್ನು ಸವಿದರು.</p>.<p>ಪ್ರತಿ ವರ್ಷ ಚತುರ್ಥಿ ಸಮಯದಲ್ಲಿ ರಾತ್ರಿ ವೇಳೆ ಕುಟುಂಬ ಸಮೇತ ನಗರದ ಗಲ್ಲಿ ಗಲ್ಲಿಗಳಲ್ಲಿ ಪ್ರತಿಷ್ಠಾಪಿಸಿರುವ ವೈವಿಧ್ಯಮಯ ಲಂಬೋದರ ಮೂರ್ತಿಗಳ ದರ್ಶನ ಪಡೆಯಲು ಪ್ರದಕ್ಷಿಣೆ ಹಾಕುತ್ತಿದ್ದ ಜನರು ಈ ಬಾರಿ ಕೋವಿಡ್ ಕಾರಣಕ್ಕೆ ಮನೆಯಲ್ಲಿಯೇ ಉಳಿದು ಹಬ್ಬದ ಆಚರಿಸಿದರು.</p>.<p>ನಗರದ ವಿದ್ಯಾ ಗಣಪತಿ ಕನ್ನಡಾಂಬೆ ಗೆಳೆಯರ ಸಂಘ, ಮುನ್ಸಿಪಲ್ ಬಡಾವಣೆಯ ಸಿದ್ಧಿ ವಿನಾಯಕ ಗೆಳೆಯರ ಸಂಘ, ಓಂಕಾರ ಗಣಪತಿ ಯುವಕರ ಸಂಘ ಸೇರಿದಂತೆ ವಿವಿಧ ಗಣೇಶೋತ್ಸವ ಸಮಿತಿಗಳು ಈ ಬಾರಿ ಅದ್ದೂರಿತನ ಕೈಬಿಟ್ಟು ಸರಳ ಆಚರಣೆ ಒತ್ತು ನೀಡಿವೆ.</p>.<p>ಕೊರೊನಾ ಸೋಂಕಿನ ತೀವ್ರತೆ ಹೆಚ್ಚಾಗುತ್ತಿರುವ ಕಾರಣ ಈ ಬಾರಿ ಜಿಲ್ಲಾಡಳಿತ ‘ಪರಿಸರ ಸ್ನೇಹಿ ಜತೆಗೆ ಆರೋಗ್ಯ ಸ್ನೇಹಿ' ಗಣೇಶೋತ್ಸವಕ್ಕೆ ಕರೆ ನೀಡಿತ್ತು. ರೋಗ ನಿರೋಧಕ ಶಕ್ತಿ ಉಳ್ಳ ಅರಿಶಿಣದಿಂದ ಮನೆಯಲ್ಲಿಯೇ ಗಣೇಶನ ಮೂರ್ತಿ ತಯಾರಿಸಿ ಪೂಜಿಸಿ, ಮನೆಯಲ್ಲಿಯೇ ವಿಸರ್ಜಿಸುವಂತೆ ಮನವಿ ಮಾಡಿತ್ತು.</p>.<p>ಪರಿಸರದ ಮೇಲೆ ಭಾರಿ ಪರಿಣಾಮ ಬೀರುವಂತಹ ಪಿಓಪಿ ಗಣೇಶ ಹಾಗೂ ರಾಸಾಯನಿಕ ಬಣ್ಣಗಳನ್ನೊಳಗೊಂಡ ಮೂರ್ತಿಗಳನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿದ್ದು, ಸೋಂಕಿನ ಕಾರಣಕ್ಕೆ ಈ ಬಾರಿ ಮೆರವಣಿಗೆಯನ್ನು ಮತ್ತು ಕೆರೆ ಕುಂಟೆಗಳಲ್ಲಿ ಮೂರ್ತಿ ವಿಸರ್ಜನೆ ನಿಷೇಧಿಸಿದೆ.</p>.<p>ಚಿಕ್ಕಬಳ್ಳಾಪುರ ನಗರಸಭೆ ವತಿಯಿಂದ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ನಗರ ಹೊರವಲಯದ ತಿಪ್ಪೇನಹಳ್ಳಿ ಪಂಪ್ಹೌಸ್ ಬಳಿ ಗಣೇಶ ವಿಗ್ರಹಗಳ ವಿಸರ್ಜನೆ ಮಾಡಲು ಪ್ರತ್ಯೇಕವಾದ ವಿಸರ್ಜನಾ ಗುಂಡಿಗಳು ಮತ್ತು ನಗರಸಭಾ ವ್ಯಾಪ್ತಿಯಲ್ಲಿ ಒಂಬತ್ತು ದೇವಾಲಯಗಳಲ್ಲಿ ಗಣೇಶ ಮೂರ್ತಿಗಳ ವಿರ್ಜನೆಗೆ ಪ್ರತ್ಯೇಕವಾದ ಡ್ರಮ್ಗಳನ್ನು ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಭಾದ್ರಪದ ಮಾಸದ ಚೌತಿಯ ದಿನವಾದ ಶನಿವಾರದಿಂದ ಜಿಲ್ಲೆಯಾದ್ಯಂತ ಗಣಪತಿ ಹಬ್ಬವನ್ನು ಸಂಭ್ರಮ, ಸಡಗರ ಮತ್ತು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.</p>.<p>ಗಲ್ಲಿ ಗಲ್ಲಿಗಳಲ್ಲಿ, ಊರು ಕೇರಿಗಳಲ್ಲಿ, ನಗರ, ಪಟ್ಟಣ ಪ್ರದೇಶ ಹೀಗೆ ಎಲ್ಲೆಂದರಲ್ಲಿ ಗಣೇಶೋತ್ಸವ ಸಮಿತಿಗಳು ಪ್ರತಿಷ್ಠಾಪಿಸುತ್ತಿದ್ದ ವಿಘ್ನವಿನಾಶಕನಿಗೆ ಈ ಬಾರಿ ಕೊರೊನಾ ಸೋಂಕಿನ ಭೀತಿ ವಿಘ್ನ ತಂದಿಟ್ಟಿದೆ. ಆಯ್ದ ದೇವಾಲಯಗಳಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಿತ್ಯ ಬಗೆ ಬಗೆಯ ಪೂಜೆಗಳನ್ನು ನೆರವೇರಿಸಲಾಗುತ್ತಿದೆ.</p>.<p>ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಣಪತಿಯ ಹಬ್ಬಕ್ಕೆ ಮೆರಗು ತುಂಬುತ್ತಿದ್ದ ಸಮಿತಿಗಳು ಈ ಬಾರಿ ಸರಳವಾಗಿ ಹಬ್ಬ ಆಚರಿಸಲು ನಿರ್ಧರಿಸಿವೆ.</p>.<p>ನಗರದಲ್ಲಿ ಮನೆ ಮನೆಗಳಲ್ಲಿ ಕೂಡ ಗಜವದನನ ಆರಾಧನೆ ಬಹು ಜೋರಿನಿಂದಲೇ ನಡೆದಿದ್ದು, ಬಗೆ ಬಗೆಯಲ್ಲಿ ಮಂಟಪವನ್ನು ನಿರ್ಮಿಸಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಮೋದಕ, ಕಡುಬು ಮಾಡಿ ನೈವೇದ್ಯ ಅರ್ಪಿಸುವ ಜತೆಗೆ ರಜೆಯ ಮೋಜಿನಲ್ಲಿ ನಾಗರಿಕರು ಹಬ್ಬದೂಟವನ್ನು ಸವಿದರು.</p>.<p>ಪ್ರತಿ ವರ್ಷ ಚತುರ್ಥಿ ಸಮಯದಲ್ಲಿ ರಾತ್ರಿ ವೇಳೆ ಕುಟುಂಬ ಸಮೇತ ನಗರದ ಗಲ್ಲಿ ಗಲ್ಲಿಗಳಲ್ಲಿ ಪ್ರತಿಷ್ಠಾಪಿಸಿರುವ ವೈವಿಧ್ಯಮಯ ಲಂಬೋದರ ಮೂರ್ತಿಗಳ ದರ್ಶನ ಪಡೆಯಲು ಪ್ರದಕ್ಷಿಣೆ ಹಾಕುತ್ತಿದ್ದ ಜನರು ಈ ಬಾರಿ ಕೋವಿಡ್ ಕಾರಣಕ್ಕೆ ಮನೆಯಲ್ಲಿಯೇ ಉಳಿದು ಹಬ್ಬದ ಆಚರಿಸಿದರು.</p>.<p>ನಗರದ ವಿದ್ಯಾ ಗಣಪತಿ ಕನ್ನಡಾಂಬೆ ಗೆಳೆಯರ ಸಂಘ, ಮುನ್ಸಿಪಲ್ ಬಡಾವಣೆಯ ಸಿದ್ಧಿ ವಿನಾಯಕ ಗೆಳೆಯರ ಸಂಘ, ಓಂಕಾರ ಗಣಪತಿ ಯುವಕರ ಸಂಘ ಸೇರಿದಂತೆ ವಿವಿಧ ಗಣೇಶೋತ್ಸವ ಸಮಿತಿಗಳು ಈ ಬಾರಿ ಅದ್ದೂರಿತನ ಕೈಬಿಟ್ಟು ಸರಳ ಆಚರಣೆ ಒತ್ತು ನೀಡಿವೆ.</p>.<p>ಕೊರೊನಾ ಸೋಂಕಿನ ತೀವ್ರತೆ ಹೆಚ್ಚಾಗುತ್ತಿರುವ ಕಾರಣ ಈ ಬಾರಿ ಜಿಲ್ಲಾಡಳಿತ ‘ಪರಿಸರ ಸ್ನೇಹಿ ಜತೆಗೆ ಆರೋಗ್ಯ ಸ್ನೇಹಿ' ಗಣೇಶೋತ್ಸವಕ್ಕೆ ಕರೆ ನೀಡಿತ್ತು. ರೋಗ ನಿರೋಧಕ ಶಕ್ತಿ ಉಳ್ಳ ಅರಿಶಿಣದಿಂದ ಮನೆಯಲ್ಲಿಯೇ ಗಣೇಶನ ಮೂರ್ತಿ ತಯಾರಿಸಿ ಪೂಜಿಸಿ, ಮನೆಯಲ್ಲಿಯೇ ವಿಸರ್ಜಿಸುವಂತೆ ಮನವಿ ಮಾಡಿತ್ತು.</p>.<p>ಪರಿಸರದ ಮೇಲೆ ಭಾರಿ ಪರಿಣಾಮ ಬೀರುವಂತಹ ಪಿಓಪಿ ಗಣೇಶ ಹಾಗೂ ರಾಸಾಯನಿಕ ಬಣ್ಣಗಳನ್ನೊಳಗೊಂಡ ಮೂರ್ತಿಗಳನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿದ್ದು, ಸೋಂಕಿನ ಕಾರಣಕ್ಕೆ ಈ ಬಾರಿ ಮೆರವಣಿಗೆಯನ್ನು ಮತ್ತು ಕೆರೆ ಕುಂಟೆಗಳಲ್ಲಿ ಮೂರ್ತಿ ವಿಸರ್ಜನೆ ನಿಷೇಧಿಸಿದೆ.</p>.<p>ಚಿಕ್ಕಬಳ್ಳಾಪುರ ನಗರಸಭೆ ವತಿಯಿಂದ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ನಗರ ಹೊರವಲಯದ ತಿಪ್ಪೇನಹಳ್ಳಿ ಪಂಪ್ಹೌಸ್ ಬಳಿ ಗಣೇಶ ವಿಗ್ರಹಗಳ ವಿಸರ್ಜನೆ ಮಾಡಲು ಪ್ರತ್ಯೇಕವಾದ ವಿಸರ್ಜನಾ ಗುಂಡಿಗಳು ಮತ್ತು ನಗರಸಭಾ ವ್ಯಾಪ್ತಿಯಲ್ಲಿ ಒಂಬತ್ತು ದೇವಾಲಯಗಳಲ್ಲಿ ಗಣೇಶ ಮೂರ್ತಿಗಳ ವಿರ್ಜನೆಗೆ ಪ್ರತ್ಯೇಕವಾದ ಡ್ರಮ್ಗಳನ್ನು ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>