<p><strong>ಚಿಂತಾಮಣಿ: </strong>ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳ ಕೈವಾರದಲ್ಲಿ ಗುರುವಾರ ಮಕರ ಸಂಕ್ರಾಂತಿ ಪ್ರಯುಕ್ತ ಯೋಗಿನಾರೇಯಣ ಮಠ, ಅಮರನಾರೇಯಣಸ್ವಾಮಿ ದೇವಾಲಯ, ಭೀಮಲಿಂಗೇಶ್ವರಸ್ವಾಮಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಸಂಕ್ರಾಂತಿಯ ಸಂದರ್ಭದಲ್ಲಿ ಯೋಗಿನಾರೇಯಣ ಯತೀಂದ್ರರಿಗೆ ಮಾಲೆಯನ್ನು ಹಾಕುವ ಸಂಪ್ರದಾಯವಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ವರ್ಷ ಕಡಿಮೆ ಸಂಖ್ಯೆಯಲ್ಲಿ ಮಾಲಾಧಾರಿಗಳು ಸಾಮೂಹಿಕವಾಗಿ ಮಠಕ್ಕೆ ಆಗಮಿಸಿ ತಾತಯ್ಯನವರ ಸೇವೆಯಲ್ಲಿ ಪಾಲ್ಗೊಂಡಿದ್ದರು.</p>.<p>ತಾತಯ್ಯನವರ ಮಠದಲ್ಲಿ ದೇವಾಲಯದ ಪ್ರಾಕಾರೋತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ತಾತಯ್ಯನವರ ಬೃಂದಾವನದಲ್ಲಿ ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆಯ ನಂತರ ಉತ್ಸವಮೂರ್ತಿಯನ್ನು ಶಾಸ್ತ್ರೋಕ್ತವಾಗಿ ಮಂಗಳ<br />ವಾದ್ಯಗಳೊಂದಿಗೆ ಶಾಸ್ತ್ರೋಕ್ತವಾಗಿ ಕರೆತಂದು ಅಲಂಕೃತ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಲಾಯಿತು. ಅರ್ಚಕ ವೃಂದದವರು ಮತ್ತೊಮ್ಮೆ ಪೂಜೆ ನೆರವೇರಿಸಿ ಉತ್ಸವವನ್ನು ನಡೆಸಲಾಯಿತು. ಭಕ್ತರು ತಾತಯ್ಯನವರ ದರ್ಶನ ಪಡೆದು ಪುನೀತರಾದರು. ಮಾಲಾಧಾರಿಗಳು ಮಠದ ಆವರಣದಲ್ಲಿ ಸಂಕೀರ್ತನಾ ಭಜನೆಯನ್ನು ಮಾಡಿದರು. ನಾದಸುಧಾರಸ ವೇದಿಕೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಮಠದ ಗೋಶಾಲೆಯಲ್ಲಿ ಸಂಕ್ರಾಂತಿ ಪ್ರಯುಕ್ತ ಗೋಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.ಗೋವುಗಳನ್ನು ಸ್ವಚ್ಛಗೊಳಿಸಿ ವಿಶೇಷವಾಗಿ ಅಲಂಕರಿಸಲಾಗಿತ್ತು. ಹರಿಶಿನ ಕುಂಕುಮ, ಗಂಧವನ್ನು ಸಮರ್ಪಿಸಿ, ಅಷ್ಟೋತ್ತರ ಸೇವೆ ನೆರವೇರಿಸಿ ಮಂಗಳ ನಿರಾಜನವನ್ನು ಸಮರ್ಪಿಸಲಾಯಿತು. ಗ್ರಾಮದ ಜನರು ತಮ್ಮ ರಾಸುಗಳನ್ನು ಸಿಂಗರಿಸಿ ಮಠಕ್ಕೆ ಕರೆತಂದು ಪೂಜೆ ಸಲ್ಲಿಸಿದರು.</p>.<p>ಯತೀಂದ್ರರ ಮಾಲಾಧಾರಿಗಳಾಗಿದ್ದ ಭಕ್ತರು ಕೈವಾರದ ಪ್ರಮುಖ ರಸ್ತೆಗಳಲ್ಲಿ ಸಂಕೀರ್ತನೆಯೊಂದಿಗೆ ಭಜನೆಯಲ್ಲಿ ಪಾಲ್ಗೊಂಡರು. ಎಲ್ಲ ಭಕ್ತರಿಗೆ ಮಠದಲ್ಲಿ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<p class="Subhead">ಅಕ್ಕಿದಾನ: ಆನೇಕಲ್ ತಾಲ್ಲೂಕಿನ ಚಿಕ್ಕತಿಮ್ಮಸಂದ್ರ ಗ್ರಾಮದ ಭಕ್ತರು ಯೋಗಿನಾರೇಯಣ ಮಠದಲ್ಲಿ ಪ್ರತಿನಿತ್ಯ ನಡೆಯುವ ಉಚಿತ ಅನ್ನದಾನಕ್ಕಾಗಿ 50 ಕ್ವಿಂಟಾಲ್ ಅಕ್ಕಿಯನ್ನು ದಾನವಾಗಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳ ಕೈವಾರದಲ್ಲಿ ಗುರುವಾರ ಮಕರ ಸಂಕ್ರಾಂತಿ ಪ್ರಯುಕ್ತ ಯೋಗಿನಾರೇಯಣ ಮಠ, ಅಮರನಾರೇಯಣಸ್ವಾಮಿ ದೇವಾಲಯ, ಭೀಮಲಿಂಗೇಶ್ವರಸ್ವಾಮಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಸಂಕ್ರಾಂತಿಯ ಸಂದರ್ಭದಲ್ಲಿ ಯೋಗಿನಾರೇಯಣ ಯತೀಂದ್ರರಿಗೆ ಮಾಲೆಯನ್ನು ಹಾಕುವ ಸಂಪ್ರದಾಯವಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ವರ್ಷ ಕಡಿಮೆ ಸಂಖ್ಯೆಯಲ್ಲಿ ಮಾಲಾಧಾರಿಗಳು ಸಾಮೂಹಿಕವಾಗಿ ಮಠಕ್ಕೆ ಆಗಮಿಸಿ ತಾತಯ್ಯನವರ ಸೇವೆಯಲ್ಲಿ ಪಾಲ್ಗೊಂಡಿದ್ದರು.</p>.<p>ತಾತಯ್ಯನವರ ಮಠದಲ್ಲಿ ದೇವಾಲಯದ ಪ್ರಾಕಾರೋತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ತಾತಯ್ಯನವರ ಬೃಂದಾವನದಲ್ಲಿ ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆಯ ನಂತರ ಉತ್ಸವಮೂರ್ತಿಯನ್ನು ಶಾಸ್ತ್ರೋಕ್ತವಾಗಿ ಮಂಗಳ<br />ವಾದ್ಯಗಳೊಂದಿಗೆ ಶಾಸ್ತ್ರೋಕ್ತವಾಗಿ ಕರೆತಂದು ಅಲಂಕೃತ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಲಾಯಿತು. ಅರ್ಚಕ ವೃಂದದವರು ಮತ್ತೊಮ್ಮೆ ಪೂಜೆ ನೆರವೇರಿಸಿ ಉತ್ಸವವನ್ನು ನಡೆಸಲಾಯಿತು. ಭಕ್ತರು ತಾತಯ್ಯನವರ ದರ್ಶನ ಪಡೆದು ಪುನೀತರಾದರು. ಮಾಲಾಧಾರಿಗಳು ಮಠದ ಆವರಣದಲ್ಲಿ ಸಂಕೀರ್ತನಾ ಭಜನೆಯನ್ನು ಮಾಡಿದರು. ನಾದಸುಧಾರಸ ವೇದಿಕೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಮಠದ ಗೋಶಾಲೆಯಲ್ಲಿ ಸಂಕ್ರಾಂತಿ ಪ್ರಯುಕ್ತ ಗೋಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.ಗೋವುಗಳನ್ನು ಸ್ವಚ್ಛಗೊಳಿಸಿ ವಿಶೇಷವಾಗಿ ಅಲಂಕರಿಸಲಾಗಿತ್ತು. ಹರಿಶಿನ ಕುಂಕುಮ, ಗಂಧವನ್ನು ಸಮರ್ಪಿಸಿ, ಅಷ್ಟೋತ್ತರ ಸೇವೆ ನೆರವೇರಿಸಿ ಮಂಗಳ ನಿರಾಜನವನ್ನು ಸಮರ್ಪಿಸಲಾಯಿತು. ಗ್ರಾಮದ ಜನರು ತಮ್ಮ ರಾಸುಗಳನ್ನು ಸಿಂಗರಿಸಿ ಮಠಕ್ಕೆ ಕರೆತಂದು ಪೂಜೆ ಸಲ್ಲಿಸಿದರು.</p>.<p>ಯತೀಂದ್ರರ ಮಾಲಾಧಾರಿಗಳಾಗಿದ್ದ ಭಕ್ತರು ಕೈವಾರದ ಪ್ರಮುಖ ರಸ್ತೆಗಳಲ್ಲಿ ಸಂಕೀರ್ತನೆಯೊಂದಿಗೆ ಭಜನೆಯಲ್ಲಿ ಪಾಲ್ಗೊಂಡರು. ಎಲ್ಲ ಭಕ್ತರಿಗೆ ಮಠದಲ್ಲಿ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<p class="Subhead">ಅಕ್ಕಿದಾನ: ಆನೇಕಲ್ ತಾಲ್ಲೂಕಿನ ಚಿಕ್ಕತಿಮ್ಮಸಂದ್ರ ಗ್ರಾಮದ ಭಕ್ತರು ಯೋಗಿನಾರೇಯಣ ಮಠದಲ್ಲಿ ಪ್ರತಿನಿತ್ಯ ನಡೆಯುವ ಉಚಿತ ಅನ್ನದಾನಕ್ಕಾಗಿ 50 ಕ್ವಿಂಟಾಲ್ ಅಕ್ಕಿಯನ್ನು ದಾನವಾಗಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>