<p>ಚಿಕ್ಕಬಳ್ಳಾಪುರ: ‘ಜಿಲ್ಲಾ ವಕ್ಫ್ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎಸ್.ರಫೀವುಲ್ಲಾ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಇಂದಿಗೂ ಸಮಿತಿಗೇ ನಾನೇ ಅಧ್ಯಕ್ಷ ಎಂದು ತಪ್ಪು ಸಂದೇಶಗಳನ್ನು ಹರಿಬಿಡುವ ಮೂಲಕ ಸಮುದಾಯದ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಇಂತಿಯಾಜ್ ಪಾಷಾ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಮೇ.9 ರಂದು ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿರುವೆ. ಈ ಹಿಂದೆ ಅಧ್ಯಕ್ಷರಾಗಿದ್ದ ರಫೀವುಲ್ಲಾ ಅವರು ನನ್ನ ನೇಮಕಾತಿ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ’ ಎಂದು ತಿಳಿಸಿದರು.</p>.<p>‘ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರಾಜ್ಯ ವಕ್ಫ್ ಸಮಿತಿಯ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ನಾನು ಅಧ್ಯಕ್ಷನಾಗಿ ಕೆಲಸ ಮಾಡುತ್ತಿರುವೆ. ಇತ್ತೀಚೆಗೆ ಸರ್ಕಾರ, ವಕ್ಫ್ ಸಮಿತಿ ನಿರ್ದೇಶನದಂತೆ ದರ್ಗಾ ಹಾಗೂ ಮಸೀದಿಗಳಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕೈಗೊಳ್ಳಲಾಗಿತ್ತು. ಆ ಕೆಲಸವನ್ನು ತಾನು ಮಾಡಿಸಿದ್ದು ಎಂದು ರಫೀವುಲ್ಲಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ಹರಡುತ್ತಿದ್ದಾರೆ’ ಎಂದರು.</p>.<p>‘ಲಾಕ್ಡೌನ್ ಸಂಕಷ್ಟದ ಕಾರಣಕ್ಕೆ ಜಮಾತ್ ಅಹ್ಲೆ ಇಸ್ಲಾಂಗೆ ಸೇರಿದ 55 ಅಂಗಡಿಗಳ ವ್ಯಾಪಾರಿಗಳಿಗೆ ಎರಡು ತಿಂಗಳ ಬಾಡಿಗೆ (ಸುಮಾರು ₹5 ಲಕ್ಷ) ವಿನಾಯಿತಿ ನೀಡಲಾಗಿದೆ. ಉಳಿದ ತಾಲ್ಲೂಕುಗಳಲ್ಲೂ ಈ ವಿನಾಯಿತಿ ವಿಚಾರವಾಗಿ ಸಮಿತಿಗಳೊಂದಿಗೆ ಚರ್ಚಿಸಲಾಗುವುದು’ ಎಂದು ಹೇಳಿದರು.</p>.<p>‘ಮಾಜಿ ಅಧ್ಯಕ್ಷರ ಕಾಲದಲ್ಲಿ ಬಾಕಿ ಉಳಿದಿದ್ದ ಮಳಿಗೆಗಳ ₹23 ಲಕ್ಷ ಬಾಡಿಗೆಯಲ್ಲಿ ₹3.70 ಲಕ್ಷ ವಸೂಲಿ ಮಾಡಲಾಗಿದೆ. ರಫೀವುಲ್ಲಾ ಅವರು ತಪ್ಪು ತಿದ್ದುಕೊಳ್ಳಲಿ. ಇಲ್ಲದಿದ್ದರೆ ಕಾನೂನಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು. ಮುಖಂಡರಾದ ಜಿಯಾವುಲ್ಲಾ, ಮುಜಾಮಿಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ‘ಜಿಲ್ಲಾ ವಕ್ಫ್ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎಸ್.ರಫೀವುಲ್ಲಾ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಇಂದಿಗೂ ಸಮಿತಿಗೇ ನಾನೇ ಅಧ್ಯಕ್ಷ ಎಂದು ತಪ್ಪು ಸಂದೇಶಗಳನ್ನು ಹರಿಬಿಡುವ ಮೂಲಕ ಸಮುದಾಯದ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಇಂತಿಯಾಜ್ ಪಾಷಾ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಮೇ.9 ರಂದು ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿರುವೆ. ಈ ಹಿಂದೆ ಅಧ್ಯಕ್ಷರಾಗಿದ್ದ ರಫೀವುಲ್ಲಾ ಅವರು ನನ್ನ ನೇಮಕಾತಿ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ’ ಎಂದು ತಿಳಿಸಿದರು.</p>.<p>‘ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರಾಜ್ಯ ವಕ್ಫ್ ಸಮಿತಿಯ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ನಾನು ಅಧ್ಯಕ್ಷನಾಗಿ ಕೆಲಸ ಮಾಡುತ್ತಿರುವೆ. ಇತ್ತೀಚೆಗೆ ಸರ್ಕಾರ, ವಕ್ಫ್ ಸಮಿತಿ ನಿರ್ದೇಶನದಂತೆ ದರ್ಗಾ ಹಾಗೂ ಮಸೀದಿಗಳಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕೈಗೊಳ್ಳಲಾಗಿತ್ತು. ಆ ಕೆಲಸವನ್ನು ತಾನು ಮಾಡಿಸಿದ್ದು ಎಂದು ರಫೀವುಲ್ಲಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ಹರಡುತ್ತಿದ್ದಾರೆ’ ಎಂದರು.</p>.<p>‘ಲಾಕ್ಡೌನ್ ಸಂಕಷ್ಟದ ಕಾರಣಕ್ಕೆ ಜಮಾತ್ ಅಹ್ಲೆ ಇಸ್ಲಾಂಗೆ ಸೇರಿದ 55 ಅಂಗಡಿಗಳ ವ್ಯಾಪಾರಿಗಳಿಗೆ ಎರಡು ತಿಂಗಳ ಬಾಡಿಗೆ (ಸುಮಾರು ₹5 ಲಕ್ಷ) ವಿನಾಯಿತಿ ನೀಡಲಾಗಿದೆ. ಉಳಿದ ತಾಲ್ಲೂಕುಗಳಲ್ಲೂ ಈ ವಿನಾಯಿತಿ ವಿಚಾರವಾಗಿ ಸಮಿತಿಗಳೊಂದಿಗೆ ಚರ್ಚಿಸಲಾಗುವುದು’ ಎಂದು ಹೇಳಿದರು.</p>.<p>‘ಮಾಜಿ ಅಧ್ಯಕ್ಷರ ಕಾಲದಲ್ಲಿ ಬಾಕಿ ಉಳಿದಿದ್ದ ಮಳಿಗೆಗಳ ₹23 ಲಕ್ಷ ಬಾಡಿಗೆಯಲ್ಲಿ ₹3.70 ಲಕ್ಷ ವಸೂಲಿ ಮಾಡಲಾಗಿದೆ. ರಫೀವುಲ್ಲಾ ಅವರು ತಪ್ಪು ತಿದ್ದುಕೊಳ್ಳಲಿ. ಇಲ್ಲದಿದ್ದರೆ ಕಾನೂನಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು. ಮುಖಂಡರಾದ ಜಿಯಾವುಲ್ಲಾ, ಮುಜಾಮಿಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>