‘ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರಾಜ್ಯ ವಕ್ಫ್ ಸಮಿತಿಯ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ನಾನು ಅಧ್ಯಕ್ಷನಾಗಿ ಕೆಲಸ ಮಾಡುತ್ತಿರುವೆ. ಇತ್ತೀಚೆಗೆ ಸರ್ಕಾರ, ವಕ್ಫ್ ಸಮಿತಿ ನಿರ್ದೇಶನದಂತೆ ದರ್ಗಾ ಹಾಗೂ ಮಸೀದಿಗಳಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕೈಗೊಳ್ಳಲಾಗಿತ್ತು. ಆ ಕೆಲಸವನ್ನು ತಾನು ಮಾಡಿಸಿದ್ದು ಎಂದು ರಫೀವುಲ್ಲಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ಹರಡುತ್ತಿದ್ದಾರೆ’ ಎಂದರು.