<p><strong>ಮಿಟ್ಟೇಮರಿ(ಬಾಗೇಪಲ್ಲಿ):</strong> ತ್ತಿನಹೊಳೆ ಯೋಜನೆಯಿಂದ ತಾಲ್ಲೂಕಿನ ಮಿಟ್ಟೇಮರಿ ಸೇರಿದಂತೆ ಅನೇಕ ಕೆರೆಗಳಿಗೆ ನೀರು ಹರಿಸಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲಾಗುವುದು. ಇದರಿಂದ ಕುಡಿಯುವ ನೀರು ಮತ್ತು ಕೃಷಿ ಬೆಳೆಗಳಿಗೆ ಅನುಕೂಲ ಆಗಲಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.</p>.<p>ತಾಲ್ಲೂಕಿನ ಮಿಟ್ಟೇಮರಿ ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿ 2024-25ನೇ ಸಾಲಿನ ಮಿಟ್ಟೇಮರಿ ಗ್ರಾಮ ಪಂಚಾಯಿತಿ, ವರ್ಗ 1ರ ಯೋಜನೆಯಡಿ ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗ್ರಾಮ ಪಂಚಾಯಿತಿ ಅಂಗಡಿ ಮಳಿಗೆ ಕಟ್ಟಡ ಉದ್ಘಾಟನೆ ಬುಧವಾರ ನಡೆಯಿತು.</p>.<p>ಸರ್ಕಾರದ ಅನುದಾನಗಳ ಜತೆಗೆ ಪಂಚಾಯಿತಿ ಅನುದಾನಗಳಲ್ಲಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಮಿಟ್ಟೇಮರಿ ಗ್ರಾಮ ಪಂಚಾಯಿತಿಯಿಂದ 4 ಕಟ್ಟಡ ನಿರ್ಮಾಣ ಮಾಡಲಿದೆ ಎಂದರು.</p>.<p>ಕಾರಕೂರು ಕ್ರಾಸ್ನಿಂದ ಶಿಡ್ಲಘಟ್ಟ ತಾಲ್ಲೂಕಿನ ಗಡಿವರೆಗೆ ಡಬಲ್ರಸ್ತೆ ಮಾಡಿಸಲಾಗಿದೆ. ಮಿಟ್ಟೇಮರಿ ಮುಖ್ಯರಸ್ತೆಯಲ್ಲಿ ರಸ್ತೆ ದ್ವಿಭಜಕ ಮಾಡಿ ಮಧ್ಯದಲ್ಲಿ ವಿದ್ಯುತ್ ದೀಪ ಅಳವಡಿಸಲಾಗಿದೆ. ಎಚ್.ಎನ್.ವ್ಯಾಲಿಯ 2ನೇ ಹಂತದ ಸಂಸ್ಕರಿಸಿದ ನೀರನ್ನು ಕಾಟೇನಹಳ್ಳಿ, ಮಲ್ಲಿಗುರ್ಕಿ, ಆಚೇಪಲ್ಲಿ ಸೇರಿದಂತೆ 24 ಕೆರೆಗಳಿಗೆ ನೀರು ತುಂಬಿಸಲಾಗಿದೆ ಎಂದರು.</p>.<p>ರಾಜ್ಯ ಸರ್ಕಾರ ತಾಲ್ಲೂಕಿನಲ್ಲಿ ಗಂಟ್ಲಮಲ್ಲಮ್ಮ ಡ್ಯಾಂ ನಿರ್ಮಾಣಕ್ಕೆ ₹200 ಕೋಟಿ ಅನುದಾನ ನೀಡಿದೆ. ಇದರಿಂದ ಪಾತಪಾಳ್ಯ, ಗೂಳೂರು, ಚೇಳೂರು ತಾಲ್ಲೂಕುಗಳ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಬೃಹತ್ ಯೋಜನೆ ಆಗಿದೆ ಎಂದು ತಿಳಿಸಿದರು.</p>.<p>ಎಂ.ಬಿ.ಲಕ್ಷ್ಮಿನರಸಿಂಹಯ್ಯ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಅತೀಕ್ಪಾಷ, ಇಒ ಜಿ.ವಿ.ರಮೇಶ್, ಸೀತಮ್ಮಆಂಜಿನಪ್ಪ, ಗೌತಮಿ ವಿಜಯಗೋಪಾಲರೆಡ್ಡಿ, ಡಿ.ಎಂ.ವೆಂಕಟೇಶಪ್ಪ, ಮಂಜುನಾಥರೆಡ್ಡಿ, ಲಕ್ಷ್ಮಿನರಸಿಂಹಪ್ಪ, ವಿಜಯಗೋಪಾಲರೆಡ್ಡಿ, ಎ.ವಿ.ಪೂಜಪ್ಪ, ಅಶ್ವತ್ಥಪ್ಪ, ನಾರಾಯಣಸ್ವಾಮಿ, ನಂದೀಶ್, ಸಿ.ಎಸ್.ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಿಟ್ಟೇಮರಿ(ಬಾಗೇಪಲ್ಲಿ):</strong> ತ್ತಿನಹೊಳೆ ಯೋಜನೆಯಿಂದ ತಾಲ್ಲೂಕಿನ ಮಿಟ್ಟೇಮರಿ ಸೇರಿದಂತೆ ಅನೇಕ ಕೆರೆಗಳಿಗೆ ನೀರು ಹರಿಸಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲಾಗುವುದು. ಇದರಿಂದ ಕುಡಿಯುವ ನೀರು ಮತ್ತು ಕೃಷಿ ಬೆಳೆಗಳಿಗೆ ಅನುಕೂಲ ಆಗಲಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.</p>.<p>ತಾಲ್ಲೂಕಿನ ಮಿಟ್ಟೇಮರಿ ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿ 2024-25ನೇ ಸಾಲಿನ ಮಿಟ್ಟೇಮರಿ ಗ್ರಾಮ ಪಂಚಾಯಿತಿ, ವರ್ಗ 1ರ ಯೋಜನೆಯಡಿ ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗ್ರಾಮ ಪಂಚಾಯಿತಿ ಅಂಗಡಿ ಮಳಿಗೆ ಕಟ್ಟಡ ಉದ್ಘಾಟನೆ ಬುಧವಾರ ನಡೆಯಿತು.</p>.<p>ಸರ್ಕಾರದ ಅನುದಾನಗಳ ಜತೆಗೆ ಪಂಚಾಯಿತಿ ಅನುದಾನಗಳಲ್ಲಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಮಿಟ್ಟೇಮರಿ ಗ್ರಾಮ ಪಂಚಾಯಿತಿಯಿಂದ 4 ಕಟ್ಟಡ ನಿರ್ಮಾಣ ಮಾಡಲಿದೆ ಎಂದರು.</p>.<p>ಕಾರಕೂರು ಕ್ರಾಸ್ನಿಂದ ಶಿಡ್ಲಘಟ್ಟ ತಾಲ್ಲೂಕಿನ ಗಡಿವರೆಗೆ ಡಬಲ್ರಸ್ತೆ ಮಾಡಿಸಲಾಗಿದೆ. ಮಿಟ್ಟೇಮರಿ ಮುಖ್ಯರಸ್ತೆಯಲ್ಲಿ ರಸ್ತೆ ದ್ವಿಭಜಕ ಮಾಡಿ ಮಧ್ಯದಲ್ಲಿ ವಿದ್ಯುತ್ ದೀಪ ಅಳವಡಿಸಲಾಗಿದೆ. ಎಚ್.ಎನ್.ವ್ಯಾಲಿಯ 2ನೇ ಹಂತದ ಸಂಸ್ಕರಿಸಿದ ನೀರನ್ನು ಕಾಟೇನಹಳ್ಳಿ, ಮಲ್ಲಿಗುರ್ಕಿ, ಆಚೇಪಲ್ಲಿ ಸೇರಿದಂತೆ 24 ಕೆರೆಗಳಿಗೆ ನೀರು ತುಂಬಿಸಲಾಗಿದೆ ಎಂದರು.</p>.<p>ರಾಜ್ಯ ಸರ್ಕಾರ ತಾಲ್ಲೂಕಿನಲ್ಲಿ ಗಂಟ್ಲಮಲ್ಲಮ್ಮ ಡ್ಯಾಂ ನಿರ್ಮಾಣಕ್ಕೆ ₹200 ಕೋಟಿ ಅನುದಾನ ನೀಡಿದೆ. ಇದರಿಂದ ಪಾತಪಾಳ್ಯ, ಗೂಳೂರು, ಚೇಳೂರು ತಾಲ್ಲೂಕುಗಳ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಬೃಹತ್ ಯೋಜನೆ ಆಗಿದೆ ಎಂದು ತಿಳಿಸಿದರು.</p>.<p>ಎಂ.ಬಿ.ಲಕ್ಷ್ಮಿನರಸಿಂಹಯ್ಯ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಅತೀಕ್ಪಾಷ, ಇಒ ಜಿ.ವಿ.ರಮೇಶ್, ಸೀತಮ್ಮಆಂಜಿನಪ್ಪ, ಗೌತಮಿ ವಿಜಯಗೋಪಾಲರೆಡ್ಡಿ, ಡಿ.ಎಂ.ವೆಂಕಟೇಶಪ್ಪ, ಮಂಜುನಾಥರೆಡ್ಡಿ, ಲಕ್ಷ್ಮಿನರಸಿಂಹಪ್ಪ, ವಿಜಯಗೋಪಾಲರೆಡ್ಡಿ, ಎ.ವಿ.ಪೂಜಪ್ಪ, ಅಶ್ವತ್ಥಪ್ಪ, ನಾರಾಯಣಸ್ವಾಮಿ, ನಂದೀಶ್, ಸಿ.ಎಸ್.ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>