<p><strong>ಚಿಕ್ಕಬಳ್ಳಾಪುರ</strong>: ‘ಎತ್ತಿನಹೊಳೆ ಯೋಜನೆಯ ನೀರು 2027ರ ಡಿಸೆಂಬರ್ ಅಂತ್ಯಕ್ಕೆ ಚಿಕ್ಕಬಳ್ಳಾಪುರಕ್ಕೆ ಬರಲಿದೆ. ಇಲ್ಲದಿದ್ದರೆ ನಾನೂ ನೀರಾವರಿ ಹೋರಾಟಗಾರರ ಜೊತೆ ಹೋರಾಟ ನಡೆಸುವೆ’ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ನೀರಾವರಿ ವಿಚಾರವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. 2027ರ ಡಿಸೆಂಬರ್ ಅಂತ್ಯಕ್ಕೆ ಚಿಕ್ಕಬಳ್ಳಾಪುರಕ್ಕೆ ನೀರು ಹರಿಸಬೇಕು ಎನ್ನುವ ಬೇಡಿಕೆ ಇದೆ ಎಂದರು.</p>.<p>ಎತ್ತಿನಹೊಳೆ ಯೋಜನೆಯ ನೀರು ಈ ಅವಧಿಯ ಒಳಗೆ ಚಿಕ್ಕಬಳ್ಳಾಪುರಕ್ಕೆ ಬರಲಿದೆ. ನೀರಾವರಿ ಹೋರಾಟಗಾರ ಬಗ್ಗೆ ಗೌರವವಿದೆ. ಈ ಅವಧಿಯಲ್ಲಿ ನೀರು ಚಿಕ್ಕಬಳ್ಳಾಪುರಕ್ಕೆ ಬರದಿದ್ದರೆ ನೀರಾವರಿ ಹೋರಾಟಗಾರರ ಜೊತೆ ನಾನೂ ಸೇರಿ ಹೋರಾಟ ಮಾಡುವೆ. ಅಲ್ಲಿಯವರೆಗೂ ಕಾಯೋಣ ಎಂದು ಹೇಳಿದರು.</p>.<p>ಜಕ್ಕಲಮಡಗು ಜಲಾಶಯ ಎತ್ತರಿಸಬೇಕಿದೆ. ಇದರಿಂದ ಸುತ್ತಮುತ್ತಲ ಹಳ್ಳಿಗಳಿಗೆ ಸಮಸ್ಯೆ ಆಗುತ್ತದೆ. ಆದರೆ ಚಿಕ್ಕಬಳ್ಳಾಪುರ ನಗರ ಬೆಳೆಯುತ್ತಿದೆ. ನಗರದ ನಾಗರಿಕರಿಗೆ ನೀರು ಕೊಡಬೇಕು. ಭವಿಷ್ಯದ ಜನಸಂಖ್ಯೆ ಮತ್ತು ನಗರದ ಬೆಳವಣಿಗೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ಕೆಲಸ ಮಾಡಲಾಗುವುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಎತ್ತಿನಹೊಳೆ ಯೋಜನೆಯ ನೀರು 2027ರ ಡಿಸೆಂಬರ್ ಅಂತ್ಯಕ್ಕೆ ಚಿಕ್ಕಬಳ್ಳಾಪುರಕ್ಕೆ ಬರಲಿದೆ. ಇಲ್ಲದಿದ್ದರೆ ನಾನೂ ನೀರಾವರಿ ಹೋರಾಟಗಾರರ ಜೊತೆ ಹೋರಾಟ ನಡೆಸುವೆ’ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ನೀರಾವರಿ ವಿಚಾರವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. 2027ರ ಡಿಸೆಂಬರ್ ಅಂತ್ಯಕ್ಕೆ ಚಿಕ್ಕಬಳ್ಳಾಪುರಕ್ಕೆ ನೀರು ಹರಿಸಬೇಕು ಎನ್ನುವ ಬೇಡಿಕೆ ಇದೆ ಎಂದರು.</p>.<p>ಎತ್ತಿನಹೊಳೆ ಯೋಜನೆಯ ನೀರು ಈ ಅವಧಿಯ ಒಳಗೆ ಚಿಕ್ಕಬಳ್ಳಾಪುರಕ್ಕೆ ಬರಲಿದೆ. ನೀರಾವರಿ ಹೋರಾಟಗಾರ ಬಗ್ಗೆ ಗೌರವವಿದೆ. ಈ ಅವಧಿಯಲ್ಲಿ ನೀರು ಚಿಕ್ಕಬಳ್ಳಾಪುರಕ್ಕೆ ಬರದಿದ್ದರೆ ನೀರಾವರಿ ಹೋರಾಟಗಾರರ ಜೊತೆ ನಾನೂ ಸೇರಿ ಹೋರಾಟ ಮಾಡುವೆ. ಅಲ್ಲಿಯವರೆಗೂ ಕಾಯೋಣ ಎಂದು ಹೇಳಿದರು.</p>.<p>ಜಕ್ಕಲಮಡಗು ಜಲಾಶಯ ಎತ್ತರಿಸಬೇಕಿದೆ. ಇದರಿಂದ ಸುತ್ತಮುತ್ತಲ ಹಳ್ಳಿಗಳಿಗೆ ಸಮಸ್ಯೆ ಆಗುತ್ತದೆ. ಆದರೆ ಚಿಕ್ಕಬಳ್ಳಾಪುರ ನಗರ ಬೆಳೆಯುತ್ತಿದೆ. ನಗರದ ನಾಗರಿಕರಿಗೆ ನೀರು ಕೊಡಬೇಕು. ಭವಿಷ್ಯದ ಜನಸಂಖ್ಯೆ ಮತ್ತು ನಗರದ ಬೆಳವಣಿಗೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ಕೆಲಸ ಮಾಡಲಾಗುವುದು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>