ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇವತ್ತು ಎಲ್ಲ ಕ್ಷೇತ್ರದವರಲ್ಲೂ ಒತ್ತಡ ಹೆಚ್ಚಾಗುತ್ತಿದೆ. ಅದನ್ನು ನಿವಾರಿಸುವ ಬಗೆ ಕಂಡುಕೊಳ್ಳುವ ಅಗತ್ಯವಿದೆ. ಅದಕ್ಕಾಗಿ ಯೋಗ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದ ತಜ್ಞರನ್ನು ಒಳಗೊಂಡ ತಂಡ ರಚಿಸಿ, ಪಠ್ಯಕ್ರಮ ರೂಪಿಸುವ ಬಗ್ಗೆ ಚರ್ಚೆ ನಡೆದಿದೆ’ ಎಂದು ತಿಳಿಸಿದರು.