<p><strong>ಚಿಕ್ಕಬಳ್ಳಾಪುರ:</strong> ‘ವ್ಯವಸಾಯ ಸೇವಾ ಸಹಕಾರ ಸಂಘಗಳ ಕಾರ್ಯದರ್ಶಿಗಳ ಅಸಡ್ಡೆಯಿಂದಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಸ್ತ್ರೀಶಕ್ತಿ ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ನಿಂದ ಶೂನ್ಯ ಬಡ್ಡಿ ದರದ ಸಾಲ ಸರಿಯಾಗಿ ವಿತರಣೆಯಾಗುತ್ತಿಲ್ಲ. ಈ ವಿಚಾರದಲ್ಲಿ ಕಾರ್ಯದರ್ಶಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು’ ಎಂದು ಡಿಸಿಸಿ ಬ್ಯಾಂಕ್ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಹೇಳಿದರು.</p>.<p>ನಗರದಲ್ಲಿ ಸೋಮವಾರ ನಡೆದ ಚಿಕ್ಕಬಳ್ಳಾಪುರ ತಾಲ್ಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘಗಳ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕೋಲಾರ–ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳ ಪೈಕಿ ಈ ತಾಲ್ಲೂಕಿನಲ್ಲಿ ಮಾತ್ರ ಶೂನ್ಯ ಬಡ್ಡಿ ದರದ ಸಾಲ ವಿತರಣೆ ಪ್ರಗತಿ ತುಂಬಾ ಕೆಳಮಟ್ಟದಲ್ಲಿದೆ. ಬ್ಯಾಂಕ್ ಎಷ್ಟು ಬೇಕಾದರೂ ಸಾಲ ಕೊಡಲು ಸಿದ್ಧವಿದೆ. ಆದರೆ ಕಾರ್ಯದರ್ಶಿಗಳು ಬೆಳೆಸಾಲಕ್ಕೆ ನೀಡಿದ ಆದ್ಯತೆ ಈ ಸಾಲಕ್ಕೆ ನೀಡದ ಕಾರಣ ಮಹಿಳೆಯರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ಕಾರ್ಯದರ್ಶಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ಅವರ ನಾಮಕಾವಾಸ್ತೆ ಕೆಲಸದಿಂದಾಗಿ ನಮಗೆ ಕೆಟ್ಟ ಹೆಸರು ಬರುತ್ತಿದೆ. ಈ ತಾಲ್ಲೂಕಿಗೆ ಸಾಲ ವಿತರಿಸುವಲ್ಲಿ ನಾವು ತಾರತಮ್ಯ ಮಾಡುತ್ತಿದ್ದೇವೆ ಎಂದು ಶಾಸಕರು ಆರೋಪಿಸುತ್ತಿದ್ದಾರೆ. ಆದ್ದರಿಂದ ವರ್ಷಕ್ಕೊಮ್ಮೆ ಸಂಘದ ಕಚೇರಿ ಬಾಗಿಲು ತೆಗೆಯುವವರು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಇಲ್ಲದಿದ್ದರೆ ಕೆಲಸ ಬಿಟ್ಟು ಹೋಗಿ’ ಎಂದು ಖಡಕ್ ಎಚ್ಚರಿಕೆ ನೀಡಿದರು.</p>.<p>‘ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಸುಮಾರು 1 ಲಕ್ಷ ಮಹಿಳೆಯರಿಗೆ ಸಾಲ ವಿತರಿಸಬಹುದಾಗಿದೆ. ಆದರೆ ಕಾರ್ಯದರ್ಶಿಗಳ ನಿರ್ಲಕ್ಷ್ಯದಿಂದಾಗಿ ಈವರೆಗೆ ಶೇ10 ರಷ್ಟು ಮಹಿಳೆಯರಿಗೂ ಸಾಲ ದೊರೆತಿಲ್ಲ. ಇದರಿಂದಾಗಿ ಅಧ್ಯಕ್ಷರು ನಮಗೆ ಮೋಸ ಮಾಡುತ್ತಿದ್ದಾರೆ ಎಂಬ ಭಾವನೆ ಈ ತಾಲ್ಲೂಕಿನವರಲ್ಲಿ ಬರುತ್ತಿದೆ. ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯದರ್ಶಿಗಳು ನಾಳೆಯಿಂದಲೇ ಚುರುಕಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.</p>.<p>‘ಬ್ಯಾಂಕಿನ ಸ್ಥಳೀಯ ನಿರ್ದೇಶಕರು ಸಹ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚೆಚ್ಚು ಸಾಲ ವಿತರಿಸುವ ದಿಸೆಯಲ್ಲಿ ಕಾರ್ಯದರ್ಶಿಗಳಿಂದ ಕೆಲಸ ತೆಗೆಯಬೇಕು. ಕಾರ್ಯದರ್ಶಿಗಳು ಹಳ್ಳಿ ಹಳ್ಳಿಗೆ ಹೋಗಿ ಪ್ರಾಮಾಣಿಕ ಗುಂಪುಗಳನ್ನು ಗುರುತಿಸಿ ಸಾಲ ಒದಗಿಸಲು ಕ್ರಮಕೈಗೊಳ್ಳಬೇಕು. ಸಂಘವೊಂದು ₨10 ಕೋಟಿ ಸಾಲ ಕೊಡಿಸಿದರೆ ಅದರಿಂದ ₨20 ಲಕ್ಷ ಆದಾಯ ಬರುತ್ತದೆ’ ಎಂದು ತಿಳಿಸಿದರು.</p>.<p>‘ಪ್ರತಿಯೊಬ್ಬ ಕಾರ್ಯದರ್ಶಿಗಳು ಇನ್ನು ಮುಂದಾದರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮಹಿಳಾ ಸಂಘಗಳ ರಚನೆಗೆ ಮುಂದಾಗಬೇಕು. ಈ ಕೆಲಸದಲ್ಲಿ ಯಾವುದೇ ಸಬೂಬು ಹೇಳುವಂತಿಲ್ಲ. ಮಹಿಳೆಯರಿಗೆ ಶೂನ್ಯ ಬಡ್ಡಿ ದರದ ಸಾಲ ವಿತರಿಸುವಲ್ಲಿ ನಿರ್ಲಕ್ಷ್ಯ ತೋರುವ ಸಂಘಗಳಿಗೆ ಬೆಳೆ ಸಾಲ ನೀಡುವುದಿಲ್ಲ’ ಎಂದರು.</p>.<p>ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಚ್.ಎಸ್.ಮೋಹನ್ ರೆಡ್ಡಿ, ಕೆ.ಎಸ್.ದ್ಯಾವಪ್ಪ, ಕಸಬಾ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಚೆನ್ನಕೃಷ್ಣಪ್ಪ, ಅಡಗಲ್ ಸಂಘದ ಅಧ್ಯಕ್ಷ ಪಿ.ಕೆಂಪಣ್ಣ ಮತ್ತು ಮೈಲಪ್ಪನಹಳ್ಳಿ ಸಂಘದ ಅಧ್ಯಕ್ಷ ಜಗದೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ‘ವ್ಯವಸಾಯ ಸೇವಾ ಸಹಕಾರ ಸಂಘಗಳ ಕಾರ್ಯದರ್ಶಿಗಳ ಅಸಡ್ಡೆಯಿಂದಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಸ್ತ್ರೀಶಕ್ತಿ ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ನಿಂದ ಶೂನ್ಯ ಬಡ್ಡಿ ದರದ ಸಾಲ ಸರಿಯಾಗಿ ವಿತರಣೆಯಾಗುತ್ತಿಲ್ಲ. ಈ ವಿಚಾರದಲ್ಲಿ ಕಾರ್ಯದರ್ಶಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು’ ಎಂದು ಡಿಸಿಸಿ ಬ್ಯಾಂಕ್ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಹೇಳಿದರು.</p>.<p>ನಗರದಲ್ಲಿ ಸೋಮವಾರ ನಡೆದ ಚಿಕ್ಕಬಳ್ಳಾಪುರ ತಾಲ್ಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘಗಳ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕೋಲಾರ–ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳ ಪೈಕಿ ಈ ತಾಲ್ಲೂಕಿನಲ್ಲಿ ಮಾತ್ರ ಶೂನ್ಯ ಬಡ್ಡಿ ದರದ ಸಾಲ ವಿತರಣೆ ಪ್ರಗತಿ ತುಂಬಾ ಕೆಳಮಟ್ಟದಲ್ಲಿದೆ. ಬ್ಯಾಂಕ್ ಎಷ್ಟು ಬೇಕಾದರೂ ಸಾಲ ಕೊಡಲು ಸಿದ್ಧವಿದೆ. ಆದರೆ ಕಾರ್ಯದರ್ಶಿಗಳು ಬೆಳೆಸಾಲಕ್ಕೆ ನೀಡಿದ ಆದ್ಯತೆ ಈ ಸಾಲಕ್ಕೆ ನೀಡದ ಕಾರಣ ಮಹಿಳೆಯರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ಕಾರ್ಯದರ್ಶಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ಅವರ ನಾಮಕಾವಾಸ್ತೆ ಕೆಲಸದಿಂದಾಗಿ ನಮಗೆ ಕೆಟ್ಟ ಹೆಸರು ಬರುತ್ತಿದೆ. ಈ ತಾಲ್ಲೂಕಿಗೆ ಸಾಲ ವಿತರಿಸುವಲ್ಲಿ ನಾವು ತಾರತಮ್ಯ ಮಾಡುತ್ತಿದ್ದೇವೆ ಎಂದು ಶಾಸಕರು ಆರೋಪಿಸುತ್ತಿದ್ದಾರೆ. ಆದ್ದರಿಂದ ವರ್ಷಕ್ಕೊಮ್ಮೆ ಸಂಘದ ಕಚೇರಿ ಬಾಗಿಲು ತೆಗೆಯುವವರು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಇಲ್ಲದಿದ್ದರೆ ಕೆಲಸ ಬಿಟ್ಟು ಹೋಗಿ’ ಎಂದು ಖಡಕ್ ಎಚ್ಚರಿಕೆ ನೀಡಿದರು.</p>.<p>‘ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಸುಮಾರು 1 ಲಕ್ಷ ಮಹಿಳೆಯರಿಗೆ ಸಾಲ ವಿತರಿಸಬಹುದಾಗಿದೆ. ಆದರೆ ಕಾರ್ಯದರ್ಶಿಗಳ ನಿರ್ಲಕ್ಷ್ಯದಿಂದಾಗಿ ಈವರೆಗೆ ಶೇ10 ರಷ್ಟು ಮಹಿಳೆಯರಿಗೂ ಸಾಲ ದೊರೆತಿಲ್ಲ. ಇದರಿಂದಾಗಿ ಅಧ್ಯಕ್ಷರು ನಮಗೆ ಮೋಸ ಮಾಡುತ್ತಿದ್ದಾರೆ ಎಂಬ ಭಾವನೆ ಈ ತಾಲ್ಲೂಕಿನವರಲ್ಲಿ ಬರುತ್ತಿದೆ. ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯದರ್ಶಿಗಳು ನಾಳೆಯಿಂದಲೇ ಚುರುಕಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.</p>.<p>‘ಬ್ಯಾಂಕಿನ ಸ್ಥಳೀಯ ನಿರ್ದೇಶಕರು ಸಹ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚೆಚ್ಚು ಸಾಲ ವಿತರಿಸುವ ದಿಸೆಯಲ್ಲಿ ಕಾರ್ಯದರ್ಶಿಗಳಿಂದ ಕೆಲಸ ತೆಗೆಯಬೇಕು. ಕಾರ್ಯದರ್ಶಿಗಳು ಹಳ್ಳಿ ಹಳ್ಳಿಗೆ ಹೋಗಿ ಪ್ರಾಮಾಣಿಕ ಗುಂಪುಗಳನ್ನು ಗುರುತಿಸಿ ಸಾಲ ಒದಗಿಸಲು ಕ್ರಮಕೈಗೊಳ್ಳಬೇಕು. ಸಂಘವೊಂದು ₨10 ಕೋಟಿ ಸಾಲ ಕೊಡಿಸಿದರೆ ಅದರಿಂದ ₨20 ಲಕ್ಷ ಆದಾಯ ಬರುತ್ತದೆ’ ಎಂದು ತಿಳಿಸಿದರು.</p>.<p>‘ಪ್ರತಿಯೊಬ್ಬ ಕಾರ್ಯದರ್ಶಿಗಳು ಇನ್ನು ಮುಂದಾದರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮಹಿಳಾ ಸಂಘಗಳ ರಚನೆಗೆ ಮುಂದಾಗಬೇಕು. ಈ ಕೆಲಸದಲ್ಲಿ ಯಾವುದೇ ಸಬೂಬು ಹೇಳುವಂತಿಲ್ಲ. ಮಹಿಳೆಯರಿಗೆ ಶೂನ್ಯ ಬಡ್ಡಿ ದರದ ಸಾಲ ವಿತರಿಸುವಲ್ಲಿ ನಿರ್ಲಕ್ಷ್ಯ ತೋರುವ ಸಂಘಗಳಿಗೆ ಬೆಳೆ ಸಾಲ ನೀಡುವುದಿಲ್ಲ’ ಎಂದರು.</p>.<p>ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಚ್.ಎಸ್.ಮೋಹನ್ ರೆಡ್ಡಿ, ಕೆ.ಎಸ್.ದ್ಯಾವಪ್ಪ, ಕಸಬಾ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಚೆನ್ನಕೃಷ್ಣಪ್ಪ, ಅಡಗಲ್ ಸಂಘದ ಅಧ್ಯಕ್ಷ ಪಿ.ಕೆಂಪಣ್ಣ ಮತ್ತು ಮೈಲಪ್ಪನಹಳ್ಳಿ ಸಂಘದ ಅಧ್ಯಕ್ಷ ಜಗದೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>