ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ಸರ್ಕಾರ ₹3,000 ಪ್ರೋತ್ಸಾಹ ಧನ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಸಹಕಾರ ಇಲಾಖೆಯಿಂದ ಶೂನ್ಯ ಬಡ್ಡಿ ದರದ ಸಾಲ ವಿತರಿಸಲಾಗುತ್ತದೆ. ಆ ಯೋಜನೆ ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂಬುದು ಶೀಘ್ರದಲ್ಲಿಯೇ ತೀರ್ಮಾನಿಸಲಾಗುತ್ತದೆ’ ಎಂದು ತಿಳಿಸಿದರು.