<p><strong>ಚಿಕ್ಕಬಳ್ಳಾಪುರ</strong>: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟವಾಗಿದೆ. ಈ ಮೂಲಕ ಮತ್ತೆ ಜಿಲ್ಲೆಯ ರಾಜಕಾರಣದಲ್ಲಿ ಕಾವು ಆರಂಭವಾಗಿದೆ. ಮೀಸಲಾತಿ ಪಟ್ಟಿ ಪ್ರಕಟವಾಗುತ್ತಲೇ ಕೆಲವು ಕ್ಷೇತ್ರಗಳಲ್ಲಿ ಮುಖಂಡರ ಮನಸ್ಸುಗಳು ಕದಡಿದ ನೀರಾಗಿದೆ.</p>.<p>ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗ ಜು.8ರವರೆಗೆ ಕಾಲಾವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಮುಖಂಡರು ಸಿದ್ಧತೆಗಳನ್ನು ಆರಂಭಿಸಿದ್ದಾರೆ ಎನ್ನುತ್ತವೆ ಮೂಲಗಳು. ಒಂದು ಕ್ಷೇತ್ರದ ಮೀಸಲಾತಿ ಬದಲಾವಣೆ ಇತರೆ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತದೆ ಎನ್ನುವ ಅಭಿಪ್ರಾಯಗಳು ಸಹ ವ್ಯಕ್ತವಾಗುತ್ತಿವೆ.</p>.<p>ಈ ಹಿಂದೆ ಕ್ಷೇತ್ರ ಯಾವ ವರ್ಗಕ್ಕೆ ಮೀಸಲಾಗಿತ್ತು. ಈಗ ಯಾವುದಕ್ಕೆ ಮೀಸಲಾಗಿದೆ. ಆ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಸಮುದಾಯದ ಜನರು ಹೆಚ್ಚಿದ್ದಾರೆ. ಹೀಗೆ ಆಕ್ಷೇಪಣೆ ಸಲ್ಲಿಸಲು ಅಗತ್ಯವಾದ ದಾಖಲೆಗಳನ್ನು ಸಂಗ್ರಹಿಸುವಲ್ಲಿ ಮುಖಂಡರು ಹಾಗೂ ಅವರ ಬೆಂಬಲಿಗರು ನಿರತರಾಗಿದ್ದಾರೆ.</p>.<p>ಗೌರಿಬಿದನೂರು ತಾಲ್ಲೂಕಿನಲ್ಲಿ ನಗರಗೆರೆ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಬಂದಿದೆ. ಆ ಕ್ಷೇತ್ರದಲ್ಲಿ ಪರಿಶಿಷ್ಟ ಸಮುದಾಯ ಹೆಚ್ಚಿದೆ. ಇಂತಹವುಗಳನ್ನು ಗಮನದಲ್ಲಿ ಇಟ್ಟುಕೊಂಡು ಆಕ್ಷೇಪಣೆಗಳನ್ನು ಸಲ್ಲಿಸಲು ಸಿದ್ಧತೆಗಳು ನಡೆದಿವೆ ಎನ್ನಲಾಗುತ್ತಿದೆ.</p>.<p><strong>ಗರಿಗೆದರಿದ ಟಿಕೆಟ್ ರಾಜಕೀಯ: </strong>ಕೋವಿಡ್ಗೂ ಮುನ್ನವೇ ಈ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಆಯಾ ಪಕ್ಷಗಳ ಮುಖಂಡರು ಪ್ರತಿಷ್ಠೆಯನ್ನಾಗಿಸಿಕೊಂಡಿದ್ದರು. ಆದರೆ ಮೀಸಲಾತಿಯ ಪಟ್ಟಿ ಪ್ರಕಟವಾಗದ ಕಾರಣ ಈ ಬಗ್ಗೆ ಹೆಚ್ಚು ಮಾತನಾಡಲು ಮುಖಂಡರು ಮುಂದಾಗಿರಲಿಲ್ಲ. ‘ಮೀಸಲಾತಿ ಪ್ರಕಟವಾಗಲಿ’ ಎಂದಷ್ಟೇ ನುಡಿಯುತ್ತಿದ್ದರು. ಈಗ ಮೀಸಲಾತಿ ಪ್ರಕಟವಾಗುವ ಮೂಲಕ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಗರಿಗೆದರಿದೆ.</p>.<p>ಮೀಸಲಾತಿ ಆಧರಿಸಿ ಆಯಾ ಪಕ್ಷಗಳ ಮುಖಂಡರು ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಮತ್ತೊಂದು ಕಡೆ ಮೀಸಲಾತಿಯಿಂದ ಸ್ಪರ್ಧೆಯಿಂದ ವಂಚಿತರಾಗಿರುವ ಜಿ.ಪಂ ಸದಸ್ಯರು ಮತ್ತೊಂದು ಕ್ಷೇತ್ರಗಳತ್ತಲೂ ಕಣ್ಣಿಟ್ಟಿದ್ದಾರೆ. ಬಹಳಷ್ಟು ಸದಸ್ಯರು ಬೇರೆ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಮಾಡುವುದಿಲ್ಲ ಎನ್ನುತ್ತಿದ್ದಾರೆ.</p>.<p>ಜಿ.ಪಂ ಅಧ್ಯಕ್ಷ ನರಸಿಂಹಪ್ಪ ಪ್ರತಿನಿಧಿಸಿದ್ದ ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಕ್ಷೇತ್ರ ಈ ಬಾರಿ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಕಳೆದ ಬಾರಿ ಇದು ಎಸ್ಟಿಗೆ ಮೀಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ವಿ.ಮಂಜುನಾಥ್ ಪ್ರತಿನಿಧಿಸಿದ್ದ ಹೊಸೂರು ಕ್ಷೇತ್ರ ಈ ಬಾರಿ ಎಸ್ಟಿ ಮಹಿಳೆಗೆ ಮೀಸಲಾಗಿದೆ. ಕಳೆದ ಬಾರಿ ಈ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜಿಲ್ಲಾ ಜೆಡಿಎಸ್ ಅಧ್ಯಕ್ಷರೂ ಆದ ಕೆ.ಎಂ.ಮುನೇಗೌಡ ಅವರು ಪ್ರತಿನಿಧಿಸಿದ್ದ ನಂದಿ ಕ್ಷೇತ್ರ ಈ ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಕಳೆದ ಬಾರಿ ಈ ಕ್ಷೇತ್ರ ಬಿಸಿಎಂ ಅ ವರ್ಗಕ್ಕೆ ಮೀಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟವಾಗಿದೆ. ಈ ಮೂಲಕ ಮತ್ತೆ ಜಿಲ್ಲೆಯ ರಾಜಕಾರಣದಲ್ಲಿ ಕಾವು ಆರಂಭವಾಗಿದೆ. ಮೀಸಲಾತಿ ಪಟ್ಟಿ ಪ್ರಕಟವಾಗುತ್ತಲೇ ಕೆಲವು ಕ್ಷೇತ್ರಗಳಲ್ಲಿ ಮುಖಂಡರ ಮನಸ್ಸುಗಳು ಕದಡಿದ ನೀರಾಗಿದೆ.</p>.<p>ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗ ಜು.8ರವರೆಗೆ ಕಾಲಾವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಮುಖಂಡರು ಸಿದ್ಧತೆಗಳನ್ನು ಆರಂಭಿಸಿದ್ದಾರೆ ಎನ್ನುತ್ತವೆ ಮೂಲಗಳು. ಒಂದು ಕ್ಷೇತ್ರದ ಮೀಸಲಾತಿ ಬದಲಾವಣೆ ಇತರೆ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತದೆ ಎನ್ನುವ ಅಭಿಪ್ರಾಯಗಳು ಸಹ ವ್ಯಕ್ತವಾಗುತ್ತಿವೆ.</p>.<p>ಈ ಹಿಂದೆ ಕ್ಷೇತ್ರ ಯಾವ ವರ್ಗಕ್ಕೆ ಮೀಸಲಾಗಿತ್ತು. ಈಗ ಯಾವುದಕ್ಕೆ ಮೀಸಲಾಗಿದೆ. ಆ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಸಮುದಾಯದ ಜನರು ಹೆಚ್ಚಿದ್ದಾರೆ. ಹೀಗೆ ಆಕ್ಷೇಪಣೆ ಸಲ್ಲಿಸಲು ಅಗತ್ಯವಾದ ದಾಖಲೆಗಳನ್ನು ಸಂಗ್ರಹಿಸುವಲ್ಲಿ ಮುಖಂಡರು ಹಾಗೂ ಅವರ ಬೆಂಬಲಿಗರು ನಿರತರಾಗಿದ್ದಾರೆ.</p>.<p>ಗೌರಿಬಿದನೂರು ತಾಲ್ಲೂಕಿನಲ್ಲಿ ನಗರಗೆರೆ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಬಂದಿದೆ. ಆ ಕ್ಷೇತ್ರದಲ್ಲಿ ಪರಿಶಿಷ್ಟ ಸಮುದಾಯ ಹೆಚ್ಚಿದೆ. ಇಂತಹವುಗಳನ್ನು ಗಮನದಲ್ಲಿ ಇಟ್ಟುಕೊಂಡು ಆಕ್ಷೇಪಣೆಗಳನ್ನು ಸಲ್ಲಿಸಲು ಸಿದ್ಧತೆಗಳು ನಡೆದಿವೆ ಎನ್ನಲಾಗುತ್ತಿದೆ.</p>.<p><strong>ಗರಿಗೆದರಿದ ಟಿಕೆಟ್ ರಾಜಕೀಯ: </strong>ಕೋವಿಡ್ಗೂ ಮುನ್ನವೇ ಈ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಆಯಾ ಪಕ್ಷಗಳ ಮುಖಂಡರು ಪ್ರತಿಷ್ಠೆಯನ್ನಾಗಿಸಿಕೊಂಡಿದ್ದರು. ಆದರೆ ಮೀಸಲಾತಿಯ ಪಟ್ಟಿ ಪ್ರಕಟವಾಗದ ಕಾರಣ ಈ ಬಗ್ಗೆ ಹೆಚ್ಚು ಮಾತನಾಡಲು ಮುಖಂಡರು ಮುಂದಾಗಿರಲಿಲ್ಲ. ‘ಮೀಸಲಾತಿ ಪ್ರಕಟವಾಗಲಿ’ ಎಂದಷ್ಟೇ ನುಡಿಯುತ್ತಿದ್ದರು. ಈಗ ಮೀಸಲಾತಿ ಪ್ರಕಟವಾಗುವ ಮೂಲಕ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಗರಿಗೆದರಿದೆ.</p>.<p>ಮೀಸಲಾತಿ ಆಧರಿಸಿ ಆಯಾ ಪಕ್ಷಗಳ ಮುಖಂಡರು ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಮತ್ತೊಂದು ಕಡೆ ಮೀಸಲಾತಿಯಿಂದ ಸ್ಪರ್ಧೆಯಿಂದ ವಂಚಿತರಾಗಿರುವ ಜಿ.ಪಂ ಸದಸ್ಯರು ಮತ್ತೊಂದು ಕ್ಷೇತ್ರಗಳತ್ತಲೂ ಕಣ್ಣಿಟ್ಟಿದ್ದಾರೆ. ಬಹಳಷ್ಟು ಸದಸ್ಯರು ಬೇರೆ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಮಾಡುವುದಿಲ್ಲ ಎನ್ನುತ್ತಿದ್ದಾರೆ.</p>.<p>ಜಿ.ಪಂ ಅಧ್ಯಕ್ಷ ನರಸಿಂಹಪ್ಪ ಪ್ರತಿನಿಧಿಸಿದ್ದ ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಕ್ಷೇತ್ರ ಈ ಬಾರಿ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಕಳೆದ ಬಾರಿ ಇದು ಎಸ್ಟಿಗೆ ಮೀಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ವಿ.ಮಂಜುನಾಥ್ ಪ್ರತಿನಿಧಿಸಿದ್ದ ಹೊಸೂರು ಕ್ಷೇತ್ರ ಈ ಬಾರಿ ಎಸ್ಟಿ ಮಹಿಳೆಗೆ ಮೀಸಲಾಗಿದೆ. ಕಳೆದ ಬಾರಿ ಈ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜಿಲ್ಲಾ ಜೆಡಿಎಸ್ ಅಧ್ಯಕ್ಷರೂ ಆದ ಕೆ.ಎಂ.ಮುನೇಗೌಡ ಅವರು ಪ್ರತಿನಿಧಿಸಿದ್ದ ನಂದಿ ಕ್ಷೇತ್ರ ಈ ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಕಳೆದ ಬಾರಿ ಈ ಕ್ಷೇತ್ರ ಬಿಸಿಎಂ ಅ ವರ್ಗಕ್ಕೆ ಮೀಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>