ಪ್ರಗತಿಪರ ರೈತ ಹಿತ್ತಲಹಳ್ಳಿಗೋಪಾಲಗೌಡ ಅವರು ತಮ್ಮ ರೇಷ್ಮೆ ಅಭಿವೃದ್ಧಿಯ ಅನುಭವಗಳನ್ನು ಹಂಚಿಕೊಂಡರು. ರೇಷ್ಮೆ ರೈತ ಉತ್ಪಾದಕ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜನಾರ್ಧನಮೂರ್ತಿ ಮತ್ತು ಸಂಯೋಜಕರಾದ ವೆಂಕಟರೆಡ್ಡಿ ಗಿರಣಿ ಅವರು ರೈತ ಉತ್ಪಾದಕ ಸಂಸ್ಥೆಯ ಪರಿಕಲ್ಪನೆ, ಕಾರ್ಯಗಳು, ಪ್ರಯೋಜನಗಳನ್ನು ತಿಳಿಸಿಕೊಟ್ಟರು. ಬಂದಿದ್ದ ರೈತರು ತಮ್ಮ ಜಿಲ್ಲೆಯಲ್ಲಿಯೂ ಕಂಪೆನಿ ಪ್ರಾರಂಭಿಸುವ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.