<p><strong>ಚಿಂತಾಮಣಿ</strong>: ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ನಗರದ 24ನೇ ವಾರ್ಡ್ ನಾರಸಿಂಹಪೇಟೆಯಲ್ಲಿ ಸಾರ್ವಜನಿಕರು ನಗರಸಭೆ ಅಧಿಕಾರಿಗಳಿಗೆ ಘೇರಾವ್ ಮಾಡಿ ಪ್ರತಿಭಟಿಸಿದ ಘಟನೆ ಶುಕ್ರವಾರ ನಡೆದಿದೆ.<br /> <br /> ನಾರಸಿಂಹಪೇಟೆ ಹಾಗೂ ಸುತ್ತಮುತ್ತಲು ಕುಡಿಯುವ ನೀರಿಗಾಗಿ ಮಹಿಳೆಯರು ಪರದಾಡುವಂತಾಗಿದೆ. ಪ್ರತಿನಿತ್ಯ ನೀರಿಗಾಗಿ ನೂರಾರು ರೂಪಾಯಿ ಕೊಟ್ಟು ಟ್ಯಾಂಕರ್ಗಳ ಮೊರೆಹೋಗಬೇಕಾಗಿದೆ.<br /> <br /> ಬಡವರು ದೂರದ ಸ್ಥಳಗಳಿಂದ ನೀರು ತರಲು ದಿನದ ಎಲ್ಲ ಕೆಲಸಗಳನ್ನು ತ್ಯಜಿಸಿ ಶ್ರಮಿಸಬೇಕಾಗಿದೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ನಾಗಮ್ಮ ತಿಳಿಸಿದರು.<br /> <br /> ನಾರಸಿಂಹಪೇಟೆಯಲ್ಲಿ ಸುಮಾರು 20 ದಿನಗಳಿಂದ ಸರಿಯಾಗಿ ನೀರು ಬರುತ್ತಿಲ್ಲ. ಅನೇಕ ಬಾರಿ ನಗರಸಭೆಯ ಅಧಿಕಾರಿಗಳಿಗೆ ಮೌಖಿಕವಾಗಿ ಹಾಗೂ ಲಿಖಿತವಾಗಿ ಮನವಿ ಸಲ್ಲಿಸಲಾಗಿದೆ. 2-3 ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಸಮಸ್ಯೆ ಬಗೆಹರಿದಿಲ್ಲ ಎಂದು ನಗರಸಭೆ ಸದಸ್ಯ ಶ್ರೀನಾಥ್ ಆರೋಪಿಸಿದರು.<br /> <br /> ನಗರಸಭೆಯ ಪ್ರಭಾರಿ ಪೌರಾಯುಕ್ತ ಗಂಗಣ್ಣ ಹಾಗೂ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಸಾರ್ವಜನಿಕರು ಅವರಿಗೆ ಮುತ್ತಿಗೆ ಹಾಕಿ ಬೆವರಿಳಿಸಿದರು.<br /> <br /> ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಶೀಘ್ರವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರೂ ಪ್ರತಿಭಟನಾಕಾರರು ಪಟ್ಟು ಬಿಡದೆ ಕುಳಿತರು. ಈಗಾಗಲೇ ಹಲವಾರಿ ಬಾರಿ ಇಂಥ ಭರವಸೆ ನೀಡಿದ್ದೀರಿ. ಆದರೆ ಸಮಸ್ಯೆ ಮಾತ್ರ ಬಗೆಹರಿದಿಲ್ಲ ಎಂದು ದೂರಿದರು.<br /> <br /> ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂಬ ಖಚಿತ ಆಶ್ವಾಸನೆ ದೊರೆತ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.<br /> <br /> ಮುಖಂಡರಾದ ಮಹದೇವಾಚಾರಿ, ಮೋಹನ್, ವೀಣಾ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ನಗರದ 24ನೇ ವಾರ್ಡ್ ನಾರಸಿಂಹಪೇಟೆಯಲ್ಲಿ ಸಾರ್ವಜನಿಕರು ನಗರಸಭೆ ಅಧಿಕಾರಿಗಳಿಗೆ ಘೇರಾವ್ ಮಾಡಿ ಪ್ರತಿಭಟಿಸಿದ ಘಟನೆ ಶುಕ್ರವಾರ ನಡೆದಿದೆ.<br /> <br /> ನಾರಸಿಂಹಪೇಟೆ ಹಾಗೂ ಸುತ್ತಮುತ್ತಲು ಕುಡಿಯುವ ನೀರಿಗಾಗಿ ಮಹಿಳೆಯರು ಪರದಾಡುವಂತಾಗಿದೆ. ಪ್ರತಿನಿತ್ಯ ನೀರಿಗಾಗಿ ನೂರಾರು ರೂಪಾಯಿ ಕೊಟ್ಟು ಟ್ಯಾಂಕರ್ಗಳ ಮೊರೆಹೋಗಬೇಕಾಗಿದೆ.<br /> <br /> ಬಡವರು ದೂರದ ಸ್ಥಳಗಳಿಂದ ನೀರು ತರಲು ದಿನದ ಎಲ್ಲ ಕೆಲಸಗಳನ್ನು ತ್ಯಜಿಸಿ ಶ್ರಮಿಸಬೇಕಾಗಿದೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ನಾಗಮ್ಮ ತಿಳಿಸಿದರು.<br /> <br /> ನಾರಸಿಂಹಪೇಟೆಯಲ್ಲಿ ಸುಮಾರು 20 ದಿನಗಳಿಂದ ಸರಿಯಾಗಿ ನೀರು ಬರುತ್ತಿಲ್ಲ. ಅನೇಕ ಬಾರಿ ನಗರಸಭೆಯ ಅಧಿಕಾರಿಗಳಿಗೆ ಮೌಖಿಕವಾಗಿ ಹಾಗೂ ಲಿಖಿತವಾಗಿ ಮನವಿ ಸಲ್ಲಿಸಲಾಗಿದೆ. 2-3 ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಸಮಸ್ಯೆ ಬಗೆಹರಿದಿಲ್ಲ ಎಂದು ನಗರಸಭೆ ಸದಸ್ಯ ಶ್ರೀನಾಥ್ ಆರೋಪಿಸಿದರು.<br /> <br /> ನಗರಸಭೆಯ ಪ್ರಭಾರಿ ಪೌರಾಯುಕ್ತ ಗಂಗಣ್ಣ ಹಾಗೂ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಸಾರ್ವಜನಿಕರು ಅವರಿಗೆ ಮುತ್ತಿಗೆ ಹಾಕಿ ಬೆವರಿಳಿಸಿದರು.<br /> <br /> ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಶೀಘ್ರವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರೂ ಪ್ರತಿಭಟನಾಕಾರರು ಪಟ್ಟು ಬಿಡದೆ ಕುಳಿತರು. ಈಗಾಗಲೇ ಹಲವಾರಿ ಬಾರಿ ಇಂಥ ಭರವಸೆ ನೀಡಿದ್ದೀರಿ. ಆದರೆ ಸಮಸ್ಯೆ ಮಾತ್ರ ಬಗೆಹರಿದಿಲ್ಲ ಎಂದು ದೂರಿದರು.<br /> <br /> ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂಬ ಖಚಿತ ಆಶ್ವಾಸನೆ ದೊರೆತ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.<br /> <br /> ಮುಖಂಡರಾದ ಮಹದೇವಾಚಾರಿ, ಮೋಹನ್, ವೀಣಾ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>