<p><strong>ಚಿಂತಾಮಣಿ:</strong> ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸುವಂತೆ ಒತ್ತಾಯಿಸಿ ನಗರದ ತಪತೇಶ್ವರ ಕಾಲೊನಿ ಮತ್ತು ವಿನಾಯಕ ನಗರದ ಸ್ಥಳೀಯರು ಗುರುವಾರ ರಸ್ತೆ ತಡೆ ನಡೆಸಿದರು.<br /> <br /> ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರು ಇಲ್ಲದೆ ತಪತೇಶ್ವರ ಕಾಲೊನಿ ಮತ್ತು ವಿನಾಯಕ ನಗರದ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಅನೇಕ ಬಾರಿ ಮನವಿಗಳನ್ನು ನೀಡಿದ್ದರೂ ಪ್ರಯೋಜನವಾಗಿಲ್ಲ. ಪ್ರತಿಭಟನೆ ನಡೆಸಿದಾಗ ಕೇವಲ ಭರವಸೆಗಳನ್ನು ನೀಡುತ್ತಾರೆ ಎಂದು ಪ್ರತಿಭಟನಾಕಾರರು ಆಕ್ರೋಶದಿಂದ ಹೇಳಿದರು.<br /> <br /> ಮಹಿಳೆಯರು ಸೇರಿದಂತೆ ನೂರಾರು ಜನರು ಶ್ರೀನಿವಾಸಪುರ ಮತ್ತು ಕೋಲಾರಕ್ಕೆ ಹೋಗುವ ರಸ್ತೆಯಲ್ಲೇ ಬಿಂದಿಗೆಗಳೊಂದಿಗೆ ಕುಳಿತು ಘೋಷಣೆ ಕೂಗಿದರು.<br /> <br /> ‘ಬಹುತೇಕ ದಲಿತರು ಮತ್ತು ಅಲ್ಪಸಂಖ್ಯಾತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ ಎಂಬುದು ಮಾಯವಾಗಿದೆ. ಅಧಿಕಾರಿಗಳು, ನಗರಸಭೆ ಸದಸ್ಯರು ಗಮನ ಹರಿಸುತ್ತಿಲ್ಲ’ ಎಂದು ಪ್ರತಿಭಟನಾಕಾರರು ಟೀಕಿಸಿದರು.<br /> <br /> ರಸ್ತೆ ತಡೆಯಿಂದ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ನಗರಸಭೆಯ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ಕೇಳುವುದು ಸೂಕ್ತ, ರಸ್ತೆ ತಡೆ ನಡೆಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಮನವಿ ಮಾಡಿದರು.<br /> <br /> ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು, ನಗರಸಭೆ ಎದುರು ಹಲ ಬಾರಿ ಪ್ರತಿಭಟನೆ ನಡೆಸಲಾಗಿದೆ, ಮೌಖಿಕ, ಲಿಖಿತವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಲಾಗಿದೆ. ಅದಕ್ಕೂ ಸ್ಪಂದಿಸದ ಕಾರಣ ರಸ್ತೆ ತಡೆ ನಡೆಸುತ್ತಿರುವುದಾಗಿ ಪೊಲೀಸರಿಗೆ ಹೇಳಿದರು.<br /> <br /> ನಗರಸಭೆ ಸದಸ್ಯ ಆರ್.ಪ್ರಕಾಶ್, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ವಿಷಯ ಇಷ್ಟೊಂದು ತೀವ್ರವಾಗಿರುವುದು ಗಮನಕ್ಕೆ ಬಂದಿರಲಿಲ್ಲ. ನಾಳೆಯಿಂದಲೇ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸುವುದಾಗಿ ಎಂದು ಹೇಳಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. <br /> <br /> ಪ್ರತಿಭಟನೆಯಲ್ಲಿ ಸ್ಥಳೀಯರಾದ ಮಂಗಮ್ಮ, ವಿಜಯನರಸಿಂಹ, ಗಂಗಾಧರ, ಮರಿಯಮ್ಮ, ಮುನಿಯಪ್ಪ, ಪ್ರಕಾಶ್, ನಾಗಮ್ಮ, ರಮೇಶ್, ಮಾರಪ್ಪ, ಪದ್ಮಾವತಿ, ಯರ್ರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸುವಂತೆ ಒತ್ತಾಯಿಸಿ ನಗರದ ತಪತೇಶ್ವರ ಕಾಲೊನಿ ಮತ್ತು ವಿನಾಯಕ ನಗರದ ಸ್ಥಳೀಯರು ಗುರುವಾರ ರಸ್ತೆ ತಡೆ ನಡೆಸಿದರು.<br /> <br /> ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರು ಇಲ್ಲದೆ ತಪತೇಶ್ವರ ಕಾಲೊನಿ ಮತ್ತು ವಿನಾಯಕ ನಗರದ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಅನೇಕ ಬಾರಿ ಮನವಿಗಳನ್ನು ನೀಡಿದ್ದರೂ ಪ್ರಯೋಜನವಾಗಿಲ್ಲ. ಪ್ರತಿಭಟನೆ ನಡೆಸಿದಾಗ ಕೇವಲ ಭರವಸೆಗಳನ್ನು ನೀಡುತ್ತಾರೆ ಎಂದು ಪ್ರತಿಭಟನಾಕಾರರು ಆಕ್ರೋಶದಿಂದ ಹೇಳಿದರು.<br /> <br /> ಮಹಿಳೆಯರು ಸೇರಿದಂತೆ ನೂರಾರು ಜನರು ಶ್ರೀನಿವಾಸಪುರ ಮತ್ತು ಕೋಲಾರಕ್ಕೆ ಹೋಗುವ ರಸ್ತೆಯಲ್ಲೇ ಬಿಂದಿಗೆಗಳೊಂದಿಗೆ ಕುಳಿತು ಘೋಷಣೆ ಕೂಗಿದರು.<br /> <br /> ‘ಬಹುತೇಕ ದಲಿತರು ಮತ್ತು ಅಲ್ಪಸಂಖ್ಯಾತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ ಎಂಬುದು ಮಾಯವಾಗಿದೆ. ಅಧಿಕಾರಿಗಳು, ನಗರಸಭೆ ಸದಸ್ಯರು ಗಮನ ಹರಿಸುತ್ತಿಲ್ಲ’ ಎಂದು ಪ್ರತಿಭಟನಾಕಾರರು ಟೀಕಿಸಿದರು.<br /> <br /> ರಸ್ತೆ ತಡೆಯಿಂದ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ನಗರಸಭೆಯ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ಕೇಳುವುದು ಸೂಕ್ತ, ರಸ್ತೆ ತಡೆ ನಡೆಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಮನವಿ ಮಾಡಿದರು.<br /> <br /> ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು, ನಗರಸಭೆ ಎದುರು ಹಲ ಬಾರಿ ಪ್ರತಿಭಟನೆ ನಡೆಸಲಾಗಿದೆ, ಮೌಖಿಕ, ಲಿಖಿತವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಲಾಗಿದೆ. ಅದಕ್ಕೂ ಸ್ಪಂದಿಸದ ಕಾರಣ ರಸ್ತೆ ತಡೆ ನಡೆಸುತ್ತಿರುವುದಾಗಿ ಪೊಲೀಸರಿಗೆ ಹೇಳಿದರು.<br /> <br /> ನಗರಸಭೆ ಸದಸ್ಯ ಆರ್.ಪ್ರಕಾಶ್, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ವಿಷಯ ಇಷ್ಟೊಂದು ತೀವ್ರವಾಗಿರುವುದು ಗಮನಕ್ಕೆ ಬಂದಿರಲಿಲ್ಲ. ನಾಳೆಯಿಂದಲೇ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸುವುದಾಗಿ ಎಂದು ಹೇಳಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. <br /> <br /> ಪ್ರತಿಭಟನೆಯಲ್ಲಿ ಸ್ಥಳೀಯರಾದ ಮಂಗಮ್ಮ, ವಿಜಯನರಸಿಂಹ, ಗಂಗಾಧರ, ಮರಿಯಮ್ಮ, ಮುನಿಯಪ್ಪ, ಪ್ರಕಾಶ್, ನಾಗಮ್ಮ, ರಮೇಶ್, ಮಾರಪ್ಪ, ಪದ್ಮಾವತಿ, ಯರ್ರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>