ಹಿಂದೆ ಬಾವಿಯಲ್ಲಿ ಸದಾಕಾಲ ನೀರು ಇರುತ್ತಿತ್ತು. ಎಲ್ಲರಿಗೂ ಈಜು ಕೊಳವಾಗಿತ್ತು. ಒಂದೆಡೆ ವಿಶಾಲ ಅರಳಿಕಟ್ಟೆಯಿದ್ದರೆ ಮತ್ತೊಂದೆಡೆ ಶಿವ ವಿಷ್ಣು ಸಂಗಮದ ದೇವಾಲಯವಿದೆ. ಇಲ್ಲಿ ಶ್ರೀಕಂಠೇಶ್ವರ ಮತ್ತು ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿವೆ. ಗಣಪತಿ, ಸೂರ್ಯ ನಾರಾಯಣಸ್ವಾಮಿ, ಸುಬ್ರಮಣ್ಯಸ್ವಾಮಿ, ಗಿರಿಜಾಂಬಾ, ಚನ್ನಕೇಶವಸ್ವಾಮಿ, ವೀರಾಂಜನೇಯ ದೇವರಿವೆ. ಅಪರೂಪದ ಕೆತ್ತನೆಗಳುಳ್ಳ ಕಂಬಗಳಿವೆ.