<p>ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ವಿವಿಧ ಸಂಘ, ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿವೆಯಾದರೂ ಯಾವಾಗ ಫಲ ದೊರೆಯುತ್ತದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡುತ್ತಿದೆ. <br /> `ಶಾಶ್ವತ ನೀರಾವರಿ ಹೋರಾಟ ಹೀಗೆ ದಿಢೀರನೇ ಆರಂಭಗೊಳ್ಳುತ್ತದೆ ಎಂಬುದರ ಬಗ್ಗೆ ನಿರೀಕ್ಷೆ ಇರಲಿಲ್ಲ. <br /> <br /> ಅಂತರ್ಜಲ ಮರುಪೂರಣ, ಕೆರೆ-ಕಾಲುವೆಗಳ ಒತ್ತುವರಿ, ಶಾಶ್ವತ ನೀರಾವರಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೋರಾಟ ಆರಂಭಿಸಿದ್ದೆವು. ಆದರೆ ಈಗ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನ ಮತ್ತು ರಾಜ್ಯ ಸರ್ಕಾರದ ಮಟ್ಟದಲ್ಲಿ ಆಗುತ್ತಿರುವ ಬೆಳವಣಿಗೆಗಳು ಕಂಡರೆ ಆತಂಕವಾಗುತ್ತದೆ~ ಎಂದು ಹೋರಾಟ ಸಮಿತಿ ಸದಸ್ಯರು ತಿಳಿಸಿದರು.<br /> <br /> `ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುವ ಸಚಿವರು ಮತ್ತು ಜನಪ್ರತಿನಿಧಿಗಳು ಎಲ್ಲ ಹೊಣೆಯನ್ನು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಮೇಲೆ ಹಾಕುತ್ತಾರೆ. ಅವರೊಂದಿಗೆ ಚರ್ಚಿಸಿರುವುದಾಗಿ ಹೇಳುತ್ತಾರೆ. <br /> <br /> ಆದರೆ ಯೋಜನೆಗೆ ಸಂಬಂಧಿಸಿದಂತೆ ಬಸವರಾಜ ಬೊಮ್ಮಾಯಿ ಯಾವುದೇ ವಿಷಯವನ್ನು ಪ್ರಸ್ತಾಪಿಸದೆ ಮೌನವಾಗಿದ್ದಾರೆ. ಅಕ್ಟೋಬರ್ 31ರೊಳಗೆ ಜಿಲ್ಲೆಗೆ ಭೇಟಿ ನೀಡಬೇಕೆಂದು ನಾವು ಆಗ್ರಹಿಸಿದರೂ ಅವರು ಸ್ಪಂದಿಸಲಿಲ್ಲ~ ಎಂದು ಹೇಳಿದರು. <br /> <br /> `ಚಿಕ್ಕಬಳ್ಳಾಪುರಕ್ಕೆ ಇತ್ತೀಚೆಗೆ ಭೇಟಿ ನೀಡಿದ ಕೇಂದ್ರ ಸಚಿವ ವೀರಪ್ಪ ಮೊಯಿಲಿಯವರು ಡಿಸೆಂಬರ್ನಲ್ಲಿ ನಂದಿ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದರು. <br /> <br /> ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಅದೇ ಯೋಜನೆಗೆ ಜನವರಿಯಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎ.ನಾರಾಯಣಸ್ವಾಮಿಯವರು ಫೆಬ್ರುವರಿಯಲ್ಲಿ ಯೋಜನೆ ಆರಂಭ ಎಂದಿದ್ದರು. <br /> <br /> ಮೂವರು ಎತ್ತಿನಹೊಳೆ ಯೋಜನೆಗೆ ಆದ್ಯತೆ ನೀಡಿದರೆ ಹೊರತು ಪರಮಶಿವಯ್ಯ ವರದಿಯಾಧಾರಿತ ಶಾಶ್ವತ ನೀರಾವರಿ ಯೋಜನೆ ಬಗ್ಗೆ ನಿಖರ ಭರವಸೆ ನೀಡಲಿಲ್ಲ. ಹೀಗಿರುವಾಗ, ಶಾಶ್ವತ ನೀರಾವರಿ ಯೋಜನೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವಾಗ ಕ್ರಮ ತೆಗೆದುಕೊಳ್ಳುತ್ತದೆ~ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ವಿವಿಧ ಸಂಘ, ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿವೆಯಾದರೂ ಯಾವಾಗ ಫಲ ದೊರೆಯುತ್ತದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡುತ್ತಿದೆ. <br /> `ಶಾಶ್ವತ ನೀರಾವರಿ ಹೋರಾಟ ಹೀಗೆ ದಿಢೀರನೇ ಆರಂಭಗೊಳ್ಳುತ್ತದೆ ಎಂಬುದರ ಬಗ್ಗೆ ನಿರೀಕ್ಷೆ ಇರಲಿಲ್ಲ. <br /> <br /> ಅಂತರ್ಜಲ ಮರುಪೂರಣ, ಕೆರೆ-ಕಾಲುವೆಗಳ ಒತ್ತುವರಿ, ಶಾಶ್ವತ ನೀರಾವರಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೋರಾಟ ಆರಂಭಿಸಿದ್ದೆವು. ಆದರೆ ಈಗ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನ ಮತ್ತು ರಾಜ್ಯ ಸರ್ಕಾರದ ಮಟ್ಟದಲ್ಲಿ ಆಗುತ್ತಿರುವ ಬೆಳವಣಿಗೆಗಳು ಕಂಡರೆ ಆತಂಕವಾಗುತ್ತದೆ~ ಎಂದು ಹೋರಾಟ ಸಮಿತಿ ಸದಸ್ಯರು ತಿಳಿಸಿದರು.<br /> <br /> `ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುವ ಸಚಿವರು ಮತ್ತು ಜನಪ್ರತಿನಿಧಿಗಳು ಎಲ್ಲ ಹೊಣೆಯನ್ನು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಮೇಲೆ ಹಾಕುತ್ತಾರೆ. ಅವರೊಂದಿಗೆ ಚರ್ಚಿಸಿರುವುದಾಗಿ ಹೇಳುತ್ತಾರೆ. <br /> <br /> ಆದರೆ ಯೋಜನೆಗೆ ಸಂಬಂಧಿಸಿದಂತೆ ಬಸವರಾಜ ಬೊಮ್ಮಾಯಿ ಯಾವುದೇ ವಿಷಯವನ್ನು ಪ್ರಸ್ತಾಪಿಸದೆ ಮೌನವಾಗಿದ್ದಾರೆ. ಅಕ್ಟೋಬರ್ 31ರೊಳಗೆ ಜಿಲ್ಲೆಗೆ ಭೇಟಿ ನೀಡಬೇಕೆಂದು ನಾವು ಆಗ್ರಹಿಸಿದರೂ ಅವರು ಸ್ಪಂದಿಸಲಿಲ್ಲ~ ಎಂದು ಹೇಳಿದರು. <br /> <br /> `ಚಿಕ್ಕಬಳ್ಳಾಪುರಕ್ಕೆ ಇತ್ತೀಚೆಗೆ ಭೇಟಿ ನೀಡಿದ ಕೇಂದ್ರ ಸಚಿವ ವೀರಪ್ಪ ಮೊಯಿಲಿಯವರು ಡಿಸೆಂಬರ್ನಲ್ಲಿ ನಂದಿ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದರು. <br /> <br /> ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಅದೇ ಯೋಜನೆಗೆ ಜನವರಿಯಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎ.ನಾರಾಯಣಸ್ವಾಮಿಯವರು ಫೆಬ್ರುವರಿಯಲ್ಲಿ ಯೋಜನೆ ಆರಂಭ ಎಂದಿದ್ದರು. <br /> <br /> ಮೂವರು ಎತ್ತಿನಹೊಳೆ ಯೋಜನೆಗೆ ಆದ್ಯತೆ ನೀಡಿದರೆ ಹೊರತು ಪರಮಶಿವಯ್ಯ ವರದಿಯಾಧಾರಿತ ಶಾಶ್ವತ ನೀರಾವರಿ ಯೋಜನೆ ಬಗ್ಗೆ ನಿಖರ ಭರವಸೆ ನೀಡಲಿಲ್ಲ. ಹೀಗಿರುವಾಗ, ಶಾಶ್ವತ ನೀರಾವರಿ ಯೋಜನೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವಾಗ ಕ್ರಮ ತೆಗೆದುಕೊಳ್ಳುತ್ತದೆ~ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>