<p><strong>ಚಿಕ್ಕಬಳ್ಳಾಪುರ:</strong> ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಮುಖಂಡರು, ಕಾರ್ಯಕರ್ತರು ಮತ್ತು ರೈತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ರಸಗೊಬ್ಬರ ಬೆಲೆ ಏರಿಕೆ, ರೇಷ್ಮೆ ಮೇಲಿನ ಆಮದು ಸುಂಕ ಸೇರಿದಂತೆ ವಿವಿಧ ವಿಷಯಗಳ ಕುರಿತು ಕೇಂದ್ರ ಸರ್ಕಾರ ತಳೆದಿರುವ ಧೋರಣೆ ರೈತ ವಿರೋಧಿಯಾಗಿದೆ. ರೈತರನ್ನು ರಕ್ಷಿಸಬೇಕಾದ ಸರ್ಕಾರ ರೈತ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಬ್ಯಾಲಹಳ್ಳಿ ಆಂಜನೇಯರೆಡ್ಡಿ ಮಾತನಾಡಿ, `ಮಳೆಗಾಲ ಆರಂಭವಾಗಿದ್ದು, ರಸಗೊಬ್ಬರಕ್ಕೆ ಹೆಚ್ಚು ಬೇಡಿಕೆ ಇದೆ. ಈ ಅಂಶ ತಿಳಿದಿದ್ದರೂ ಕೇಂದ್ರ ಸರ್ಕಾರ ಏಕಾಏಕಿ ರಸಗೊಬ್ಬರದ ಬೆಲೆಯನ್ನು 200 ರಿಂದ 250 ರೂಪಾಯಿಗಳವರೆಗೆ ಏರಿಸಿದೆ. ಇದರಿಂದ ರೈತರಿಗೆ ಕೃಷಿ ಚಟುವಟಿಕೆ ಕೈಗೊಳ್ಳಲು ತೊಂದರೆಯಾಗಿದೆ~ ಎಂದರು.<br /> <br /> `ಲಕ್ಷಾಂತರ ಮಂದಿ ರೇಷ್ಮೆ ಉದ್ಯಮದ ಮೇಲೆ ಅವಲಂಬಿಸಿದ್ದು, ರೇಷ್ಮೆ ಆಮದು ಸುಂಕವನ್ನು ಕಡಿತಗೊಳಿಸಿದ್ದರಿಂದ ರೇಷ್ಮೆ ಕೃಷಿಕರು ತೊಂದರೆ ಅನುಭವಿಸುತ್ತಿದ್ದಾರೆ. ರೂ. 350 ಇದ್ದ ಒಂದು ಕೆಜಿ ರೇಷ್ಮೆಗೂಡಿನ ಬೆಲೆ ಈಗ ರೂ. 120ಕ್ಕೆ ಕುಸಿದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.<br /> <br /> ರೇಷ್ಮೆ ಆಮದು ಸುಂಕವನ್ನು ಹೆಚ್ಚಿಸಬೇಕು, ಸ್ಥಳೀಯವಾಗಿ ಬೆಳೆಯುವ ರೇಷ್ಮೆಗೆ ಹೆಚ್ಚಿನ ಬೆಲೆ ನೀಡಬೇಕು, ಕೃಷಿಕರು ಬಳಸುವ ಟ್ರಾಕ್ಟರ್ಗಳಿಗೆ ಡೀಸೆಲ್ ರಿಯಾಯಿತಿ ದರದಲ್ಲಿ ಸಿಗುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.<br /> <br /> ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರರೆಡ್ಡಿ, ಪದಾಧಿಕಾರಿಗಳಾದ ಶ್ರೀನಿವಾಸಗೌಡ, ಜಯರಾಮರೆಡ್ಡಿ, ಎ.ವಿ.ಬೈರೇಗೌಡ, ಪ್ರೇಮಲೀಲಾ, ಸುಜಾತ ಭೂಷಣ್, ನಾಗಭೂಷಣ್, ಕೆ.ನಾರಾಯಣಪ್ಪ, ಕೃಷ್ಣ, ನಂಜಪ್ಪ, ಶ್ರೀನಿವಾಸರೆಡ್ಡಿ, ಲಕ್ಷಿನಾರಾಯಣಗುಪ್ತ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಮುಖಂಡರು, ಕಾರ್ಯಕರ್ತರು ಮತ್ತು ರೈತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ರಸಗೊಬ್ಬರ ಬೆಲೆ ಏರಿಕೆ, ರೇಷ್ಮೆ ಮೇಲಿನ ಆಮದು ಸುಂಕ ಸೇರಿದಂತೆ ವಿವಿಧ ವಿಷಯಗಳ ಕುರಿತು ಕೇಂದ್ರ ಸರ್ಕಾರ ತಳೆದಿರುವ ಧೋರಣೆ ರೈತ ವಿರೋಧಿಯಾಗಿದೆ. ರೈತರನ್ನು ರಕ್ಷಿಸಬೇಕಾದ ಸರ್ಕಾರ ರೈತ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಬ್ಯಾಲಹಳ್ಳಿ ಆಂಜನೇಯರೆಡ್ಡಿ ಮಾತನಾಡಿ, `ಮಳೆಗಾಲ ಆರಂಭವಾಗಿದ್ದು, ರಸಗೊಬ್ಬರಕ್ಕೆ ಹೆಚ್ಚು ಬೇಡಿಕೆ ಇದೆ. ಈ ಅಂಶ ತಿಳಿದಿದ್ದರೂ ಕೇಂದ್ರ ಸರ್ಕಾರ ಏಕಾಏಕಿ ರಸಗೊಬ್ಬರದ ಬೆಲೆಯನ್ನು 200 ರಿಂದ 250 ರೂಪಾಯಿಗಳವರೆಗೆ ಏರಿಸಿದೆ. ಇದರಿಂದ ರೈತರಿಗೆ ಕೃಷಿ ಚಟುವಟಿಕೆ ಕೈಗೊಳ್ಳಲು ತೊಂದರೆಯಾಗಿದೆ~ ಎಂದರು.<br /> <br /> `ಲಕ್ಷಾಂತರ ಮಂದಿ ರೇಷ್ಮೆ ಉದ್ಯಮದ ಮೇಲೆ ಅವಲಂಬಿಸಿದ್ದು, ರೇಷ್ಮೆ ಆಮದು ಸುಂಕವನ್ನು ಕಡಿತಗೊಳಿಸಿದ್ದರಿಂದ ರೇಷ್ಮೆ ಕೃಷಿಕರು ತೊಂದರೆ ಅನುಭವಿಸುತ್ತಿದ್ದಾರೆ. ರೂ. 350 ಇದ್ದ ಒಂದು ಕೆಜಿ ರೇಷ್ಮೆಗೂಡಿನ ಬೆಲೆ ಈಗ ರೂ. 120ಕ್ಕೆ ಕುಸಿದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.<br /> <br /> ರೇಷ್ಮೆ ಆಮದು ಸುಂಕವನ್ನು ಹೆಚ್ಚಿಸಬೇಕು, ಸ್ಥಳೀಯವಾಗಿ ಬೆಳೆಯುವ ರೇಷ್ಮೆಗೆ ಹೆಚ್ಚಿನ ಬೆಲೆ ನೀಡಬೇಕು, ಕೃಷಿಕರು ಬಳಸುವ ಟ್ರಾಕ್ಟರ್ಗಳಿಗೆ ಡೀಸೆಲ್ ರಿಯಾಯಿತಿ ದರದಲ್ಲಿ ಸಿಗುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.<br /> <br /> ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರರೆಡ್ಡಿ, ಪದಾಧಿಕಾರಿಗಳಾದ ಶ್ರೀನಿವಾಸಗೌಡ, ಜಯರಾಮರೆಡ್ಡಿ, ಎ.ವಿ.ಬೈರೇಗೌಡ, ಪ್ರೇಮಲೀಲಾ, ಸುಜಾತ ಭೂಷಣ್, ನಾಗಭೂಷಣ್, ಕೆ.ನಾರಾಯಣಪ್ಪ, ಕೃಷ್ಣ, ನಂಜಪ್ಪ, ಶ್ರೀನಿವಾಸರೆಡ್ಡಿ, ಲಕ್ಷಿನಾರಾಯಣಗುಪ್ತ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>