<p><strong>ಚಿಂತಾಮಣಿ: </strong>ನಗರದ ಕನಂಪಲ್ಲಿಯಲ್ಲಿ ಇರುವ ಶಿಕ್ಷಕ ವೆಂಕಟರಮಣ ನಾಯಕ ನಿವಾಸದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ವೇದಿಕೆ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮನೆಗೊಂದು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಉಭಯ ಜಿಲ್ಲೆಗಳ ವಿವಿಧೆಡೆಯಿಂದ ಬಂದಿದ್ದ ಸಾಹಿತಿಗಳು ಹಾಗೂ ಗಾನ ಕಲಾವಿದರು ಪಾಲ್ಗೊಂಡಿದ್ದರು.<br /> <br /> ಕನ್ನಡ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಕಾಗತಿ ವೆಂಕಟರತ್ನಂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸುಮಾರು ಒಂದೂವರೆ ದಶಕದಿಂದ ನಿರಂತರವಾಗಿ ನಡೆದು ಬರುತ್ತಿರುವ ಮನೆಗೊಂದು ಕವಿಗೋಷ್ಠಿ ಕಾರ್ಯಕ್ರಮವು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ವೆಂಕಟರಮಣನಾಯಕ, ಜನ ಸಾಮಾನ್ಯರಿಗೆ ಅರ್ಥವಾಗುವಂತಹ ಹಾಗೂ ಜನರ ನೋವು-ನಲಿವುಗಳಿಗೆ ಸ್ಪಂದಿಸುವಂತಹ ಸಾಹಿತ್ಯವು ರಚನೆಯಾಗಬೇಕು. ಮನೆಗೊಂದು ಕವಿಗೋಷ್ಠಿಯು ಮನೆ-ಮನಗಳಲ್ಲಿ ಕಾವ್ಯದ ಕಂಪನ್ನು ಬೀರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. <br /> <br /> ಕವಿಗೋಷ್ಠಿಯಲ್ಲಿ ಕೋಲಾರದ ಪಾಪೇಗೌಡ, ಸುನೀತಾ, ಅಶೋಕ್ಕುಮಾರ್, ಎ.ಹನುಮಂತಯ್ಯ, ವಿ.ನಾರಾಯಣರೆಡ್ಡಿ, ಅಕ್ಕಿಮಂಗಲ ಮಂಜುನಾಥ್, ವಿ.ವೆಂಕಟರತ್ನಂ, ರಾಯಲ್ ಶಿ.ಮ.ಮಂಜುನಾಥ್, ಕೆ.ಎಸ್.ನೂರುಲ್ಲಾ, ಎಸ್. ಸಿ.ನರಸಿಂಹಪ್ಪ ಮತ್ತಿತರರು ಸ್ವ-ರಚಿತ ಕವನ ಹಾಗೂ ಚುಟುಕುಗಳನ್ನು ವಾಚಿಸಿದರು. <br /> <br /> ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ದೇವರ ಮಳ್ಳೂರು ಮಹೇಶ್ ಕುಮಾರ್, ಸೀಕಲ್ ನರಸಿಂಹಪ್ಪ, ಆರೋಗ್ಯ ಇಲಾಖೆಯ ಗೌರಮ್ಮ, ಡಿ.ಎ.ಮಂಜುನಾಥ್, ರವಿ, ಸ್ವಾರಪ್ಪಲ್ಲಿ ಚಂದ್ರಶೇಖರ್, ನವಾಜ್, ರಾಜೇಶ್, ವಂದನಾ, ಮುಂತಾದವರು ಗೀಗೀ ಪದ, ಜಾನಪದ ಗೀತೆ ಹಾಗೂ ಭಾವಗೀತೆಗಳನ್ನು ಹಾಡಿದರು. <br /> <br /> ಹಾಸ್ಯ ಕಲಾವಿದ ಮುಳ್ಳಹಳ್ಳಿ ನಂಜುಂಡೇಗೌಡರು ಹಾಸ್ಯ ಚಟಾಕಿಗಳನ್ನು ಹಾರಿಸಿ ರಂಜಿಸಿದರು. ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡಿ ಪ್ರೋತ್ಸಾಹಿಸುತ್ತಿರುವ ನಗರದ ವೆಂಕಟಗಿರಿಕೋಟೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಿ.ನಾರಾಯಣರೆಡ್ಡಿಯನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ನಗರದ ಕನಂಪಲ್ಲಿಯಲ್ಲಿ ಇರುವ ಶಿಕ್ಷಕ ವೆಂಕಟರಮಣ ನಾಯಕ ನಿವಾಸದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ವೇದಿಕೆ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮನೆಗೊಂದು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಉಭಯ ಜಿಲ್ಲೆಗಳ ವಿವಿಧೆಡೆಯಿಂದ ಬಂದಿದ್ದ ಸಾಹಿತಿಗಳು ಹಾಗೂ ಗಾನ ಕಲಾವಿದರು ಪಾಲ್ಗೊಂಡಿದ್ದರು.<br /> <br /> ಕನ್ನಡ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಕಾಗತಿ ವೆಂಕಟರತ್ನಂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸುಮಾರು ಒಂದೂವರೆ ದಶಕದಿಂದ ನಿರಂತರವಾಗಿ ನಡೆದು ಬರುತ್ತಿರುವ ಮನೆಗೊಂದು ಕವಿಗೋಷ್ಠಿ ಕಾರ್ಯಕ್ರಮವು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ವೆಂಕಟರಮಣನಾಯಕ, ಜನ ಸಾಮಾನ್ಯರಿಗೆ ಅರ್ಥವಾಗುವಂತಹ ಹಾಗೂ ಜನರ ನೋವು-ನಲಿವುಗಳಿಗೆ ಸ್ಪಂದಿಸುವಂತಹ ಸಾಹಿತ್ಯವು ರಚನೆಯಾಗಬೇಕು. ಮನೆಗೊಂದು ಕವಿಗೋಷ್ಠಿಯು ಮನೆ-ಮನಗಳಲ್ಲಿ ಕಾವ್ಯದ ಕಂಪನ್ನು ಬೀರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. <br /> <br /> ಕವಿಗೋಷ್ಠಿಯಲ್ಲಿ ಕೋಲಾರದ ಪಾಪೇಗೌಡ, ಸುನೀತಾ, ಅಶೋಕ್ಕುಮಾರ್, ಎ.ಹನುಮಂತಯ್ಯ, ವಿ.ನಾರಾಯಣರೆಡ್ಡಿ, ಅಕ್ಕಿಮಂಗಲ ಮಂಜುನಾಥ್, ವಿ.ವೆಂಕಟರತ್ನಂ, ರಾಯಲ್ ಶಿ.ಮ.ಮಂಜುನಾಥ್, ಕೆ.ಎಸ್.ನೂರುಲ್ಲಾ, ಎಸ್. ಸಿ.ನರಸಿಂಹಪ್ಪ ಮತ್ತಿತರರು ಸ್ವ-ರಚಿತ ಕವನ ಹಾಗೂ ಚುಟುಕುಗಳನ್ನು ವಾಚಿಸಿದರು. <br /> <br /> ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ದೇವರ ಮಳ್ಳೂರು ಮಹೇಶ್ ಕುಮಾರ್, ಸೀಕಲ್ ನರಸಿಂಹಪ್ಪ, ಆರೋಗ್ಯ ಇಲಾಖೆಯ ಗೌರಮ್ಮ, ಡಿ.ಎ.ಮಂಜುನಾಥ್, ರವಿ, ಸ್ವಾರಪ್ಪಲ್ಲಿ ಚಂದ್ರಶೇಖರ್, ನವಾಜ್, ರಾಜೇಶ್, ವಂದನಾ, ಮುಂತಾದವರು ಗೀಗೀ ಪದ, ಜಾನಪದ ಗೀತೆ ಹಾಗೂ ಭಾವಗೀತೆಗಳನ್ನು ಹಾಡಿದರು. <br /> <br /> ಹಾಸ್ಯ ಕಲಾವಿದ ಮುಳ್ಳಹಳ್ಳಿ ನಂಜುಂಡೇಗೌಡರು ಹಾಸ್ಯ ಚಟಾಕಿಗಳನ್ನು ಹಾರಿಸಿ ರಂಜಿಸಿದರು. ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡಿ ಪ್ರೋತ್ಸಾಹಿಸುತ್ತಿರುವ ನಗರದ ವೆಂಕಟಗಿರಿಕೋಟೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಿ.ನಾರಾಯಣರೆಡ್ಡಿಯನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>