‘ಮುಗ್ಧ ರೈತರು ತಮ್ಮ ಸಾಲ ಮನ್ನಾ ಆಗುತ್ತದೆ ಎಂಬ ನಂಬಿಕೆಯಿಂದ ಜೆರಾಕ್ಸ್ ಅಂಗಡಿಗಳಲ್ಲಿ ಹಣ ಕೊಟ್ಟು ಅರ್ಜಿ ಪಡೆದು ಭರ್ತಿ ಮಾಡಿ, ಅದಕ್ಕೆ ಪಹಣಿ, ಆಧಾರ್ ನಕಲುಗಳನ್ನು ಲಗತ್ತಿಸಿ, ತಾಲ್ಲೂಕು ಕಚೇರಿಗೆ ಸಲ್ಲಿಸಲು ಅಲೆದಾಡುತ್ತಿದ್ದಾರೆ. ಈ ಸಂದರ್ಭವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಜೆರಾಕ್ಸ್ ಅಂಗಡಿ ಮಾಲೀಕರು ಅರ್ಜಿ ಮುದ್ರಿಸಿ ಮಾರಾಟ ಮಾಡಿ ರೈತರಿಗೆ ವಂಚಿಸುತ್ತಿದ್ದಾರೆ. ಈ ಬಗ್ಗೆ ಕೆಲವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ’ ಎಂದು ಹೇಳಿದರು.