<p><strong>ಬಾಗೇಪಲ್ಲಿ:</strong> ಅಂಬೇಡ್ಕರ್ ಆಶಯದಂತೆ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ಸಿಗಬೇಕು ಎಂದು ಬಿಎಸ್ಆರ್ ಪಕ್ಷದ ತಾಲ್ಲೂಕು ಮುಖಂಡ ಎಸ್ಎಂಟಿಸಿ ಲಕ್ಷ್ಮೀನಾರಾಯಣ ತಿಳಿಸಿದರು.<br /> <br /> ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ರಸ್ತೆಯಲ್ಲಿ ಕನ್ನಡ ಸೇನೆ-ಕರ್ನಾಟಕ ತಾಲ್ಲೂಕು ಘಟಕ ಗುರುವಾರ ಆಯೋಜಿಸಿದ್ದ ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಮಾತನಾಡಿ, `ಸ್ವಾತಂತ್ರ್ಯ ಪಡೆದು 64 ವರ್ಷಗಳು ಕಳೆದರೂ ದಲಿತ ಹಾಗೂ ಹಿಂದುಳಿದ ಕೇರಿಗಳು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಬಡ ಕೃಷಿ-ಕೂಲಿ-ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದೆ. <br /> <br /> ಗ್ರಾಮಾಂತರ ಪ್ರದೇಶಗಳಲ್ಲಿ ಬರದ ಛಾಯೆ ಆವರಿಸಿದೆ. ಸ್ವಾತಂತ್ರ್ಯ, ಸಮಾನತೆ ಹಾಗೂ ಹಕ್ಕುಗಳಿಗೆ ಜನತೆ ಹೋರಾಟ ನಡೆಸಬೇಕಾಗಿದೆ~ ಎಂದರು.ಕನ್ನಡ ಸೇನೆ-ಕರ್ನಾಟಕ ತಾಲ್ಲೂಕು ಅಧ್ಯಕ್ಷ ಬಾಬಾಜಾನ್, ದೇಶದಲ್ಲಿ ಅಸ್ಪೃಶ್ಯತೆ, ಬಡತನ ಹಾಗೂ ನಿರುದ್ಯೋಗ ತಾಂಡವವಾಡುತ್ತಿದೆ. ಊಟಕ್ಕಿಲ್ಲದೆ ನರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. <br /> <br /> ಕೆಲವರ ಐಷಾರಾಮಿ ಜೀವನದಿಂದ ದೇಶದ ಏಕತೆ, ಸಮಗ್ರತೆಗೆ ಧಕ್ಕೆಯುಂಟಾಗಿದೆ. ಸ್ವಾತಂತ್ರ್ಯಕ್ಕೆ ಹೋರಾಡಿದ ನಾಯಕರ ಕನಸು ನನಸಾಗಲು ಯುವಶಕ್ತಿ ಮುಂದಾಗಬೇಕು ಎಂದರು. <br /> <br /> ಬಿಎಸ್ಆರ್ ಪಕ್ಷದ ತಾಲ್ಲೂಕು ಮುಖಂಡ ಎಸ್ಎಂಟಿಸಿ ಲಕ್ಷ್ಮೀನಾರಾಯಣ ಅನ್ನದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಎಸ್ಆರ್ ಪಕ್ಷ ಯುವ ಮುಖಂಡ ವೆಂಕಟರವಣಪ್ಪ(ಸಮರ), ಮುಖಂಡ ಮಧುರಾಜ, ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಶಿವಪ್ಪ, ಕನ್ನಡ ಸೇನೆ-ಕರ್ನಾಟಕ ಮುಖಂಡರಾದ ಗೌತಮ್, ಬಾಲಾಜಿ, ವೆಂಕಟರವಣಪ್ಪ, ರಾಮಾಂಜಿ, ವೇಣು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> ಅಂಬೇಡ್ಕರ್ ಆಶಯದಂತೆ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ಸಿಗಬೇಕು ಎಂದು ಬಿಎಸ್ಆರ್ ಪಕ್ಷದ ತಾಲ್ಲೂಕು ಮುಖಂಡ ಎಸ್ಎಂಟಿಸಿ ಲಕ್ಷ್ಮೀನಾರಾಯಣ ತಿಳಿಸಿದರು.<br /> <br /> ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ರಸ್ತೆಯಲ್ಲಿ ಕನ್ನಡ ಸೇನೆ-ಕರ್ನಾಟಕ ತಾಲ್ಲೂಕು ಘಟಕ ಗುರುವಾರ ಆಯೋಜಿಸಿದ್ದ ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಮಾತನಾಡಿ, `ಸ್ವಾತಂತ್ರ್ಯ ಪಡೆದು 64 ವರ್ಷಗಳು ಕಳೆದರೂ ದಲಿತ ಹಾಗೂ ಹಿಂದುಳಿದ ಕೇರಿಗಳು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಬಡ ಕೃಷಿ-ಕೂಲಿ-ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದೆ. <br /> <br /> ಗ್ರಾಮಾಂತರ ಪ್ರದೇಶಗಳಲ್ಲಿ ಬರದ ಛಾಯೆ ಆವರಿಸಿದೆ. ಸ್ವಾತಂತ್ರ್ಯ, ಸಮಾನತೆ ಹಾಗೂ ಹಕ್ಕುಗಳಿಗೆ ಜನತೆ ಹೋರಾಟ ನಡೆಸಬೇಕಾಗಿದೆ~ ಎಂದರು.ಕನ್ನಡ ಸೇನೆ-ಕರ್ನಾಟಕ ತಾಲ್ಲೂಕು ಅಧ್ಯಕ್ಷ ಬಾಬಾಜಾನ್, ದೇಶದಲ್ಲಿ ಅಸ್ಪೃಶ್ಯತೆ, ಬಡತನ ಹಾಗೂ ನಿರುದ್ಯೋಗ ತಾಂಡವವಾಡುತ್ತಿದೆ. ಊಟಕ್ಕಿಲ್ಲದೆ ನರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. <br /> <br /> ಕೆಲವರ ಐಷಾರಾಮಿ ಜೀವನದಿಂದ ದೇಶದ ಏಕತೆ, ಸಮಗ್ರತೆಗೆ ಧಕ್ಕೆಯುಂಟಾಗಿದೆ. ಸ್ವಾತಂತ್ರ್ಯಕ್ಕೆ ಹೋರಾಡಿದ ನಾಯಕರ ಕನಸು ನನಸಾಗಲು ಯುವಶಕ್ತಿ ಮುಂದಾಗಬೇಕು ಎಂದರು. <br /> <br /> ಬಿಎಸ್ಆರ್ ಪಕ್ಷದ ತಾಲ್ಲೂಕು ಮುಖಂಡ ಎಸ್ಎಂಟಿಸಿ ಲಕ್ಷ್ಮೀನಾರಾಯಣ ಅನ್ನದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಎಸ್ಆರ್ ಪಕ್ಷ ಯುವ ಮುಖಂಡ ವೆಂಕಟರವಣಪ್ಪ(ಸಮರ), ಮುಖಂಡ ಮಧುರಾಜ, ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಶಿವಪ್ಪ, ಕನ್ನಡ ಸೇನೆ-ಕರ್ನಾಟಕ ಮುಖಂಡರಾದ ಗೌತಮ್, ಬಾಲಾಜಿ, ವೆಂಕಟರವಣಪ್ಪ, ರಾಮಾಂಜಿ, ವೇಣು ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>